AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ […]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ
KUSHAL V
|

Updated on:Aug 31, 2020 | 6:07 PM

Share

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಮ್ಮ ಶ್ವಾಸಕೋಶಗಳಲ್ಲಿ ತೀವ್ರ ಸೋಂಕು ಉಂಟಾದ ಪರಿಣಾಮ ಸೆಪ್ಟಿಕ್​ ಶಾಕ್​ಗೆ ಒಳಪಟ್ಟಿದ್ದರು ಎಂದು ತಿಳಿದುಬಂದಿದೆ.

ಭಾರತದ 13ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ 2012ರ ಜು.25ರಿಂದ 2017ರ ಜುಲೈ 25ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಕಾಲೇಜು ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ್ದ ಪ್ರಣಬ್​ ನಂತರ ಪತ್ರಕರ್ತರಾಗಿ ಕೆಲಸ ಮಾಡಿದ್ದರು. 1957ರ ಜುಲೈ 13ರಂದು ಶುಭಾರನ್ನು ವರಿಸಿದ್ದ ಪ್ರಣಬ್ ಮುಖರ್ಜಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದಾರೆ.

1969ರಲ್ಲಿ ಕಾಂಗ್ರೆಸ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಜೊತೆಗೆ, 1975, 1981, 1993, 1999ರಲ್ಲಿ ರಾಜ್ಯಸಭೆಗೆ ಪುನಾರಾಯ್ಕೆಯಾಗಿದ್ದರು. 1982ರಿಂದ 1984ರವರೆಗೆ ಕೇಂದ್ರ ಹಣಕಾಸು ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದಲ್ಲದೆ, ರಕ್ಷಣಾ, ಹಣಕಾಸು, ಆಂತರಿಕಾ ಭದ್ರತಾ ಇಲಾಖೆ, ಸಾರಿಗೆ, ವಾಣಿಜ್ಯ ಮತ್ತು ಉದ್ದಿಮೆ ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದರು.

2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದ ಪ್ರಣಬ್ 2019ರ ಜನವರಿಯಲ್ಲಿ ಭಾರತ ರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.

Published On - 5:54 pm, Mon, 31 August 20

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು