AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ತಮಾಷೆ ಮಾಡುತ್ತಿದ್ದೀರಾ?: ಅಂಬಿಕಾ ಸೋನಿ, ಚರಣ್‌ಜಿತ್ ಸಿಂಗ್​​ ಚನ್ನಿ ವಿರುದ್ಧ ಸುನೀಲ್ ಜಾಖರ್​​ ಗರಂ

Sunil Jakhar ಒಂದು ಸ್ವತ್ತು - ನೀವು ತಮಾಷೆ ಮಾಡುತ್ತಿದ್ದೀರಾ? ಓಹ್ ದೇವರೇ, ಅವರನ್ನು ಸಿಎಂ ಎಂದು ಮೊದಲು ಪ್ರಸ್ತಾಪಿಸಿದ ಪಿಬಿಐ ಮಹಿಳೆ ಅವರನ್ನು ಸಿಡಬ್ಲ್ಯುಸಿಯಲ್ಲಿ ರಾಷ್ಟ್ರೀಯ ಖಜಾನೆ ಎಂದು ಘೋಷಿಸಿಲ್ಲ.

ನೀವು ತಮಾಷೆ ಮಾಡುತ್ತಿದ್ದೀರಾ?: ಅಂಬಿಕಾ ಸೋನಿ, ಚರಣ್‌ಜಿತ್ ಸಿಂಗ್​​ ಚನ್ನಿ ವಿರುದ್ಧ ಸುನೀಲ್ ಜಾಖರ್​​ ಗರಂ
ಸುನಿಲ್ ಜಾಖರ್
TV9 Web
| Edited By: |

Updated on: Mar 14, 2022 | 9:28 PM

Share

ದೆಹಲಿ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (PPCC) ಮಾಜಿ ಮುಖ್ಯಸ್ಥ ಸುನೀಲ್ ಜಾಖರ್ (Sunil Jakhar) ಅವರು ಸೋಮವಾರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಅಂಬಿಕಾ ಸೋನಿ ಮತ್ತು ಚರಣ್‌ಜಿತ್ ಸಿಂಗ್ ಚನ್ನಿ(Charanjit Singh Channi) ಅವರನ್ನು ಹೊಣೆಯಾಗಿಸಿದ್ದು ದುರಾಸೆ ಅವರನ್ನು ಕೆಳಕ್ಕೆ ತಳ್ಳಿದೆ ಎಂದು ಹೇಳಿದ್ದಾರೆ.  ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಸೋನಿ ಅವರು ಹೈಕಮಾಂಡ್ ಚನ್ನಿ ಅವರನ್ನು ಸಿಎಂ ಎಂದು ಹೆಸರಿಸಿದ್ದರೂ ರಾಜ್ಯ ನಾಯಕತ್ವ ಬೆಂಬಲಿಸಲಿಲ್ಲ ಎಂದು ಹೇಳಿದ್ದರು. “ಒಂದು ಸ್ವತ್ತು – ನೀವು ತಮಾಷೆ ಮಾಡುತ್ತಿದ್ದೀರಾ? ಓಹ್ ದೇವರೇ, ಅವರನ್ನು ಸಿಎಂ ಎಂದು ಮೊದಲು ಪ್ರಸ್ತಾಪಿಸಿದ ಪಿಬಿಐ ಮಹಿಳೆ ಅವರನ್ನು ಸಿಡಬ್ಲ್ಯುಸಿಯಲ್ಲಿ ರಾಷ್ಟ್ರೀಯ ಖಜಾನೆ ಎಂದು ಘೋಷಿಸಿಲ್ಲ ಎಂದು ಜಾಖರ್ ಟ್ವೀಟ್ ಮಾಡಿದ್ದಾರೆ.  ಅವರಿಗೆ ಆಸ್ತಿಯಾಗಿರಬಹುದು ಆದರೆ ಪಕ್ಷಕ್ಕೆ ಅವರು ಹೊಣೆಗಾರಿಕೆ ಮಾತ್ರ. ಉನ್ನತ ಅಧಿಕಾರಿಗಳಲ್ಲ, ಆದರೆ ಅವರ ಸ್ವಂತ ದುರಾಸೆ ಅವರನ್ನು ಮತ್ತು ಪಕ್ಷವನ್ನು ಕೆಳಕ್ಕೆ ತಳ್ಳಿತು ಎಂದಿದ್ದಾರೆ ಜಾಖರ್.  ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಗಳನ್ನು ಜಾಖರ್ ಉಲ್ಲೇಖಿಸಿದ್ದಾರೆ. ಫೆಬ್ರವರಿ 4 ರಂದು ಕೇಂದ್ರೀಯ ಸಂಸ್ಥೆ ಭೂಪಿಂದರ್‌ನನ್ನು ಬಂಧಿಸಿತ್ತು ಮತ್ತು ಆತನ ಬಂಧನಕ್ಕೂ ಮುನ್ನ ಶೋಧ ನಡೆಸಿದಾಗ 10 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿರುವುದಾಗಿ ಹೇಳಿಕೊಂಡಿತ್ತು.

ಚನ್ನಿ ಮತ್ತು ಸೋನಿ ಮೇಲೆ ಜಾಖರ್ ಟೀಕಾ ಪ್ರಹಾರ ನಡೆಸುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಪಂಜಾಬ್ ಮುಖ್ಯಮಂತ್ರಿಯಾಗುವ ಅವಕಾಶವನ್ನು ಸೋನಿ ಅವರು ಸಿಖ್ಖರು ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂದು ಹೇಳಿ ಹಿಂದೆ ಸರಿದಿದ್ದರು. ಇದಾದ ನಂತರ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬದಲಿಗೆ ಚನ್ನಿ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿತ್ತು.

ಇದನ್ನೂ ಓದಿ: ಮಹಿಳೆಯರು ಕೇಸರಿ ದುಪಟ್ಟಾ, ಪುರುಷರು ಕೇಸರಿ ಪೇಟ ಧರಿಸಿ ಬನ್ನಿ, ನನ್ನ ಜತೆ ಪ್ರಮಾಣ ವಚನ ಸ್ವೀಕರಿಸಿ: ಭಗವಂತ್ ಮಾನ್ ಕರೆ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್