AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದು

MJ Akbar-Priya Ramani Case: ರಮಣಿ ನನ್ನ ಮರ್ಯಾದೆಯನ್ನು ಕಳೆದಿದ್ದಾರೆ ಎಂದು ಆರೋಪಿಸಿ ಅಕ್ಬರ್​ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದು
ಎಂ.ಜೆ.ಅಕ್ಬರ್ ಮತ್ತು ಪ್ರಿಯಾ ರಮಣಿ
ರಾಜೇಶ್ ದುಗ್ಗುಮನೆ
|

Updated on:Feb 17, 2021 | 3:52 PM

Share

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಕ್ರಿಮಿನಲ್​ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​ ರದ್ದು ಮಾಡಿದೆ. ತನಗಾದ ಕಹಿ ಅನುಭವವನ್ನು ಹಲವು ವರ್ಷಗಳ ನಂತರವೂ ವ್ಯಕ್ತಪಡಿಸುವ ಹಕ್ಕನ್ನು ಮಹಿಳೆ ಹೊಂದಿದ್ದಾಳೆ ಎಂದು ಕೋರ್ಟ್​ ಹೇಳಿದೆ.

2018ರಲ್ಲಿ #Metoo ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಚಿತ್ರರಂಗದವರು ಸೇರಿ ಅನೇಕ ಕ್ಷೇತ್ರದ ಮಹಿಳೆಯರು ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಮೌನ ಮುರಿದಿದ್ದರು. ಆಗ ಪತ್ರಕರ್ತೆ ಪ್ರಿಯಾ ರಮಣಿ ಕೂಡ ಮುಂದೆ ಬಂದು, ಎಂ.ಜೆ.ಅಕ್ಬರ್​ ತಮಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪಿಸಿದ್ದರು.

ಪ್ರಿಯಾ ರಮಣಿ ಹೇಳುವ ಪ್ರಕಾರ, 1993ರಲ್ಲಿ ಉದ್ಯೋಗ ನೀಡುವದಾಗಿ ಮುಂಬೈ ಹೋಟೆಲ್​ಗೆ ಕರೆಸಿ ಅಕ್ಬರ್​ ಲೈಂಗಿಕವಾಗಿ ಕಿರುಕುಳ ನೀಡಿದ್ದರಂತೆ. ಪ್ರಿಯಾ ರಮಣಿ ಈ ಹೇಳಿಕೆ ನೀಡುತ್ತಿದ್ದಂತೆ ಈ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ರಾಜಕೀಯ ವಯಲದಲ್ಲಿ ಈ ಸುದ್ದಿ ಅಲ್ಲೋಲ-ಲಲ್ಲೋಲ್ಲವನ್ನೇ ಎಬ್ಬಿಸಿತ್ತು. ಹೀಗಾಗಿ, 2018ರ ಅಕ್ಟೋಬರ್​ 17ರಂದು ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್​ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಇದನ್ನೂ ಓದಿ: ‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ರಮಣಿ ನನ್ನ ಮರ್ಯಾದೆ ಕಳೆದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಅಕ್ಬರ್​ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​, ಮಹಿಳೆ ತನಗಾದ ಕಿರುಕುಳದ ಬಗ್ಗೆ ಅನೇಕ ವರ್ಷಗಳ ನಂತರವೂ ಮಾತನಾಡುವ ಹಕ್ಕನ್ನು ಹೊಂದಿದ್ದಾಳೆ ಎಂದಿದೆ.

ಮಧ್ಯಾಹ್ನ 2 ಗಂಟೆಗೆ ತೀರ್ಪು ಪ್ರಕಟವಾಗಬೇಕಿತ್ತು. ಆದರೆ, ತೀರ್ಪಿನಲ್ಲಿ ಸಣ್ಣ ಬದಲಾವಣೆ ಇದ್ದಿದ್ದರಿಂದ ತೀರ್ಪು ಪ್ರಕಟಣೆಯಲ್ಲಿ ಕೊಂಚ ವಿಳಂಬವಾಗಿದೆ.

Published On - 3:45 pm, Wed, 17 February 21

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!