AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26/11ರ ಮುಂಬೈ ಉಗ್ರದಾಳಿಯ ವೇಳೆ ದಿಟ್ಟತನದಿಂದ ಹೋರಾಡಿದ್ದ ಎನ್​ಎಸ್​ಜಿ ಮುಖ್ಯಸ್ಥ ಜೆಕೆ ದತ್ತ ಕೊರೊನಾದಿಂದ ಸಾವು

ದೆಹಲಿ: 26/11 ರ ಮುಂಬೈ ಉಗ್ರದಾಳಿ ಸಂದರ್ಭದಲ್ಲಿ ಧೈರ್ಯದಿಂದ ಹೋರಾಡಿದ್ದ, ಆ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತಾ ದಳ (ಎನ್​​ಎಸ್​ಜಿ)ದ ಮುಖ್ಯಸ್ಥರಾಗಿದ್ದ ಜೆಕೆ ದತ್ತ ಅವರು ಇಂದು ಕೊವಿಡ್​ 19ನಿಂದ ಮೃತರಾಗಿದ್ದಾರೆ. ದತ್ತ ಅವರಿಗೆ 72 ವರ್ಷವಾಗಿತ್ತು. ಕೊವಿಡ್​ 19 ಸೋಂಕಿತರಾಗಿದ್ದ ಜೆಕೆ ದತ್ತ ಅವರನ್ನು ಗುರ್​ಗಾಂವ್​​ನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. 2008ರಲ್ಲಿ ಮುಂಬೈನ ಹೋಟೆಲ್​ಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾಗ, ಭಯೋತ್ಪಾದಕರನ್ನು ಹಿಮ್ಮೆಟ್ಟಿಸಲು ನಡೆಸಲಾಗಿದ್ದ ಆಪರೇಶನ್​ ಬ್ಲ್ಯಾಕ್​ ಕಮಾಂಡೋ ಆ್ಯಂಟಿ-ಟೆರರ್​ ಕಾರ್ಯಾಚರಣೆಯನ್ನು ಮುನ್ನಡೆಸಿದ್ದರು. ಇಂದು ಮಧ್ಯಾಹ್ನ 3.30ರ […]

26/11ರ ಮುಂಬೈ ಉಗ್ರದಾಳಿಯ ವೇಳೆ ದಿಟ್ಟತನದಿಂದ ಹೋರಾಡಿದ್ದ ಎನ್​ಎಸ್​ಜಿ ಮುಖ್ಯಸ್ಥ ಜೆಕೆ ದತ್ತ ಕೊರೊನಾದಿಂದ ಸಾವು
ಜೆಕೆ ದತ್ತ
Lakshmi Hegde
|

Updated on:May 19, 2021 | 10:16 PM

Share

ದೆಹಲಿ: 26/11 ರ ಮುಂಬೈ ಉಗ್ರದಾಳಿ ಸಂದರ್ಭದಲ್ಲಿ ಧೈರ್ಯದಿಂದ ಹೋರಾಡಿದ್ದ, ಆ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತಾ ದಳ (ಎನ್​​ಎಸ್​ಜಿ)ದ ಮುಖ್ಯಸ್ಥರಾಗಿದ್ದ ಜೆಕೆ ದತ್ತ ಅವರು ಇಂದು ಕೊವಿಡ್​ 19ನಿಂದ ಮೃತರಾಗಿದ್ದಾರೆ. ದತ್ತ ಅವರಿಗೆ 72 ವರ್ಷವಾಗಿತ್ತು.

ಕೊವಿಡ್​ 19 ಸೋಂಕಿತರಾಗಿದ್ದ ಜೆಕೆ ದತ್ತ ಅವರನ್ನು ಗುರ್​ಗಾಂವ್​​ನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. 2008ರಲ್ಲಿ ಮುಂಬೈನ ಹೋಟೆಲ್​ಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾಗ, ಭಯೋತ್ಪಾದಕರನ್ನು ಹಿಮ್ಮೆಟ್ಟಿಸಲು ನಡೆಸಲಾಗಿದ್ದ ಆಪರೇಶನ್​ ಬ್ಲ್ಯಾಕ್​ ಕಮಾಂಡೋ ಆ್ಯಂಟಿ-ಟೆರರ್​ ಕಾರ್ಯಾಚರಣೆಯನ್ನು ಮುನ್ನಡೆಸಿದ್ದರು.

ಇಂದು ಮಧ್ಯಾಹ್ನ 3.30ರ ಹೊತ್ತಿಗೆ ಹೃದಯ ಸ್ತಂಭನದಿಂದ ಮೃಪಟ್ಟಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಪಿಟಿಐಗೆ ತಿಳಿಸಿದ್ದಾರೆ. ಜೆಕೆ ದತ್ತ ಅವರು 1971ರ ಬ್ಯಾಚ್​​ನ, ಬೆಂಗಾಲ್​ ಕೆಡರ್​ನ ಐಪಿಎಸ್​ ಅಧಿಕಾರಿಯಾಗಿದ್ದರು. 2006ರಿಂದ 2009ರವರೆಗೆ ಎನ್​​ಎಸ್​​ಜಿಯ ಮುಖ್ಯಸ್ಥರಾಗಿದ್ದರು. ಅಲ್ಲದೆ, ಸಿಬಿಐನ ಜಂಟಿ ನಿರ್ದೇಶಕನಾಗಿಯೂ ಕಾರ್ಯನಿರ್ವಹಿಸಿದ್ದಾರೆ.

2008ರ ನವೆಂಬರ್​ 26ರಂದು ಲಷ್ಕರ್​ ಎ ತೊಯ್ಬಾದ ಉಗ್ರರು ಮುಂಬೈನಲ್ಲಿ ದಾಳಿ ನಡೆಸಿದ್ದರು. ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿದ್ದ ಭಯೋತ್ಪಾದಕರು ಪ್ರಮುಖ ಹೋಟೆಲ್​​ಗಳನ್ನೇ ಟಾರ್ಗೆಟ್ ಮಾಡಿದ್ದರು. ಅವರ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದ ಎನ್​ಎಸ್​ಜಿ ಕಮಾಂಡೋಗಳು ದಿಟ್ಟತನದ ಹೋರಾಟ ಮಾಡಿದ್ದರು. ಅವರಲ್ಲಿ ಜೆಕೆ ದತ್ತ ಕೂಡ ಪ್ರಮುಖರು.

ಇದನ್ನೂ ಓದಿ: ಬ್ಲ್ಯಾಕ್‌ ಫಂಗಸ್‌ಗೆ ರಾಜ್ಯದ ಆರು ಕಡೆ ಉಚಿತ ಚಿಕಿತ್ಸೆ, ಈಗಾಗಲೇ 1000 ವೈಲ್ಸ್‌ ಔಷಧಿ ಬಂದಿದೆ: ಅಶ್ವತ್ಥ ನಾರಾಯಣ

Fact Check: ಕಾಂಗ್ರೆಸ್ ಟೂಲ್​ಕಿಟ್ ಎಂದು ವೈರಲ್ ಆದ ದಾಖಲೆ ಕಾಂಗ್ರೆಸ್ ಪಕ್ಷದ ನಕಲಿ ಲೆಟರ್​ಹೆಡ್ ಬಳಸಿ ಮಾಡಿದ್ದು

Former NSG Cheif JK Dutt who lead commondos during 2008 Mumbai Attack Died by Covid 19

Published On - 10:14 pm, Wed, 19 May 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!