AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕೊವಿಡ್-19 ಸೋಂಕು!

ನಿಯಮಿತ ಆರೋಗ್ಯ ತಪಾಸಣೆಗೆಂದು ದೆಹಲಿಯ ಆಸ್ಪತ್ಪೆಯೊಂದಕ್ಕೆ ಭೇಟಿ ನೀಡಿದಾಗ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕೊವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದೆ. ಖುದ್ದು ಮುಖರ್ಜಿಯವರೇ ಸೋಂಕಿನ ಬಗ್ಗೆ ಧೃಡೀಕರಿಸಿರುವರಲ್ಲದೆ ತಮ್ಮನ್ನು ಇತ್ತೀಚಿಗೆ ಭೇಟಿಯಾದವರೆಲ್ಲ ತಪ್ಪದೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ. 2012 ರಿಂದ 2017 ರವರೆಗೆ ಭಾರತದ ರಾಷ್ಟ್ರಪತಿಗಳಾಗುವ ಮುಂಚೆ ಕಾಂಗ್ರೆಸ್ ನೇತೃತ್ವದ ಸರಕಾರಗಳಲ್ಲಿ ವಿವಿಧ ಖಾತೆಗಳ ಸಚಿವರಾಗಿದ್ದ ಮುಖರ್ಜಿಯವರು, ಸೋಮವಾರದಂದು ಟ್ವೀಟ್ ಮಾಡಿ ಸೋಂಕಿತರಾಗಿರುವ ಬಗ್ಗೆ ಹೇಳಿದ್ದಾರೆ. “ಆಸ್ಪತ್ರೆಗೆ ಬೇರಾವುದೋ ಪರೀಕ್ಷಣೆಗೆಂದು ಇವತ್ತು ಹೋದಾಗ ನನಗೆ ಕೊವಿಡ್-19 […]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕೊವಿಡ್-19 ಸೋಂಕು!
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 10, 2020 | 6:39 PM

Share

ನಿಯಮಿತ ಆರೋಗ್ಯ ತಪಾಸಣೆಗೆಂದು ದೆಹಲಿಯ ಆಸ್ಪತ್ಪೆಯೊಂದಕ್ಕೆ ಭೇಟಿ ನೀಡಿದಾಗ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕೊವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದೆ. ಖುದ್ದು ಮುಖರ್ಜಿಯವರೇ ಸೋಂಕಿನ ಬಗ್ಗೆ ಧೃಡೀಕರಿಸಿರುವರಲ್ಲದೆ ತಮ್ಮನ್ನು ಇತ್ತೀಚಿಗೆ ಭೇಟಿಯಾದವರೆಲ್ಲ ತಪ್ಪದೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.

2012 ರಿಂದ 2017 ರವರೆಗೆ ಭಾರತದ ರಾಷ್ಟ್ರಪತಿಗಳಾಗುವ ಮುಂಚೆ ಕಾಂಗ್ರೆಸ್ ನೇತೃತ್ವದ ಸರಕಾರಗಳಲ್ಲಿ ವಿವಿಧ ಖಾತೆಗಳ ಸಚಿವರಾಗಿದ್ದ ಮುಖರ್ಜಿಯವರು, ಸೋಮವಾರದಂದು ಟ್ವೀಟ್ ಮಾಡಿ ಸೋಂಕಿತರಾಗಿರುವ ಬಗ್ಗೆ ಹೇಳಿದ್ದಾರೆ.

ಆಸ್ಪತ್ರೆಗೆ ಬೇರಾವುದೋ ಪರೀಕ್ಷಣೆಗೆಂದು ಇವತ್ತು ಹೋದಾಗ ನನಗೆ ಕೊವಿಡ್-19 ಸೋಂಕಿರುವುದು ಪತ್ತೆಯಾಗಿದೆ. ಕಳೆದ ವಾರ ನನ್ನನ್ನು ಭೇಟಿಯಾದವರೆಲ್ಲಾ ದಯವಿಟ್ಟು ಕುಟುಂಬದಿಂದ ದೂರವಿರಿ ಹಾಗೂ ಕೂಡಲೇ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ@CitiznMukherjee,” ಎಂದು ಮಾಜಿ ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

ಮುಖರ್ಜಿ ಸೋಂಕಿತರಾಗಿರುವುದು ಗೊತ್ತಾದ ಕೂಡಲೇ ಹಲವಾರು ಗಣ್ಯರು ಟ್ವೀಟ್ ಮಾಡಿ ಬೇಗ ಗುಣಮುಖರಾಗುವಂತೆ ಶುಭ ಹಾರೈಸಿದ್ದಾರೆ. ಅವರಲ್ಲಿ ಮೊದಲಿಗರೆಂದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್.

ಆರೋಗ್ಯದ ಮೇಲಿ ಗಮನವಿರಲಿ ಸರ್, ನಿಮ್ಮ ಶೀಘ್ರ ಚೇತರಿಕೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ@CitiznMukherjee.” @Arvind Kejriwal”.

ಕೇಂದ್ರ ಸಚಿವ ಪಿಯುಷ್ ಗೋಯೆಲ್ ಸಹ ಮಾಜಿ ರಾಷ್ಟ್ರಪತಿಗಳು ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಶ್ರೀ ಪ್ರಣಬ್ ಮುಖರ್ಜಿಯವರು ತ್ವರಿತವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತಿದ್ದೇನೆ. ವೈರಸ್

ಸೋಂಕಿನಿಂದ ಯಶಸ್ವೀಯಾಗಿ ಅವರು ಮುಕ್ತರಾಗುವ ಬಗ್ಗೆ ನನಗೆ ವಿಶ್ವಾಸವಿದೆ. ದೇವರು ಅವರಿಗೆ ಆರೋಗ್ಯ ಮತ್ತು ಶಕ್ತಿ ಒದಗಿಸಲಿ ಎಂದು ಹಾರೈಸುತ್ತೇನೆ@PiyushGoyal”

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸಹ ಪ್ರಣಬ್ ಮುಖರ್ಜಿಯವರಿಗೆ ಶುಭ ಹಾರೈಸಿದ್ದಾರೆ.

ಮಾಜಿ ರಾಷ್ಟ್ರಪತಿಗಳಾದ ಶ್ರೀ ಪ್ರಣಬ್ ಮುಖರ್ಜಿಯವರು ಕೊವಿಡ್-19 ಸೋಂಕಿನಿಂದ ಶೀಘ್ರ ಗುಣಮುಖರಾಗಿ ಉತ್ತಮ ಆರೋಗ್ಯ ವಾಪಸ್ಸು ಪಡೆಯಲಿ ಎಂದು ಹಾರೈಸುತ್ತೇನೆ@DKShivakumar”

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್