AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ […]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ
KUSHAL V
|

Updated on:Aug 31, 2020 | 6:07 PM

Share

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಮ್ಮ ಶ್ವಾಸಕೋಶಗಳಲ್ಲಿ ತೀವ್ರ ಸೋಂಕು ಉಂಟಾದ ಪರಿಣಾಮ ಸೆಪ್ಟಿಕ್​ ಶಾಕ್​ಗೆ ಒಳಪಟ್ಟಿದ್ದರು ಎಂದು ತಿಳಿದುಬಂದಿದೆ.

ಭಾರತದ 13ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ 2012ರ ಜು.25ರಿಂದ 2017ರ ಜುಲೈ 25ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಕಾಲೇಜು ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ್ದ ಪ್ರಣಬ್​ ನಂತರ ಪತ್ರಕರ್ತರಾಗಿ ಕೆಲಸ ಮಾಡಿದ್ದರು. 1957ರ ಜುಲೈ 13ರಂದು ಶುಭಾರನ್ನು ವರಿಸಿದ್ದ ಪ್ರಣಬ್ ಮುಖರ್ಜಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದಾರೆ.

1969ರಲ್ಲಿ ಕಾಂಗ್ರೆಸ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಜೊತೆಗೆ, 1975, 1981, 1993, 1999ರಲ್ಲಿ ರಾಜ್ಯಸಭೆಗೆ ಪುನಾರಾಯ್ಕೆಯಾಗಿದ್ದರು. 1982ರಿಂದ 1984ರವರೆಗೆ ಕೇಂದ್ರ ಹಣಕಾಸು ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದಲ್ಲದೆ, ರಕ್ಷಣಾ, ಹಣಕಾಸು, ಆಂತರಿಕಾ ಭದ್ರತಾ ಇಲಾಖೆ, ಸಾರಿಗೆ, ವಾಣಿಜ್ಯ ಮತ್ತು ಉದ್ದಿಮೆ ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದರು.

2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದ ಪ್ರಣಬ್ 2019ರ ಜನವರಿಯಲ್ಲಿ ಭಾರತ ರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.

Published On - 5:54 pm, Mon, 31 August 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ