AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Captain Amarinder Singh ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

"ನನ್ನ ರಾಜ್ಯ ಮತ್ತು ನನ್ನ ದೇಶದ ಹಿತದೃಷ್ಟಿಯಿಂದ ನಾನು ಈ ಮೂಲಕ ಇಂಡಿಯನ್ ನ್ಯಾಷನಲ್  ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತೇನೆ" ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

Captain Amarinder Singh ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್
ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್
TV9 Web
| Edited By: |

Updated on:Nov 02, 2021 | 6:12 PM

Share

ದೆಹಲಿ: ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ (Captain Amarinder Singh) ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಸಿಂಗ್, “ನನ್ನ ತೀವ್ರವಾದ ಸಂಯಮದ ಹೊರತಾಗಿಯೂ ಮತ್ತು ಪಂಜಾಬ್‌ನ ಬಹುತೇಕ ಎಲ್ಲಾ ಸಂಸದರ ಒಮ್ಮತದ ಸಲಹೆಯ ಹೊರತಾಗಿಯೂ, ನೀವು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಮತ್ತು ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಸಾರ್ವಜನಿಕವಾಗಿ ಅಪ್ಪಿಕೊಂಡಿದ್ದ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ಆಯ್ಕೆ ಮಾಡಿಕೊಂಡಿದ್ದೀರಿ.  1954ರಲ್ಲಿ ನಾವು ಶಾಲೆಯಲ್ಲಿ ಜತೆಯಾಗಿದ್ದೆವು, ಅಂದರೆ ಈಗ 67 ವರ್ಷಗಳು. ನಾನು ನನ್ನ ಮಕ್ಕಳಂತೆ ತೀವ್ರವಾಗಿ ಪ್ರೀತಿಸುವ ನಿಮ್ಮ ಮಕ್ಕಳ ಅಪ್ಪನನ್ನು ಚೆನ್ನಾಗಿ ಬಲ್ಲೆ. ನಿಮ್ಮ ನಡತೆಯಿಂದ ನನಗೆ ನೋವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. “ನನ್ನ ರಾಜ್ಯ ಮತ್ತು ನನ್ನ ದೇಶದ ಹಿತದೃಷ್ಟಿಯಿಂದ ನಾನು ಈ ಮೂಲಕ ಇಂಡಿಯನ್ ನ್ಯಾಷನಲ್  ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತೇನೆ” ಎಂದು ಸಿಂಗ್ ಹೇಳಿದ್ದಾರೆ.

ಈ ಬಗ್ಗೆ ಟ್ವೇಟ್ ಮಾಡಿದ ಸಿಂಗ್  ರಾಜೀನಾಮೆಯ ಕಾರಣಗಳನ್ನು ಪಟ್ಟಿ ಮಾಡಿ ನಾನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನನ್ನ ರಾಜೀನಾಮೆ ಪತ್ರವನ್ನು ಇವತ್ತು ಕಳುಹಿಸಿದ್ದೇನೆ . ಹೊಸ ಪಕ್ಷದ ಹೆಸರು  ಪಂಜಾಬ್ ಲೋಕ್ ಕಾಂಗ್ರೆಸ್ . ಚುನಾವಣಾ ಆಯೋಗ ಇನ್ನು ಅಂಗೀಕರಿಸಬೇಕಿದೆ. ಪಕ್ಷದ ಚಿಹ್ನೆಗೆ  ಆಮೇಲೆ ಅನುಮತಿ ಸಿಗಲಿದೆ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ, ಪಂಜಾಬ್ ಮಾಜಿ ಸಿಎಂನ ಮಾಧ್ಯಮ ಸಲಹೆಗಾರರ ರವೀನ್ ತುಕ್ರಾಲ್, ಸಿಂಗ್ ಪರವಾಗಿ ಟ್ವೀಟ್ ಮಾಡಿದ್ದು ಕಾಂಗ್ರೆಸ್ ಜೊತೆಗೆ ಬ್ಯಾಕ್ ಎಂಡ್ ಮಾತುಕತೆಯ ವರದಿ ತಪ್ಪಾಗಿದೆ. ಹೊಂದಾಣಿಕೆಯ ಸಮಯ ಮುಗಿದಿದೆ. ಪಕ್ಷದಿಂದ ದೂರ ಸರಿಯುವ ನಿರ್ಧಾರವನ್ನು ಸಾಕಷ್ಟು ಚಿಂತನೆಯ ನಂತರ ತೆಗೆದುಕೊಳ್ಳಲಾಗಿದ್ದು, ಅಂತಿಮವಾಗಿದೆ. ಸೋನಿಯಾ ಗಾಂಧಿ ಅವರ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ, ಆದರೆ ಈಗ ಕಾಂಗ್ರೆಸ್‌ನಲ್ಲಿ ಉಳಿಯುವುದಿಲ್ಲ’

ನಾನು ಶೀಘ್ರದಲ್ಲೇ ನನ್ನ ಸ್ವಂತ ಪಕ್ಷವನ್ನು ಪ್ರಾರಂಭಿಸುತ್ತೇನೆ ಮತ್ತು ರೈತರ ಸಮಸ್ಯೆ ಬಗೆಹರಿದ ನಂತರ ಬಿಜೆಪಿ ಮತ್ತು ಇತರರೊಂದಿಗೆ 2022 ಪಂಜಾಬ್ ಚುನಾವಣೆ ಸೀಟು ಹಂಚಿಕೆಗಾಗಿ ಮಾತುಕತೆ ನಡೆಸುತ್ತೇನೆ. ಪಂಜಾಬ್ ಮತ್ತು ಅದರ ರೈತರ ಹಿತಾಸಕ್ತಿಗಾಗಿ ನಾನು ಬಲವಾದ ಸಾಮೂಹಿಕ ಶಕ್ತಿಯನ್ನು ನಿರ್ಮಿಸಲು ಬಯಸುತ್ತೇನೆ’ ಎಂದು ಹೇಳಿದ್ದರು.

ಚುನಾವಣಾ ಆಯೋಗವು ಹೆಸರು ಮತ್ತು ಚಿಹ್ನೆಯನ್ನು ಅನುಮತಿಸಿದ ಕೂಡಲೇ ತನ್ನದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಸಿಂಗ್ ಕಳೆದ ವಾರ ಘೋಷಿಸಿದ್ದರು. ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲೂ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದರು. ಪಂಜಾಬ್ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಎಪಿಎಸ್ ಡಿಯೋಲ್ ರಾಜೀನಾಮೆ ತಿರಸ್ಕರಿಸುವ ಮೂಲಕ ನವಜೋತ್ ಸಿಂಗ್ ಸಿಧುಗೆ ಖಡಕ್ ಸಂದೇಶ ರವಾನಿಸಿದ ಪಂಜಾಬ್ ಮುಖ್ಯಮಂತ್ರಿ

Published On - 5:50 pm, Tue, 2 November 21

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ