‘ಅಸ್ತ್ರಾಲಯ’ ವಿಶ್ವಕಪ್​​ನಲ್ಲಿ ಟೀಂ ಇಂಡಿಯಾ ಸೋಲಿಗೆ ಇದೇ ಕಾರಣ: ಮಾರ್ಕಂಡೇಯ ಕಾಟ್ಜು

ದುಬೈ ಅನ್ನು ಮಿಸ್ಟರ್ ದುಬೆ, ಈಜಿಪ್ಟ್ (ಹಿಂದಿಯಲ್ಲಿ ಮಿಸ್ರ್) ಮಿಸ್ಟರ್ ಮಿಶ್ರಾರಿಂದ ಮಾಡಲ್ಪಟ್ಟಿದೆ, ಇಸ್ರೇಲ್ ಅನ್ನು ಯಾದವರು, ಬಹರೇನ್​​  ಅನ್ನು ಭಗವಾನ್ ಬ್ರಹ್ಮ ಮತ್ತು ಸೌದಿ ಅರೇಬಿಯಾವನ್ನು ಸರಸ್ವತಿ ದೇವಿಯಿಂದ ರಚಿಸಲಾಗಿದೆ" ಎಂದು ಇನ್ನೊಬ್ಬ ಬಳಕೆದಾರರು ಕಾಟ್ಜು ಅವರನ್ನು ಲೇವಡಿ ಮಾಡಿದ್ದಾರೆ

'ಅಸ್ತ್ರಾಲಯ' ವಿಶ್ವಕಪ್​​ನಲ್ಲಿ ಟೀಂ ಇಂಡಿಯಾ ಸೋಲಿಗೆ ಇದೇ ಕಾರಣ: ಮಾರ್ಕಂಡೇಯ ಕಾಟ್ಜು
ಮಾರ್ಕಂಡೇಯ ಕಾಟ್ಜು
Follow us
|

Updated on: Nov 20, 2023 | 6:31 PM

ದೆಹಲಿ ನವೆಂಬರ್ 20: ಆಸ್ಟ್ರೇಲಿಯಾ (Australia) ವಿರುದ್ಧ ಭಾರತ ಕ್ರಿಕೆಟ್ ವಿಶ್ವಕಪ್ (ICC world Cup 2023)ಫೈನಲ್‌ನಲ್ಲಿ ಸೋತಾಗಿನಿಂದ, ತಜ್ಞರು ಅದರ ಹಿಂದಿನ ಕಾರಣಗಳನ್ನು ವಿಶ್ಲೇಷಿಸುತ್ತಿದ್ದಾರೆ. ಭಾರತದ ಬ್ಯಾಟಿಂಗ್ ಪ್ರದರ್ಶನದಿಂದ ಫೀಲ್ಡಿಂಗ್‌ನಲ್ಲಿ ಸ್ಲಿಪ್-ಅಪ್‌ಗಳವರೆಗೆ, ರೋಹಿತ್ ಶರ್ಮಾ ನೇತೃತ್ವದ ತಂಡ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿದ್ದರ ಬಗ್ಗೆ ಒಬ್ಬೊಬ್ಬರದ್ದು ಒಂದೊಂದು ರೀತಿಯ ವಿಶ್ಲೇಷಣೆ ಇದೆ.ಆದರೆ ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಾಟ್ಜು (Markandey Katju) ಅವರು ಅತ್ಯಂತ ವಿಲಕ್ಷಣವಾದ ಕಾರಣವನ್ನು ನೀಡಿದ್ದು ಅವರ ಪೋಸ್ಟ್ ವೈರಲ್ ಆಗಿದೆ.

ಪಾಂಡವರ ಕಾಲದಲ್ಲಿ ಆಸ್ಟ್ರೇಲಿಯವು ಭಾರತದ ಶಸ್ತ್ರಾಗಾರವಾಗಿತ್ತು. ಅದಕ್ಕಾಗಿಯೇ ಅದು ಪಂದ್ಯವನ್ನು ಗೆದ್ದಿದೆ ಎಂದು ನ್ಯಾಯಮೂರ್ತಿ ಕಾಟ್ಜು  ಹೇಳಿದ್ದಾರೆ.

“ಆಸ್ಟ್ರೇಲಿಯಾವು ಪಾಂಡವರ ‘ಅಸ್ತ್ರಗಳ’ ಶೇಖರಣಾ ಕೇಂದ್ರವಾಗಿತ್ತು. ಅದನ್ನು ‘ಅಸ್ತ್ರಾಲಯ’ ಎಂದು ಕರೆಯಲಾಗುತ್ತಿತ್ತು. ಇದು ಅವರು ವಿಶ್ವಕಪ್ ಗೆಲ್ಲಲು ನಿಜವಾದ ಕಾರಣ” ಎಂದು ನ್ಯಾಯಮೂರ್ತಿ ಕಾಟ್ಜು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಟ್ಜು ಅವರ ಈ ಪೋಸ್ಟ್ ಬಗ್ಗೆ ನೆಟ್ಟಿಗರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಧನ್ಯವಾದಗಳು ಸರ್… ನಿಮ್ಮ ಹಾಸ್ಯದ ಮೂಲಕ ನೀವು ನಮ್ಮನ್ನು ಗೌರವಿಸಿ ಸ್ವಲ್ಪ ಸಮಯವಾಗಿದೆ” ಎಂದು ಒಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. “ದುಬೈ ಅನ್ನು ಮಿಸ್ಟರ್ ದುಬೆ, ಈಜಿಪ್ಟ್ (ಹಿಂದಿಯಲ್ಲಿ ಮಿಸ್ರ್) ಮಿಸ್ಟರ್ ಮಿಶ್ರಾರಿಂದ ಮಾಡಲ್ಪಟ್ಟಿದೆ, ಇಸ್ರೇಲ್ ಅನ್ನು ಯಾದವರು, ಬಹರೇನ್​​  ಅನ್ನು ಭಗವಾನ್ ಬ್ರಹ್ಮ ಮತ್ತು ಸೌದಿ ಅರೇಬಿಯಾವನ್ನು ಸರಸ್ವತಿ ದೇವಿಯಿಂದ ರಚಿಸಲಾಗಿದೆ” ಎಂದು ಇನ್ನೊಬ್ಬ ಬಳಕೆದಾರರು ಕಾಟ್ಜು ಅವರನ್ನು ಲೇವಡಿ ಮಾಡಿದ್ದಾರೆ

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಕಾಟ್ಜು ಅವರು ತಮ್ಮ ಬಹಿರಂಗ ಅಭಿಪ್ರಾಯಗಳು ಮತ್ತು ಅಸಾಂಪ್ರದಾಯಿಕ ಅಭಿಪ್ರಾಯಗಳಿಗೆ ಹೆಸರುವಾಸಿಯಾಗಿದ್ದಾರೆ. ನ್ಯಾಯಮೂರ್ತಿ ಕಾಟ್ಜು ಅವರು 1970 ರಿಂದ 1991 ರವರೆಗೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದರು. ಏಪ್ರಿಲ್ 2006 ರಲ್ಲಿ ಭಾರತದ ಸುಪ್ರೀಂ ಕೋರ್ಟ್‌ಗೆ ಏರುವ ಮೊದಲು ನ್ಯಾಯಾಂಗದಲ್ಲಿ ವಿವಿಧ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದರು. ಅವರು ಸೆಪ್ಟೆಂಬರ್, 2011 ರಲ್ಲಿ ನಿವೃತ್ತರಾದರು.

ಇದನ್ನೂ ಓದಿ: Fact Check: ವಿಶ್ವಕಪ್ ಪ್ರೆಸೆಂಟೇಷನ್ ಸಮಾರಂಭದಲ್ಲಿ ಪ್ಯಾಟ್ ಕಮಿನ್ಸ್‌ ಕೈಕುಲುಕದೇ ಹೋದರೆ ಮೋದಿ?

ಏತನ್ಮಧ್ಯೆ, ಭಾನುವಾರದ ಸೋಲು ಐದು ತಿಂಗಳಲ್ಲಿ ಆಸ್ಟ್ರೇಲಿಯನ್ನರ ವಿರುದ್ಧದ ಎರಡನೇ ಸೋಲು ಆಗಿದೆ.

ಭಾರತ 1983 ಮತ್ತು 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದುಕೊಂಡಿತು, ಆದರೆ ನಂತರ 2015 ಮತ್ತು 2019 ರಲ್ಲಿ ಸೆಮಿಫೈನಲ್ ಹಂತದಲ್ಲಿ ಎಡವಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ