AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu | ತಮಿಳುನಾಡಿನ ಮಾಜಿ ಸಚಿವೆ ಇಂದಿರಾ ಕುಮಾರಿಗೆ 5 ವರ್ಷ ಜೈಲು ಶಿಕ್ಷೆ ಪ್ರಕಟ

1991ರಿಂದ 1996ರ ಅವಧಿಯಲ್ಲಿ ಎಐಎಡಿಎಂಕೆ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವೆಯಾಗಿದ್ದ ಇಂದಿರಾ ಕುಮಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

Tamil Nadu | ತಮಿಳುನಾಡಿನ ಮಾಜಿ ಸಚಿವೆ ಇಂದಿರಾ ಕುಮಾರಿಗೆ 5 ವರ್ಷ ಜೈಲು ಶಿಕ್ಷೆ ಪ್ರಕಟ
ಮಾಜಿ ಸಚಿವೆ ಇಂದಿರಾ ಕುಮಾರಿ
TV9 Web
| Edited By: |

Updated on: Sep 29, 2021 | 8:06 PM

Share

ಚೆನ್ನೈ: ತಮಿಳುನಾಡಿನ ಮಾಜಿ ಸಚಿವೆ ಆರ್. ಇಂದಿರಾ ಕುಮಾರಿ ಹಾಗೂ ಆಕೆಯ ಗಂಡನಿಗೆ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ತಮಿಳುನಾಡಿನ ಸಂಸದ/ ಶಾಸಕರ ವಿಶೇಷ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. ಇವರ ಜೊತೆಗೆ ಮಾಜಿ ಐಎಎಸ್​ ಅಧಿಕಾರಿ ಷಣ್ಮುಗಂ ಅವರಿಗೂ ಮೂರು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.

1991ರಿಂದ 1996ರ ಅವಧಿಯಲ್ಲಿ ಎಐಎಡಿಎಂಕೆ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವೆಯಾಗಿದ್ದ ಇಂದಿರಾ ಕುಮಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಹಾಗೇ, ಅವರ ಗಂಡ ಬಾಬು ಅವರಿಗೂ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆ ಅವಧಿಯಲ್ಲಿ ಐಎಎಸ್​ ಅಧಿಕಾರಿಯಾಗಿದ್ದ ಷಣ್ಮುಗಂ ಅವರಿಗೆ 3 ವರ್ಷ ಜೈಲು ಶಿಕ್ಷೆ, ಇಂದಿರಾ ಕುಮಾರಿ ಅವರ ವೈಯಕ್ತಿಕ ಸಹಾಯಕರಾಗಿದ್ದ ವೆಂಕಟಕೃಷ್ಣನ್ ಅವರಿಗೆ 10,000 ರೂ. ದಂಡ ವಿಧಿಸಲಾಗಿದೆ.

ಮಾಜಿ ಸಚಿವೆ ಇಂದಿರಾ ಕುಮಾರಿ ವಿಕಲಚೇತನರಿಗಾಗಿ ಶಾಲೆ ಸ್ಥಾಪಿಸಲು ಇಂದಿರಾ ಕುಮಾರಿಯವರ ಪತಿ ಬಾಬು ನಡೆಸುತ್ತಿರುವ ಟ್ರಸ್ಟ್‌ಗೆ ನೀಡಲಾದ 15.45 ಲಕ್ಷ ರೂ. ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು. ಜಯಲಲಿತಾ ಅವರ ಸರ್ಕಾರದಲ್ಲಿ ಸಮಾಜಕಲ್ಯಾಣ ಸಚಿವೆಯಾಗಿದ್ದ ಇಂದಿರಾ ಕುಮಾರಿ ಬಳಿಕ ಎಐಎಡಿಎಂಕೆ ತೊರೆದು ಡಿಎಂಕೆ ಪಕ್ಷ ಸೇರಿದ್ದರು.

ಇಂದು ಅವರಿಗೆ ಜೈಲು ಶಿಕ್ಷೆ ಪ್ರಕಟವಾಗುತ್ತಿದ್ದಂತೆ ತೀವ್ರವಾಗಿ ಅಸ್ವಸ್ಥಗೊಂಡ ಇಂದಿರಾ ಕುಮಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಇಂದಿರಾ ಕುಮಾರಿ ಪೂರ್ತಿಯಾಗಿ ಗುಣವಾದ ಬಳಿಕ ಆಸ್ಪತ್ರೆಯಿಂದ ಜೈಲಿಗೆ ಕರೆದುಕೊಂಡು ಹೋಗಲಾಗುವುದು.

ಇದನ್ನೂ ಓದಿ: ಕುಳಿತುಕೊಳ್ಳುವ ಹಕ್ಕುಗಳಿಗಾಗಿ ದನಿಯೆತ್ತಿದ ಕೇರಳ, ತಮಿಳುನಾಡಿನ ಕಾರ್ಮಿಕರು; ಏನಿದು ಕುಳಿತುಕೊಳ್ಳುವ ಹಕ್ಕು?

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿ ಬಂಧನ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ