AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarinder Singh ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​​ರನ್ನು ಭೇಟಿ ಮಾಡಿದ ಅಮರಿಂದರ್ ಸಿಂಗ್

Ajit Doval: ಹಿರಿಯ ಕಾಂಗ್ರೆಸ್ ಮುಖಂಡರಾದ ಅಂಬಿಕಾ ಸೋನಿ ಮತ್ತು ಕಮಲ್ ನಾಥ್ ಅವರು ಸಿಂಗ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Amarinder Singh ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​​ರನ್ನು ಭೇಟಿ ಮಾಡಿದ ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್
TV9 Web
| Edited By: |

Updated on: Sep 30, 2021 | 12:16 PM

Share

ದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ (Amarinder Singh) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ನಂತರ ದೆಹಲಿಯಲ್ಲಿ ಇಂದು ಬೆಳಿಗ್ಗೆ (ಗುರುವಾರ) ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ಅವರನ್ನು ಭೇಟಿ ಮಾಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಸಿಂಗ್ ಅವರು ಇತ್ತೀಚೆಗೆ ರಾಜಕೀಯ ಜಟಾಪಟಿ ನಡುವೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ನಂತರ ಮೊದಲ ಬಾರಿ ದೆಹಲಿಗೆ ಬಂದಿರುವ ಸಿಂಗ್ ಬುಧವಾರ ಅಮಿತ್ ಶಾ ಅವರನ್ನು ಒಂದು ಗಂಟೆ ಕಾಲ ಭೇಟಿಯಾದರು. ಅಮಿತ್ ಶಾ ನಿವಾಸದಲ್ಲಿ ಅವರನ್ನು ಭೇಟಿ ಆದ ಸಿಂಗ್ ರೈತರ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಅಮರಿಂದರ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್ ಪಕ್ಷವು ಅಮರಿಂದರ್ ಸಿಂಗ್ ಅವರನ್ನು ಸಂಪರ್ಕಿಸಿದೆ. ಹಿರಿಯ ಕಾಂಗ್ರೆಸ್ ಮುಖಂಡರಾದ ಅಂಬಿಕಾ ಸೋನಿ ಮತ್ತು ಕಮಲ್ ನಾಥ್ ಅವರು ಸಿಂಗ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

79 ವರ್ಷದ ಹಿರಿಯ ನಾಯಕರಾಗಿರುವ ಸಿಂಗ್ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಗೊಂದಲ ಸೃಷ್ಟಿಸಿದ್ದಾರೆ. ರಾಜ್ಯ ಚುನಾವಣೆಗೆ ನಾಲ್ಕು ತಿಂಗಳಿರುವಾಗ, ಸೆಪ್ಟೆಂಬರ್ 18 ರಂದು ಪಂಜಾಬ್ ಮುಖ್ಯಮಂತ್ರಿಯಿಂದ ನಿರ್ಗಮಿಸಬೇಕಾಗಿ ಬಂದ ನಂತರ ಅವರು ತಮ್ಮ ಆಯ್ಕೆಗಳನ್ನು ಅನ್ವೇಷಿಸುತ್ತಿರುವುದನ್ನು ದೃಢೀಕರಿಸುವುದಾದಲೀ ಅಥವಾ ನಿರಾಕರಿಸುವುದಾಗಲೀ ಮಾಡಿಲ್ಲ.

ಮಂಗಳವಾರ ದೆಹಲಿಗೆ ಬಂದಿಳಿದಾಗ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡುವ ಯಾವುದೇ ಯೋಜನೆಯನ್ನು ನಿರಾಕರಿಸಿದರು. ಹೊಸ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿಗಾಗಿ ಕಪುರ್ತಲಾ ಹೌಸ್ ಅನ್ನು ಖಾಲಿ ಮಾಡಲು ಬಂದಿದ್ದೇನೆ ಎಂದು ಸಿಂಗ್ ದೆಹಲಿಯಲ್ಲಿ ಹೇಳಿದ್ದರು.

ಅಮಿತ್ ಶಾ ಅವರನ್ನು ಬುಧವಾರ ಸಂಜೆ ಭೇಟಿ ಮಾಡಿದ ಸಿಂಗ್ ಒಂದು ಗಂಟೆಕಾಲ ಸಭೆ ನಡೆಸಿದ್ದಾರೆ. ಕ್ಯಾಪ್ಟನ್ ಸಿಂಗ್ ಅವರು 11 ತಿಂಗಳ ರೈತರ ಪ್ರತಿಭಟನೆಯ ಬಗ್ಗೆ ಮತ್ತು ಕೇಂದ್ರದ ಕೃಷಿ ಕಾನೂನುಗಳನ್ನು ಚರ್ಚಿಸಿದ್ದಾರೆ ಮತ್ತು ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳ ಬಗ್ಗೆ ಹೇಳಿದರು ಎಂದು ಎನ್ ಡಿ ಟಿವಿ ವರದಿ ಮಾಡಿದೆ,

ಸಿಂಗ್ ಅವರ ತಂಡವು ಶಾ ಜತೆಗಿನ ಭೇಟಿಯನ್ನು “ಸೌಜನ್ಯದ ಭೇಟಿ” ಎಂದು ಕರೆದಿದೆ ಮತ್ತು ಅವರು ಬಿಜೆಪಿ ಸೇರುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Amarinder Singh ದೆಹಲಿಯಲ್ಲಿ ಅಮಿತ್​ ಶಾ ಭೇಟಿ ಮಾಡಿದ ಕ್ಯಾಪ್ಟನ್ ಅಮರಿಂದರ್​ ಸಿಂಗ್

ಇದನ್ನೂ ಓದಿ: ಭಾರತದ ಡಿಜಿಟಲ್​ ಆರೋಗ್ಯ ಮಿಷನ್​​ಗೆ ಬಿಲ್​ಗೇಟ್ಸ್​​ರಿಂದ ಶ್ಲಾಘನೆ​ ​; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್​​

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?