AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

AIIMS ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ಮನಮೋಹನ್ ಸಿಂಗ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 13, 2021 | 7:40 PM

Share

ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರನ್ನು  ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS)  ಹೃದ್ರೋಗ ವಿಭಾಗದಲ್ಲಿ ದಾಖಲಿಸಲಾಗಿದೆ. ಸಿಂಗ್ ಅವರು ಎರಡು ವಾರಗಳ ಹಿಂದೆ ಅಂದರೆ  ಸೆಪ್ಟೆಂಬರ್ 26 ರಂದು 89 ನೇ ವರ್ಷಕ್ಕೆ ಕಾಲಿಟ್ಟಿದ್ದರು. ಏಪ್ರಿಲ್‌ನಲ್ಲಿ ಮಾಜಿ ಪ್ರಧಾನಿಗೆ ಕೊವಿಡ್ -19 ತಗುಲಿ ಏಮ್ಸ್ ಗೆ ದಾಖಲಾಗಿದ್ದರು.

ಬುಧುವಾರ ಸಂಜೆ ಸಿಂಗ್ ಅವರಿಗೆ ಜ್ವರ ಮತ್ತು ಸುಸ್ತು ಕಂಡು ಬಂದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ನಿನ್ನೆಯಿಂದಲೇ ಜ್ವರ ಇತ್ತು. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಮಾಜಿ ಪ್ರಧಾನಿ 2009 ರಲ್ಲಿ ಏಮ್ಸ್ ನಲ್ಲಿ ಕೊರೊನರಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ ಮುಂಬೈ ಮೂಲದ ಪ್ರಸಿದ್ಧ ಕಾರ್ಡಿಯೊವ್ಯಾಸ್ಕುಲಾರ್ ಥೊರಾಸಿಕ್ ಸರ್ಜನ್ ಮತ್ತು ಏಷ್ಯನ್ ಹಾರ್ಟ್ ಇನ್ಸಿಟ್ಯೂಟ್ (AHI) ಉಪಾಧ್ಯಕ್ಷ ರಮಾಕಾಂತ ಪಾಂಡ ನೇತೃತ್ವದ ವೈದ್ಯರ ತಂಡದಿಂದ ರೆಡೋ ಕಾರ್ಡಿಯಾಕ್ ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಿತ್ತು. ವರದಿಗಳ ಪ್ರಕಾರ 1990 ರಲ್ಲಿ ಬೈಪಾಸ್ ಆಪರೇಷನ್ ಮತ್ತು 2004 ರಲ್ಲಿ ಸ್ಟೆಂಟಿಂಗ್ ಚಿಕಿತ್ಸೆಗೆ ಒಳಗಾದ ನಂತರ ಸಿಂಗ್ ಅವರಿಗೆ ಐದು ಬೈಪಾಸ್ ಮಾಡಲಾಗಿದೆ.

ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಟ್ವೀಟ್ ಮಾಡಿದ ಕಾಂಗ್ರೆಸ್ ಪಕ್ಷದ ವಕ್ತಾರ ಪ್ರಣವ್ ಝಾ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಜಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಆಧಾರರಹಿತ ವದಂತಿ ಹರಿದಾಡುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ. ಅವರು ರೊಟೀನ್ ಚೆಕಪ್​​ಗೆ ಒಳಗಾಗುತ್ತಿದ್ದಾರೆ. ಅಗತ್ಯ ಬಂದರೆ ಹೆಚ್ಚಿನ ಮಾಹಿತಿಗಳನ್ನು ನಾವು ಶೇರ್ ಮಾಡುತ್ತೇವೆ. ಮಾಧ್ಯಮದಲ್ಲಿರುವ ನಮ್ಮ ಸ್ನೇಹಿತರ ಕಾಳಜಿಗೆ ನಾವು ಧನ್ಯವಾದ ಹೇಳುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: PM Gatishakti ಗತಿಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Published On - 7:18 pm, Wed, 13 October 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ