AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾದಲ್ಲಿ ಮಾಜಿ ಪೊಲೀಸ್ ಅಧಿಕಾರಿ, ಅವರ ಪತ್ನಿ, ಪುತ್ರಿಯನ್ನೂ ಕೊಂದ ಉಗ್ರರು; ಮನೆಗೇ ನುಗ್ಗಿ ಗುಂಡಿನ ದಾಳಿ

Terror Attack: ಆವಂತಿಪೊರಾದ ಹರಿಪರಿಗಂನಲ್ಲಿರುವ ಮಾಜಿ ಎಸ್​​ಪಿಒ ಫಯಾಜ್​ ಅಹ್ಮದ್​ ಮನೆಗೆ ನುಗ್ಗಿದ ಉಗ್ರರು ನಂತರ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಇವರಲ್ಲಿ ಫಯಾಜ್​ ಸ್ಥಳದಲ್ಲೇ ಮೃತಪಟ್ಟಿದ್ದರು. ಪತ್ನಿ ರಾಜಾ ಬೇಗಂ ಮತ್ತು ಪುತ್ರಿ ರಫಿಯಾ ಗಂಭೀರವಾಗಿ ಗಾಯಗೊಂಡಿದ್ದರು.

ಪುಲ್ವಾಮಾದಲ್ಲಿ ಮಾಜಿ ಪೊಲೀಸ್ ಅಧಿಕಾರಿ, ಅವರ ಪತ್ನಿ, ಪುತ್ರಿಯನ್ನೂ ಕೊಂದ ಉಗ್ರರು; ಮನೆಗೇ ನುಗ್ಗಿ ಗುಂಡಿನ ದಾಳಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jun 28, 2021 | 7:51 AM

Share

ಪುಲ್ವಾಮಾ: ಇಲ್ಲಿನ ಮಾಜಿ ಪೊಲೀಸ್ ಅಧಿಕಾರಿ, ಅವರ ಪತ್ನಿ ಮತ್ತು ಪುತ್ರಿಯನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಜಮ್ಮುಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹರಿಪರಿಗಂ​ ಗ್ರಾಮದಲ್ಲಿರುವ ಮಾಜಿ ಪೊಲೀಸ್​ ಅಧಿಕಾರಿಯ ಮನೆಗೇ ಬಂದು ಉಗ್ರರು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ರಕ್ಷಣಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ಆವಂತಿಪೊರಾದ ಹರಿಪರಿಗಂನಲ್ಲಿರುವ ಮಾಜಿ ಎಸ್​​ಪಿಒ ಫಯಾಜ್​ ಅಹ್ಮದ್​ ಮನೆಗೆ ನುಗ್ಗಿದ ಉಗ್ರರು ನಂತರ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಇವರಲ್ಲಿ ಫಯಾಜ್​ ಸ್ಥಳದಲ್ಲೇ ಮೃತಪಟ್ಟಿದ್ದರು. ಪತ್ನಿ ರಾಜಾ ಬೇಗಂ ಮತ್ತು ಪುತ್ರಿ ರಫಿಯಾ ಗಂಭೀರವಾಗಿ ಗಾಯಗೊಂಡಿದ್ದರು. ಇವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸೇರಿಸಿದ ಕೆಲವೇ ಹೊತ್ತಲ್ಲಿ ಪತ್ನಿ ರಾಜಾ ಬೇಗಂ ಕೂಡ ಸಾವನ್ನಪ್ಪಿದ್ದಾರೆ. ಪುತ್ರಿ ರಫಿಯಾಗೆ ಚಿಕಿತ್ಸೆ ಮುಂದುವರಿಸಲಾಗಿತ್ತಾದರೂ ಅವರೂ ಬದುಕಲಿಲ್ಲ. ನಾಪತ್ತೆಯಾದ ಉಗ್ರರ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು-ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ. ಈ ಅಧಿಕಾರಿಯ ಪುತ್ರ ಸೈನ್ಯದ ಪ್ರಾದೇಶಿಕ ಪಡೆಯಲ್ಲಿ ಸೈನಿಕನಾಗಿದ್ದಾನೆ. ಎರಡು ವರ್ಷಗಳ ಹಿಂದೆ ಫಯಾಜ್​​ಗೆ ರಾಜೀನಾಮೆ ನೀಡುವಂತೆ ಒತ್ತಡ ಬಂದಿತ್ತು. ಆದರೆ ಅವರದನ್ನು ಮಾಡಿರಲಿಲ್ಲ.

ನಿನ್ನೆ ಅದೇನೋ ಜಮ್ಮು-ಕಾಶ್ಮೀರದಲ್ಲಿ ಉಗ್ರಕೃತ್ಯ ಮಿತಿಮೀರಿತ್ತು. ಮೊದಲು ಜಮ್ಮು ಏರ್​ಪೋರ್ಟ್​​ನಲ್ಲಿ ಅವಳಿ ಸ್ಫೋಟಗಳು ನಡೆದವು. ಬಳಿಕ ಸುಮಾರು 6 ಕೆಜಿ ತೂಕದ ಐಇಡಿಯನ್ನು ಪೊಲೀಸರು ವಶಪಡಿಸಿಕೊಂಡರು. ಸದ್ಯ ಜಮ್ಮು-ಕಾಶ್ಮೀರದ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ‘ಹೊರಗೆ ಕಾಲ್​ ಕಟ್​ ಮಾಡುತ್ತಿದ್ದ ಹುಡುಗಿ, ಈಗ ಅವನಿಗೆ ಊಟ ಮಾಡಿಸುತ್ತಿದ್ದಾಳೆ’

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ