AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Captain Amarinder Singh ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

"ನನ್ನ ರಾಜ್ಯ ಮತ್ತು ನನ್ನ ದೇಶದ ಹಿತದೃಷ್ಟಿಯಿಂದ ನಾನು ಈ ಮೂಲಕ ಇಂಡಿಯನ್ ನ್ಯಾಷನಲ್  ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತೇನೆ" ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

Captain Amarinder Singh ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್
ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 02, 2021 | 6:12 PM

Share

ದೆಹಲಿ: ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ (Captain Amarinder Singh) ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಸಿಂಗ್, “ನನ್ನ ತೀವ್ರವಾದ ಸಂಯಮದ ಹೊರತಾಗಿಯೂ ಮತ್ತು ಪಂಜಾಬ್‌ನ ಬಹುತೇಕ ಎಲ್ಲಾ ಸಂಸದರ ಒಮ್ಮತದ ಸಲಹೆಯ ಹೊರತಾಗಿಯೂ, ನೀವು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಮತ್ತು ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಸಾರ್ವಜನಿಕವಾಗಿ ಅಪ್ಪಿಕೊಂಡಿದ್ದ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ಆಯ್ಕೆ ಮಾಡಿಕೊಂಡಿದ್ದೀರಿ.  1954ರಲ್ಲಿ ನಾವು ಶಾಲೆಯಲ್ಲಿ ಜತೆಯಾಗಿದ್ದೆವು, ಅಂದರೆ ಈಗ 67 ವರ್ಷಗಳು. ನಾನು ನನ್ನ ಮಕ್ಕಳಂತೆ ತೀವ್ರವಾಗಿ ಪ್ರೀತಿಸುವ ನಿಮ್ಮ ಮಕ್ಕಳ ಅಪ್ಪನನ್ನು ಚೆನ್ನಾಗಿ ಬಲ್ಲೆ. ನಿಮ್ಮ ನಡತೆಯಿಂದ ನನಗೆ ನೋವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. “ನನ್ನ ರಾಜ್ಯ ಮತ್ತು ನನ್ನ ದೇಶದ ಹಿತದೃಷ್ಟಿಯಿಂದ ನಾನು ಈ ಮೂಲಕ ಇಂಡಿಯನ್ ನ್ಯಾಷನಲ್  ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತೇನೆ” ಎಂದು ಸಿಂಗ್ ಹೇಳಿದ್ದಾರೆ.

ಈ ಬಗ್ಗೆ ಟ್ವೇಟ್ ಮಾಡಿದ ಸಿಂಗ್  ರಾಜೀನಾಮೆಯ ಕಾರಣಗಳನ್ನು ಪಟ್ಟಿ ಮಾಡಿ ನಾನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನನ್ನ ರಾಜೀನಾಮೆ ಪತ್ರವನ್ನು ಇವತ್ತು ಕಳುಹಿಸಿದ್ದೇನೆ . ಹೊಸ ಪಕ್ಷದ ಹೆಸರು  ಪಂಜಾಬ್ ಲೋಕ್ ಕಾಂಗ್ರೆಸ್ . ಚುನಾವಣಾ ಆಯೋಗ ಇನ್ನು ಅಂಗೀಕರಿಸಬೇಕಿದೆ. ಪಕ್ಷದ ಚಿಹ್ನೆಗೆ  ಆಮೇಲೆ ಅನುಮತಿ ಸಿಗಲಿದೆ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ, ಪಂಜಾಬ್ ಮಾಜಿ ಸಿಎಂನ ಮಾಧ್ಯಮ ಸಲಹೆಗಾರರ ರವೀನ್ ತುಕ್ರಾಲ್, ಸಿಂಗ್ ಪರವಾಗಿ ಟ್ವೀಟ್ ಮಾಡಿದ್ದು ಕಾಂಗ್ರೆಸ್ ಜೊತೆಗೆ ಬ್ಯಾಕ್ ಎಂಡ್ ಮಾತುಕತೆಯ ವರದಿ ತಪ್ಪಾಗಿದೆ. ಹೊಂದಾಣಿಕೆಯ ಸಮಯ ಮುಗಿದಿದೆ. ಪಕ್ಷದಿಂದ ದೂರ ಸರಿಯುವ ನಿರ್ಧಾರವನ್ನು ಸಾಕಷ್ಟು ಚಿಂತನೆಯ ನಂತರ ತೆಗೆದುಕೊಳ್ಳಲಾಗಿದ್ದು, ಅಂತಿಮವಾಗಿದೆ. ಸೋನಿಯಾ ಗಾಂಧಿ ಅವರ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ, ಆದರೆ ಈಗ ಕಾಂಗ್ರೆಸ್‌ನಲ್ಲಿ ಉಳಿಯುವುದಿಲ್ಲ’

ನಾನು ಶೀಘ್ರದಲ್ಲೇ ನನ್ನ ಸ್ವಂತ ಪಕ್ಷವನ್ನು ಪ್ರಾರಂಭಿಸುತ್ತೇನೆ ಮತ್ತು ರೈತರ ಸಮಸ್ಯೆ ಬಗೆಹರಿದ ನಂತರ ಬಿಜೆಪಿ ಮತ್ತು ಇತರರೊಂದಿಗೆ 2022 ಪಂಜಾಬ್ ಚುನಾವಣೆ ಸೀಟು ಹಂಚಿಕೆಗಾಗಿ ಮಾತುಕತೆ ನಡೆಸುತ್ತೇನೆ. ಪಂಜಾಬ್ ಮತ್ತು ಅದರ ರೈತರ ಹಿತಾಸಕ್ತಿಗಾಗಿ ನಾನು ಬಲವಾದ ಸಾಮೂಹಿಕ ಶಕ್ತಿಯನ್ನು ನಿರ್ಮಿಸಲು ಬಯಸುತ್ತೇನೆ’ ಎಂದು ಹೇಳಿದ್ದರು.

ಚುನಾವಣಾ ಆಯೋಗವು ಹೆಸರು ಮತ್ತು ಚಿಹ್ನೆಯನ್ನು ಅನುಮತಿಸಿದ ಕೂಡಲೇ ತನ್ನದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಸಿಂಗ್ ಕಳೆದ ವಾರ ಘೋಷಿಸಿದ್ದರು. ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲೂ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದರು. ಪಂಜಾಬ್ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಎಪಿಎಸ್ ಡಿಯೋಲ್ ರಾಜೀನಾಮೆ ತಿರಸ್ಕರಿಸುವ ಮೂಲಕ ನವಜೋತ್ ಸಿಂಗ್ ಸಿಧುಗೆ ಖಡಕ್ ಸಂದೇಶ ರವಾನಿಸಿದ ಪಂಜಾಬ್ ಮುಖ್ಯಮಂತ್ರಿ

Published On - 5:50 pm, Tue, 2 November 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?