Sharad Yadav Passes Away ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ ನಿಧನ

Sharad Yadav Passes Away ಕೇಂದ್ರ ಮಾಜಿ ಸಚಿವ ಶರದ್ ಯಾದವ್ (75) ನಿಧನರಾಗಿದ್ದಾರೆ.

Sharad Yadav Passes Away ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ ನಿಧನ
ಶರದ್ ಯಾದವ್
Follow us
| Edited By: ರಮೇಶ್ ಬಿ. ಜವಳಗೇರಾ

Updated on:Jan 12, 2023 | 11:37 PM

ಹಿರಿಯ ಸಮಾಜವಾದಿ ನಾಯಕ,  ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ (75)(Sharad Yadav) ನಿಧನರಾಗಿದ್ದಾರೆ. ಶರದ್ ಯಾದವ್‌ ನಿಧನದ ಬಗ್ಗೆ ಪುತ್ರಿ ಟ್ವೀಟ್‌ ಮೂಲಕ ಖಚಿತಪಡಿಸಿದ್ದಾರೆ. ಇತ್ತೀಚೆಗೆ ಶರದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜನವರಿ 12)ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಎಲ್ಲಾ ಪ್ರಯತ್ನದ ಹೊರತಾಗಿಯೂ ಯಾದವ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.ಇಂದು(ಜ.12) ರಾತ್ರಿ 10:19ಕ್ಕೆ ಸಾವನ್ನಪ್ಪಿದ್ದಾರೆ ಎಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆ ತಿಳಿಸಿದೆ. 1947ರ ಜುಲೈ 1ರಂದು ಜನಿಸಿದ್ದ ಶರದ್ ಯಾದವ್‌, ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಅತ್ಯಂತ ಆಪ್ತರಾಗಿದ್ದರು.

2003ರಿಂದ 2016ರವರೆಗೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ಮಧ್ಯಪ್ರದೇಶದ ಜಬಲ್ಪುರದಿಂದ ಮೊದಲ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದ ಶರದ್ ಯಾದವ್‌, ಲೋಕಸಭೆ ಸದಸ್ಯರಾಗಿ 7 ಸಲ, ರಾಜ್ಯಸಭೆ ಸದಸ್ಯರಾಗಿ 4 ಸಲ ಆಯ್ಕೆಯಾಗಿದ್ದರು.

ವಿ.ಪಿ.ಸಿಂಗ್‌, ವಾಜಪೇಯಿರವರ ಸರ್ಕಾರದಲ್ಲಿ ಕೇಂದ್ರದ ಜವಳಿ ಮತ್ತು ಆಹಾರ ಸಂಸ್ಕರಣಾ, ಕಾರ್ಮಿಕ ಇಲಾಖೆ, ನಾಗರಿಕ ವಿಮಾನಯಾನ, ಆಹಾರ ಸಚಿವರಾಗಿದ್ದರು.

1997ರಲ್ಲಿ ಲಾಲು ಪ್ರಸಾದ್ ಯಾದವ್ ಜನತಾ ದಳದಿಂದ ಬೇರ್ಪಟ್ಟು ತಮ್ಮದೇ ಆದ ರಾಷ್ಟ್ರೀಯ ಜನತಾ ದಳವನ್ನು ಸ್ಥಾಪಿಸಿದ್ದರು. ಅದಾದ ನಂತರ ನಿತೀಶ್ ಕುಮಾರ್ ಜೊತೆಗೆ ಶರದ್ ಯಾದವ್ ಸುದೀರ್ಘ ರಾಜಕೀಯ ಪಯಣ ಮಾಡಿದ್ದರು. ಇಬ್ಬರ ನಡುವಿನ ಬಿರುಕಿನ ನಂತರ, ಶರದ್ ಯಾದವ್ ಅವರು ಲೋಕ ತಾಂತ್ರಿಕ ಜನತಾ ದಳ ಎಂಬ ಪಕ್ಷವನ್ನು ಸ್ಥಾಪಿಸಿದ್ದರು. ಇತ್ತೀಚೆಗೆ ಆ ಪಕ್ಷವನ್ನು ಲಾಲು ಪ್ರಸಾದ್ ಪಕ್ಷದಲ್ಲಿ ವಿಲೀನಗೊಳಿಸಿದ್ದರು. ಇದರೊಂದಿಗೆ 1997ರಲ್ಲಿ ಬೇರ್ಪಟ್ಟಿದ್ದ ಈ ನಾಯಕರು 25 ವರ್ಷದ ನಂತರ ಒಂದಾಗಿದ್ದರು.

Published On - 11:15 pm, Thu, 12 January 23

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ