AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ನಿಷೇಧಿಸಿ; ಪುದುಚೇರಿ ಲೆ. ಗವರ್ನರ್​​ಗೆ ನಾರಾಯಣಸ್ವಾಮಿ ಒತ್ತಾಯ

V Narayanasamy ತಮಿಳುನಾಡು ಸರ್ಕಾರವು ಈಗಾಗಲೇ ವಿಗ್ರಹಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸುವುದನ್ನು ಮತ್ತು ಹಬ್ಬದ ಸಂದರ್ಭದಲ್ಲಿ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಪುದುಚೇರಿ ಸರ್ಕಾರವು ಇದನ್ನು ಅನುಕರಿಸಬೇಕು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹಗಳನ್ನು ಅನುಮತಿಸುವ ಕುರಿತು ತನ್ನ ಪ್ರಕಟಣೆಯನ್ನು ಮರುಪರಿಶೀಲಿಸಬೇಕು ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ನಿಷೇಧಿಸಿ; ಪುದುಚೇರಿ ಲೆ. ಗವರ್ನರ್​​ಗೆ ನಾರಾಯಣಸ್ವಾಮಿ ಒತ್ತಾಯ
ವಿ.ನಾರಾಯಣಸ್ವಾಮಿ
TV9 Web
| Edited By: |

Updated on:Sep 06, 2021 | 12:41 PM

Share

ಪುದುಚೇರಿ: ಗಣೇಶ ಚತುರ್ಥಿಯಂದು (Vinayaka Chaturthi)  ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ (Narayanasamy) ಅವರು ಶನಿವಾರ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರ್ಯರಾಜನ್ ಅವರಿಗೆ ಒತ್ತಾಯಿಸಿದ್ದಾರೆ. ವಿಡಿಯೊ ಸಂದೇಶದಲ್ಲಿ, ಜನರು ಸಾರ್ವಜನಿಕ ಸ್ಥಳಗಳಲ್ಲಿ ಸೇರಿಕೊಂಡರೆ ಕೊವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತವೆ ಎಂದು ನಾರಾಯಣಸ್ವಾಮಿ ಹೇಳಿದರು.

“ತಮಿಳುನಾಡು ಸರ್ಕಾರವು ಈಗಾಗಲೇ ವಿಗ್ರಹಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸುವುದನ್ನು ಮತ್ತು ಹಬ್ಬದ ಸಂದರ್ಭದಲ್ಲಿ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಪುದುಚೇರಿ ಸರ್ಕಾರವು ಇದನ್ನು ಅನುಕರಿಸಬೇಕು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹಗಳನ್ನು ಅನುಮತಿಸುವ ಕುರಿತು ತನ್ನ ಪ್ರಕಟಣೆಯನ್ನು ಮರುಪರಿಶೀಲಿಸಬೇಕು ಎಂದು ಅವರು ಹೇಳಿದರು. ಜನರು ಮನೆಯಲ್ಲಿ ಹಬ್ಬವನ್ನು ಆಚರಿಸಬೇಕು ಮತ್ತು ವಿಗ್ರಹಗಳನ್ನು ಹತ್ತಿರದ ಜಲಮೂಲಗಳಲ್ಲಿ ವಿಸರ್ಜಿಸಬೇಕು ಎಂದು ನಾರಾಯಣಸ್ವಾಮಿ ಹೇಳಿದರು.

ವಿಗ್ರಹಗಳ ಮೆರವಣಿಗೆಗಳನ್ನು ನಡೆಸುವುದರ ಮೇಲೆ ನಿಷೇಧವೂ ಇರಬೇಕು ಎಂದು ಅವರು ಹೇಳಿದರು. ಸಾಂಕ್ರಾಮಿಕ ರೋಗದ ಉಲ್ಬಣವನ್ನು ದೂರವಿಡುವ ಹೆಚ್ಚಿನ ಹಿತದೃಷ್ಟಿಯಿಂದ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಅವರು ಮುಖ್ಯಮಂತ್ರಿ ಎನ್ ರಂಗಸ್ವಾಮಿಗೆ ಕರೆ ನೀಡಿದರು.

ಪುದುಚೇರಿಯಲ್ಲೀಗ ಹೊಸ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಲೆಫ್ಟಿನೆಂಟ್ ಗವರ್ನರ್ ತನ್ನ ನಿಲುವನ್ನು ಮರುಪರಿಶೀಲಿಸಬೇಕು ಮತ್ತು ಜನರು ಮನೆಯಲ್ಲಿ ಹಬ್ಬವನ್ನು ಆಚರಿಸಬೇಕು ಎಂದು ನಾರಾಯಣಸ್ವಾಮಿ ಹೇಳಿದರು.

ಇದನ್ನೂ ಓದಿ: ಕಲ್ಲಿದ್ದಲು ಕಳ್ಳ ಸಾಗಣೆ ಹಗರಣ: ಇಡಿ ಮುಂದೆ ಹಾಜರಾದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

(former Puducherry chief minister V Narayanasamy urges ban installation of Ganesha idols in public places during Vinayaka Chaturthi)

Published On - 12:39 pm, Mon, 6 September 21

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ