AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದು

MJ Akbar-Priya Ramani Case: ರಮಣಿ ನನ್ನ ಮರ್ಯಾದೆಯನ್ನು ಕಳೆದಿದ್ದಾರೆ ಎಂದು ಆರೋಪಿಸಿ ಅಕ್ಬರ್​ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದು
ಎಂ.ಜೆ.ಅಕ್ಬರ್ ಮತ್ತು ಪ್ರಿಯಾ ರಮಣಿ
ರಾಜೇಶ್ ದುಗ್ಗುಮನೆ
|

Updated on:Feb 17, 2021 | 3:52 PM

Share

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಕ್ರಿಮಿನಲ್​ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​ ರದ್ದು ಮಾಡಿದೆ. ತನಗಾದ ಕಹಿ ಅನುಭವವನ್ನು ಹಲವು ವರ್ಷಗಳ ನಂತರವೂ ವ್ಯಕ್ತಪಡಿಸುವ ಹಕ್ಕನ್ನು ಮಹಿಳೆ ಹೊಂದಿದ್ದಾಳೆ ಎಂದು ಕೋರ್ಟ್​ ಹೇಳಿದೆ.

2018ರಲ್ಲಿ #Metoo ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಚಿತ್ರರಂಗದವರು ಸೇರಿ ಅನೇಕ ಕ್ಷೇತ್ರದ ಮಹಿಳೆಯರು ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಮೌನ ಮುರಿದಿದ್ದರು. ಆಗ ಪತ್ರಕರ್ತೆ ಪ್ರಿಯಾ ರಮಣಿ ಕೂಡ ಮುಂದೆ ಬಂದು, ಎಂ.ಜೆ.ಅಕ್ಬರ್​ ತಮಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪಿಸಿದ್ದರು.

ಪ್ರಿಯಾ ರಮಣಿ ಹೇಳುವ ಪ್ರಕಾರ, 1993ರಲ್ಲಿ ಉದ್ಯೋಗ ನೀಡುವದಾಗಿ ಮುಂಬೈ ಹೋಟೆಲ್​ಗೆ ಕರೆಸಿ ಅಕ್ಬರ್​ ಲೈಂಗಿಕವಾಗಿ ಕಿರುಕುಳ ನೀಡಿದ್ದರಂತೆ. ಪ್ರಿಯಾ ರಮಣಿ ಈ ಹೇಳಿಕೆ ನೀಡುತ್ತಿದ್ದಂತೆ ಈ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ರಾಜಕೀಯ ವಯಲದಲ್ಲಿ ಈ ಸುದ್ದಿ ಅಲ್ಲೋಲ-ಲಲ್ಲೋಲ್ಲವನ್ನೇ ಎಬ್ಬಿಸಿತ್ತು. ಹೀಗಾಗಿ, 2018ರ ಅಕ್ಟೋಬರ್​ 17ರಂದು ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್​ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಇದನ್ನೂ ಓದಿ: ‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ರಮಣಿ ನನ್ನ ಮರ್ಯಾದೆ ಕಳೆದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಅಕ್ಬರ್​ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​, ಮಹಿಳೆ ತನಗಾದ ಕಿರುಕುಳದ ಬಗ್ಗೆ ಅನೇಕ ವರ್ಷಗಳ ನಂತರವೂ ಮಾತನಾಡುವ ಹಕ್ಕನ್ನು ಹೊಂದಿದ್ದಾಳೆ ಎಂದಿದೆ.

ಮಧ್ಯಾಹ್ನ 2 ಗಂಟೆಗೆ ತೀರ್ಪು ಪ್ರಕಟವಾಗಬೇಕಿತ್ತು. ಆದರೆ, ತೀರ್ಪಿನಲ್ಲಿ ಸಣ್ಣ ಬದಲಾವಣೆ ಇದ್ದಿದ್ದರಿಂದ ತೀರ್ಪು ಪ್ರಕಟಣೆಯಲ್ಲಿ ಕೊಂಚ ವಿಳಂಬವಾಗಿದೆ.

Published On - 3:45 pm, Wed, 17 February 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?