AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಇಟಾಲಾ ರಾಜೇಂದರ್ ಬಿಜೆಪಿಗೆ ಸೇರ್ಪಡೆ; ಭೂಕಬಳಿಕೆ ಆರೋಪದಡಿ ಟಿಆರ್​ಎಸ್​ ತೊರೆದಿದ್ದರು..

ರಾಜೇಂದರ್​ ಟಿಆರ್​ಎಸ್​ನಲ್ಲಿ ಪ್ರಭಾವಿ ನಾಯಕರಾಗಿದ್ದರು. ಹಣಕಾಸು ಮತ್ತು ಆರೋಗ್ಯ ಇಲಾಖೆಯಂತ ಉನ್ನತ ಇಲಾಖೆಗಳ ಜವಾಬ್ದಾರಿ ನಿರ್ವಹಿಸಿದ್ದರು. ಆದರೆ ಇವರ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿತ್ತು.

ಮಾಜಿ ಸಚಿವ ಇಟಾಲಾ ರಾಜೇಂದರ್ ಬಿಜೆಪಿಗೆ ಸೇರ್ಪಡೆ; ಭೂಕಬಳಿಕೆ ಆರೋಪದಡಿ ಟಿಆರ್​ಎಸ್​ ತೊರೆದಿದ್ದರು..
ಬಿಜೆಪಿಗೆ ಸೇರ್ಪಡೆಯಾದ ಇಟಾಲಾ ರಾಜೇಂದರ್​​
TV9 Web
| Edited By: |

Updated on:Jun 14, 2021 | 2:27 PM

Share

ದೆಹಲಿ: ಇತ್ತೀಚೆಗಷ್ಟೇ ಟಿಆರ್​ಎಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದ, ತೆಲಂಗಾಣ ಮಾಜಿ ಸಚಿವ ಇಟಾಲಾ ರಾಜೇಂದರ್​ ಇಂದು ಬಿಜೆಪಿಗೆ ಸೇರ್ಪಡೆಯಾದರು. ಹುಜುರಾಬಾದ್​ ಕ್ಷೇತ್ರದ ಶಾಸಕರೂ ಆಗಿದ್ದ ಇವರು ಟಿಆರ್​ಎಸ್​ ಸರ್ಕಾರದ ಸಂಪುಟದಲ್ಲಿ ಆರೋಗ್ಯ ಇಲಾಖೆ ಸಚಿವರಾಗಿದ್ದರು. ಆದರೆ ಭೂಕಬಳಿಕೆ ಆರೋಪದಡಿ ರಾಜೇಂದರ್​​ರನ್ನು ಸಂಪುಟದಿಂದ ಉಚ್ಚಾಟಿಸಲಾಗಿತ್ತು. ಅದಾದ ಬಳಿಕ ರಾಜೇಂದರ್​ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾಗಿದ್ದರು. ಇಟಾಲಾ ರಾಜೇಂದರ್​ ಬಿಜೆಪಿ ಸೇರ್ಪಡೆ ಬಗ್ಗೆ ತುಂಬದಿನಗಳಿಂದಲೂ ಊಹಾಪೋಹಗಳು ಹರಿದಾಡುತ್ತಲೇ ಇದ್ದವು.

ಇಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಸಮ್ಮುಖದಲ್ಲಿ ಇಟಾಲಾ ರಾಜೇಂದರ್​ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಪ್ರಧಾನ್​, ನಾವು ಇಟಾಲಾ ರಾಜೇಂದರ್​ ಅವರನ್ನು ಸಂತೋಷದಿಂದ ಬಿಜೆಪಿಗೆ ಸ್ವಾಗತಿಸುತ್ತೇವೆ. ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಖಂಡಿತ ನಾವು ಅಧಿಕಾರ ಹಿಡಿಯುತ್ತೇವೆ ಎಂದು ಹೇಳಿದರು.

ರಾಜೇಂದರ್​ ಟಿಆರ್​ಎಸ್​ನಲ್ಲಿ ಪ್ರಭಾವಿ ನಾಯಕರಾಗಿದ್ದರು. ಹಣಕಾಸು ಮತ್ತು ಆರೋಗ್ಯ ಇಲಾಖೆಯಂತ ಉನ್ನತ ಇಲಾಖೆಗಳ ಜವಾಬ್ದಾರಿ ನಿರ್ವಹಿಸಿದ್ದರು. ಆದರೆ ಇವರ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿತ್ತು. ಮೇದಕ್​ ಜಿಲ್ಲೆಯ ಹೊರವಲಯ ಅಚಾಂಪೇಟ್​​ನಲ್ಲಿರುವ ಭೂಮಿಯನ್ನು ಇಟೆಲಾ ರಾಜೇಂದರ್​ ಅವರ ಕುಟುಂಬಕ್ಕೆ ಸೇರಿದ ಜಮುನಾ ಹ್ಯಾಚರೀಸ್​ ಸಂಸ್ಥೆ ಕಬಳಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದಂತೆ, ಇಟಾಲಾರನ್ನು ಆರೋಗ್ಯ ಇಲಾಖೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಈ ಬಗ್ಗೆ ರಾಜೇಂದರ್ ತೀವ್ರ ಅಸಮಾಧಾನ ಹೊರಹಾಕಿದ್ದರು. ನನ್ನ ವಿರುದ್ಧ ಆರೋಪದ ವಿಚಾರಣೆ ಮುಗಿಯುವ ಮೊದಲೇ ಸಂಪುಟದಿಂದ ಕೈಬಿಡಲಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಇಟಾಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ

Published On - 2:13 pm, Mon, 14 June 21

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!