AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu | ತಮಿಳುನಾಡಿನ ಮಾಜಿ ಸಚಿವೆ ಇಂದಿರಾ ಕುಮಾರಿಗೆ 5 ವರ್ಷ ಜೈಲು ಶಿಕ್ಷೆ ಪ್ರಕಟ

1991ರಿಂದ 1996ರ ಅವಧಿಯಲ್ಲಿ ಎಐಎಡಿಎಂಕೆ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವೆಯಾಗಿದ್ದ ಇಂದಿರಾ ಕುಮಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

Tamil Nadu | ತಮಿಳುನಾಡಿನ ಮಾಜಿ ಸಚಿವೆ ಇಂದಿರಾ ಕುಮಾರಿಗೆ 5 ವರ್ಷ ಜೈಲು ಶಿಕ್ಷೆ ಪ್ರಕಟ
ಮಾಜಿ ಸಚಿವೆ ಇಂದಿರಾ ಕುಮಾರಿ
TV9 Web
| Edited By: |

Updated on: Sep 29, 2021 | 8:06 PM

Share

ಚೆನ್ನೈ: ತಮಿಳುನಾಡಿನ ಮಾಜಿ ಸಚಿವೆ ಆರ್. ಇಂದಿರಾ ಕುಮಾರಿ ಹಾಗೂ ಆಕೆಯ ಗಂಡನಿಗೆ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ತಮಿಳುನಾಡಿನ ಸಂಸದ/ ಶಾಸಕರ ವಿಶೇಷ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. ಇವರ ಜೊತೆಗೆ ಮಾಜಿ ಐಎಎಸ್​ ಅಧಿಕಾರಿ ಷಣ್ಮುಗಂ ಅವರಿಗೂ ಮೂರು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.

1991ರಿಂದ 1996ರ ಅವಧಿಯಲ್ಲಿ ಎಐಎಡಿಎಂಕೆ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವೆಯಾಗಿದ್ದ ಇಂದಿರಾ ಕುಮಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಹಾಗೇ, ಅವರ ಗಂಡ ಬಾಬು ಅವರಿಗೂ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆ ಅವಧಿಯಲ್ಲಿ ಐಎಎಸ್​ ಅಧಿಕಾರಿಯಾಗಿದ್ದ ಷಣ್ಮುಗಂ ಅವರಿಗೆ 3 ವರ್ಷ ಜೈಲು ಶಿಕ್ಷೆ, ಇಂದಿರಾ ಕುಮಾರಿ ಅವರ ವೈಯಕ್ತಿಕ ಸಹಾಯಕರಾಗಿದ್ದ ವೆಂಕಟಕೃಷ್ಣನ್ ಅವರಿಗೆ 10,000 ರೂ. ದಂಡ ವಿಧಿಸಲಾಗಿದೆ.

ಮಾಜಿ ಸಚಿವೆ ಇಂದಿರಾ ಕುಮಾರಿ ವಿಕಲಚೇತನರಿಗಾಗಿ ಶಾಲೆ ಸ್ಥಾಪಿಸಲು ಇಂದಿರಾ ಕುಮಾರಿಯವರ ಪತಿ ಬಾಬು ನಡೆಸುತ್ತಿರುವ ಟ್ರಸ್ಟ್‌ಗೆ ನೀಡಲಾದ 15.45 ಲಕ್ಷ ರೂ. ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು. ಜಯಲಲಿತಾ ಅವರ ಸರ್ಕಾರದಲ್ಲಿ ಸಮಾಜಕಲ್ಯಾಣ ಸಚಿವೆಯಾಗಿದ್ದ ಇಂದಿರಾ ಕುಮಾರಿ ಬಳಿಕ ಎಐಎಡಿಎಂಕೆ ತೊರೆದು ಡಿಎಂಕೆ ಪಕ್ಷ ಸೇರಿದ್ದರು.

ಇಂದು ಅವರಿಗೆ ಜೈಲು ಶಿಕ್ಷೆ ಪ್ರಕಟವಾಗುತ್ತಿದ್ದಂತೆ ತೀವ್ರವಾಗಿ ಅಸ್ವಸ್ಥಗೊಂಡ ಇಂದಿರಾ ಕುಮಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಇಂದಿರಾ ಕುಮಾರಿ ಪೂರ್ತಿಯಾಗಿ ಗುಣವಾದ ಬಳಿಕ ಆಸ್ಪತ್ರೆಯಿಂದ ಜೈಲಿಗೆ ಕರೆದುಕೊಂಡು ಹೋಗಲಾಗುವುದು.

ಇದನ್ನೂ ಓದಿ: ಕುಳಿತುಕೊಳ್ಳುವ ಹಕ್ಕುಗಳಿಗಾಗಿ ದನಿಯೆತ್ತಿದ ಕೇರಳ, ತಮಿಳುನಾಡಿನ ಕಾರ್ಮಿಕರು; ಏನಿದು ಕುಳಿತುಕೊಳ್ಳುವ ಹಕ್ಕು?

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿ ಬಂಧನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!