AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಪ್ರಕರಣ: ಸಿಬಿಐ ತನಿಖೆಯ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋದ ಆರ್‌ಜಿ ಕರ್‌ನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್

ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ಘೋಷ್ ಸುತ್ತಲಿನ ಹೆಚ್ಚಿನ ಪರಿಶೀಲನೆಯ ಮಧ್ಯೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಸೆಪ್ಟೆಂಬರ್ 6 ರಂದು ಪ್ರಸ್ತುತ ಪ್ರಕರಣದ ವಿಚಾರಣೆ ನಡೆಸಲಿದೆ.

ಭ್ರಷ್ಟಾಚಾರ ಪ್ರಕರಣ: ಸಿಬಿಐ ತನಿಖೆಯ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋದ ಆರ್‌ಜಿ ಕರ್‌ನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್
ಸಂದೀಪ್ ಘೋಷ್
ರಶ್ಮಿ ಕಲ್ಲಕಟ್ಟ
|

Updated on:Sep 04, 2024 | 6:56 PM

Share

ದೆಹಲಿ ಸೆಪ್ಟೆಂಬರ್ 04: ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ(RG Kar Medical College) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ಅವರು ತಮ್ಮ ಆಪಾದಿತ ಹಣಕಾಸು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ (Supreme Court) ಮೊರೆ ಹೋಗಿದ್ದಾರೆ. ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ಘೋಷ್ ಸುತ್ತಲಿನ ಹೆಚ್ಚಿನ ಪರಿಶೀಲನೆಯ ಮಧ್ಯೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಸೆಪ್ಟೆಂಬರ್ 6 ರಂದು ಪ್ರಸ್ತುತ ಪ್ರಕರಣದ ವಿಚಾರಣೆ ನಡೆಸಲಿದೆ.

ಮಂಗಳವಾರ, ಕೋಲ್ಕತ್ತಾ ನ್ಯಾಯಾಲಯವು ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಹಣಕಾಸು ಅವ್ಯವಹಾರದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಘೋಷ್ ಮತ್ತು ಇತರ ಮೂವರನ್ನು ಎಂಟು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿತು. ಭ್ರಷ್ಟಾಚಾರ ಪ್ರಕರಣದಲ್ಲಿ “ದೊಡ್ಡ ಸಂಬಂಧ” ಇದೆ ಎಂದು ವಾದಿಸಿ ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) 10 ದಿನಗಳ ಕಸ್ಟಡಿಗೆ ಕೋರಿತ್ತು.

“ನಾವು ಈಗಷ್ಟೇ ನಾಲ್ವರನ್ನು ಬಂಧಿಸಿದ್ದೇವೆ. ದೊಡ್ಡ ನಂಟನ್ನು ಬಹಿರಂಗಪಡಿಸಬೇಕಾಗಿದೆ. ಆದ್ದರಿಂದ ನಾವು ಅವರ ವಿಚಾರಣೆಗೆ ಕೇಳುತ್ತಿದ್ದೇವೆ. ಸಂಪೂರ್ಣ ಸಂಬಂಧವನ್ನು ಬಹಿರಂಗಪಡಿಸಲು ನಮಗೆ ಅವರ ಕಸ್ಟಡಿ ಅಗತ್ಯವಿದೆ” ಎಂದು ಸಿಬಿಐ ಅಲಿಪೋರ್ ನ್ಯಾಯಾಧೀಶರ ನ್ಯಾಯಾಲಯದ ಮುಂದೆ ವಾದಿಸಿತು.

ಸೋಮವಾರ ರಾತ್ರಿ ಫೆಡರಲ್ ಏಜೆನ್ಸಿಯಿಂದ ಬಂಧಿತರಾದ ಘೋಷ್ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆದಿದೆ.

ಇದನ್ನೂ ಓದಿ: ಕೋಲ್ಕತ್ತಾ ಕೊಲೆ ಪ್ರಕರಣ: ನ್ಯಾಯದ ವಿಷಯ ಸುಪ್ರೀಂಕೋರ್ಟಿಗೆ ಬಿಟ್ಟುಬಿಡಿ; ಪ್ರತಿಭಟನಾನಿರತ ವೈದ್ಯರಿಗೆ ಐಎಂಎ ಒತ್ತಾಯ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ), ಸೆಕ್ಷನ್ 420 ಐಪಿಸಿ (ವಂಚನೆ ಮತ್ತು ಅಪ್ರಾಮಾಣಿಕತೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಸಿಬಿಐ ತನ್ನ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಘೋಷ್ ಅವರನ್ನು ಹೆಸರಿಸಿದೆ.

ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಮತ್ತು ಅವರ ಅಧಿಕಾರಾವಧಿಯಲ್ಲಿ ಹಣಕಾಸಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ, ಘೋಷ್ ಅವರನ್ನು ಆಗಸ್ಟ್ 16 ರಿಂದ ವಿಚಾರಣೆ ನಡೆಸುತ್ತಿದೆ. ಏತನ್ಮಧ್ಯೆ, ಘೋಷ್ ಅವರನ್ನು ಅಮಾನತುಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.

“ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಪ್ರೊ (ಡಾ) ಸಂದೀಪ್ ಘೋಷ್ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್ ತನಿಖೆಯ ದೃಷ್ಟಿಯಿಂದ,ಡಾ ಘೋಷ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಪಶ್ಚಿಮ ಬಂಗಾಳ ಸೇವೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1971 ರ ನಿಯಮ 7(1c) ಅಡಿಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Wed, 4 September 24

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?