AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದು

MJ Akbar-Priya Ramani Case: ರಮಣಿ ನನ್ನ ಮರ್ಯಾದೆಯನ್ನು ಕಳೆದಿದ್ದಾರೆ ಎಂದು ಆರೋಪಿಸಿ ಅಕ್ಬರ್​ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದು
ಎಂ.ಜೆ.ಅಕ್ಬರ್ ಮತ್ತು ಪ್ರಿಯಾ ರಮಣಿ
ರಾಜೇಶ್ ದುಗ್ಗುಮನೆ
|

Updated on:Feb 17, 2021 | 3:52 PM

Share

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಕ್ರಿಮಿನಲ್​ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​ ರದ್ದು ಮಾಡಿದೆ. ತನಗಾದ ಕಹಿ ಅನುಭವವನ್ನು ಹಲವು ವರ್ಷಗಳ ನಂತರವೂ ವ್ಯಕ್ತಪಡಿಸುವ ಹಕ್ಕನ್ನು ಮಹಿಳೆ ಹೊಂದಿದ್ದಾಳೆ ಎಂದು ಕೋರ್ಟ್​ ಹೇಳಿದೆ.

2018ರಲ್ಲಿ #Metoo ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಚಿತ್ರರಂಗದವರು ಸೇರಿ ಅನೇಕ ಕ್ಷೇತ್ರದ ಮಹಿಳೆಯರು ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಮೌನ ಮುರಿದಿದ್ದರು. ಆಗ ಪತ್ರಕರ್ತೆ ಪ್ರಿಯಾ ರಮಣಿ ಕೂಡ ಮುಂದೆ ಬಂದು, ಎಂ.ಜೆ.ಅಕ್ಬರ್​ ತಮಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪಿಸಿದ್ದರು.

ಪ್ರಿಯಾ ರಮಣಿ ಹೇಳುವ ಪ್ರಕಾರ, 1993ರಲ್ಲಿ ಉದ್ಯೋಗ ನೀಡುವದಾಗಿ ಮುಂಬೈ ಹೋಟೆಲ್​ಗೆ ಕರೆಸಿ ಅಕ್ಬರ್​ ಲೈಂಗಿಕವಾಗಿ ಕಿರುಕುಳ ನೀಡಿದ್ದರಂತೆ. ಪ್ರಿಯಾ ರಮಣಿ ಈ ಹೇಳಿಕೆ ನೀಡುತ್ತಿದ್ದಂತೆ ಈ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ರಾಜಕೀಯ ವಯಲದಲ್ಲಿ ಈ ಸುದ್ದಿ ಅಲ್ಲೋಲ-ಲಲ್ಲೋಲ್ಲವನ್ನೇ ಎಬ್ಬಿಸಿತ್ತು. ಹೀಗಾಗಿ, 2018ರ ಅಕ್ಟೋಬರ್​ 17ರಂದು ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್​ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಇದನ್ನೂ ಓದಿ: ‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ರಮಣಿ ನನ್ನ ಮರ್ಯಾದೆ ಕಳೆದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಅಕ್ಬರ್​ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​, ಮಹಿಳೆ ತನಗಾದ ಕಿರುಕುಳದ ಬಗ್ಗೆ ಅನೇಕ ವರ್ಷಗಳ ನಂತರವೂ ಮಾತನಾಡುವ ಹಕ್ಕನ್ನು ಹೊಂದಿದ್ದಾಳೆ ಎಂದಿದೆ.

ಮಧ್ಯಾಹ್ನ 2 ಗಂಟೆಗೆ ತೀರ್ಪು ಪ್ರಕಟವಾಗಬೇಕಿತ್ತು. ಆದರೆ, ತೀರ್ಪಿನಲ್ಲಿ ಸಣ್ಣ ಬದಲಾವಣೆ ಇದ್ದಿದ್ದರಿಂದ ತೀರ್ಪು ಪ್ರಕಟಣೆಯಲ್ಲಿ ಕೊಂಚ ವಿಳಂಬವಾಗಿದೆ.

Published On - 3:45 pm, Wed, 17 February 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ