AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AG Noorani: ಸುಪ್ರೀಂ ಕೋರ್ಟ್‌ನ ಮಾಜಿ ವಕೀಲ, ಸಂವಿಧಾನ ತಜ್ಞ ಎ.ಜಿ ನೂರಾನಿ ನಿಧನ

ಎ.ಜಿ ನೂರಾನಿ ಅವರು ಕಾನೂನು, ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರು "ದಿ ಕಾಶ್ಮೀರ ಕ್ವೆಶ್ಚನ್" ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

AG Noorani: ಸುಪ್ರೀಂ ಕೋರ್ಟ್‌ನ ಮಾಜಿ ವಕೀಲ, ಸಂವಿಧಾನ ತಜ್ಞ ಎ.ಜಿ ನೂರಾನಿ ನಿಧನ
ಎ.ಜಿ ನೂರಾನಿ
ಸುಷ್ಮಾ ಚಕ್ರೆ
|

Updated on: Aug 29, 2024 | 10:49 PM

Share

ಮುಂಬೈ: ಸುಪ್ರೀಂ ಕೋರ್ಟ್‌ನ ಮಾಜಿ ವಕೀಲ, ವಿದ್ವಾಂಸ ಮತ್ತು ರಾಜಕೀಯ ವಿಮರ್ಶಕ ಅಬ್ದುಲ್ ಗಫೂರ್ ನೂರಾನಿ (ಎಜಿ ನೂರಾನಿ) ಇಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷವಾಗಿತ್ತು. ನೂರಾನಿ ಅವರು ಕಾನೂನು, ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು.

ನೂರಾನಿ ಅವರು ದಿ ಕಾಶ್ಮೀರ ಕ್ವೆಶ್ಚನ್, ಭಾರತದಲ್ಲಿ ಸಂವಿಧಾನಾತ್ಮಕ ಪ್ರಶ್ನೆಗಳು, ಆರ್‌ಎಸ್‌ಎಸ್ ಮತ್ತು ಬಿಜೆಪಿ: ಎ ಡಿವಿಷನ್ ಆಫ್ ಲೇಬರ್, ಬದ್ರುದ್ದೀನ್ ತ್ಯಾಬ್ಜಿ ಮಂತ್ರಿಗಳ ದುರ್ವರ್ತನೆ, ಏಷ್ಯನ್ ಭದ್ರತೆಗಾಗಿ ಬ್ರೆಜ್ನೇವ್‌ನ ಯೋಜನೆ, ಅಧ್ಯಕ್ಷೀಯ ವ್ಯವಸ್ಥೆ, ದಿ ಟ್ರಯಲ್ ಆಫ್ ಭಗತ್ ಸಿಂಗ್ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಬೈಡೆನ್​ಗೆ ಪ್ರಧಾನಿ ಮೋದಿ ಫೋನ್; ಉಕ್ರೇನ್ ಸಂಘರ್ಷ, ಬಾಂಗ್ಲಾದೇಶದ ಅಶಾಂತಿ ಕುರಿತು ಚರ್ಚೆ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ನೂರಾನಿ ಅವರ ನಿಧನಕ್ಕೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಇಂದು ಮುಂಜಾನೆ ಎ ಜಿ ನೂರಾನಿ ಎಸ್‌ಬಿ ಅವರ ನಿಧನದ ಬಗ್ಗೆ ಕೇಳಿ ವಿಷಾದವಾಯಿತು. ನೂರಾನಿ ಒಬ್ಬ ನಿಪುಣ ವಕೀಲ, ವಿದ್ವಾಂಸ ಮತ್ತು ರಾಜಕೀಯ ವಿಮರ್ಶಕ. ಅವರು ಕಾನೂನಿನ ವಿಷಯಗಳ ಬಗ್ಗೆ ಮತ್ತು ಕಾಶ್ಮೀರ, ಆರ್​ಎಸ್ಎಸ್ ಮತ್ತು ಸಂವಿಧಾನದಂತಹ ವಿಷಯಗಳ ಬಗ್ಗೆ ವ್ಯಾಪಕವಾಗಿ ಬರೆದಿದ್ದಾರೆ. ಅಲ್ಲಾಹನು ಅವರಿಗೆ ಜನ್ನತ್‌ನಲ್ಲಿ ಅತ್ಯುನ್ನತ ಸ್ಥಾನವನ್ನು ನೀಡಲಿ ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ