AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ […]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ
KUSHAL V
|

Updated on:Aug 31, 2020 | 6:07 PM

Share

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಮ್ಮ ಶ್ವಾಸಕೋಶಗಳಲ್ಲಿ ತೀವ್ರ ಸೋಂಕು ಉಂಟಾದ ಪರಿಣಾಮ ಸೆಪ್ಟಿಕ್​ ಶಾಕ್​ಗೆ ಒಳಪಟ್ಟಿದ್ದರು ಎಂದು ತಿಳಿದುಬಂದಿದೆ.

ಭಾರತದ 13ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ 2012ರ ಜು.25ರಿಂದ 2017ರ ಜುಲೈ 25ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಕಾಲೇಜು ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ್ದ ಪ್ರಣಬ್​ ನಂತರ ಪತ್ರಕರ್ತರಾಗಿ ಕೆಲಸ ಮಾಡಿದ್ದರು. 1957ರ ಜುಲೈ 13ರಂದು ಶುಭಾರನ್ನು ವರಿಸಿದ್ದ ಪ್ರಣಬ್ ಮುಖರ್ಜಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದಾರೆ.

1969ರಲ್ಲಿ ಕಾಂಗ್ರೆಸ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಜೊತೆಗೆ, 1975, 1981, 1993, 1999ರಲ್ಲಿ ರಾಜ್ಯಸಭೆಗೆ ಪುನಾರಾಯ್ಕೆಯಾಗಿದ್ದರು. 1982ರಿಂದ 1984ರವರೆಗೆ ಕೇಂದ್ರ ಹಣಕಾಸು ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದಲ್ಲದೆ, ರಕ್ಷಣಾ, ಹಣಕಾಸು, ಆಂತರಿಕಾ ಭದ್ರತಾ ಇಲಾಖೆ, ಸಾರಿಗೆ, ವಾಣಿಜ್ಯ ಮತ್ತು ಉದ್ದಿಮೆ ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದರು.

2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದ ಪ್ರಣಬ್ 2019ರ ಜನವರಿಯಲ್ಲಿ ಭಾರತ ರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.

Published On - 5:54 pm, Mon, 31 August 20

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ