AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sharad Yadav Passes Away ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ ನಿಧನ

Sharad Yadav Passes Away ಕೇಂದ್ರ ಮಾಜಿ ಸಚಿವ ಶರದ್ ಯಾದವ್ (75) ನಿಧನರಾಗಿದ್ದಾರೆ.

Sharad Yadav Passes Away ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ ನಿಧನ
ಶರದ್ ಯಾದವ್
TV9 Web
| Edited By: |

Updated on:Jan 12, 2023 | 11:37 PM

Share

ಹಿರಿಯ ಸಮಾಜವಾದಿ ನಾಯಕ,  ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ (75)(Sharad Yadav) ನಿಧನರಾಗಿದ್ದಾರೆ. ಶರದ್ ಯಾದವ್‌ ನಿಧನದ ಬಗ್ಗೆ ಪುತ್ರಿ ಟ್ವೀಟ್‌ ಮೂಲಕ ಖಚಿತಪಡಿಸಿದ್ದಾರೆ. ಇತ್ತೀಚೆಗೆ ಶರದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜನವರಿ 12)ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಎಲ್ಲಾ ಪ್ರಯತ್ನದ ಹೊರತಾಗಿಯೂ ಯಾದವ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.ಇಂದು(ಜ.12) ರಾತ್ರಿ 10:19ಕ್ಕೆ ಸಾವನ್ನಪ್ಪಿದ್ದಾರೆ ಎಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆ ತಿಳಿಸಿದೆ. 1947ರ ಜುಲೈ 1ರಂದು ಜನಿಸಿದ್ದ ಶರದ್ ಯಾದವ್‌, ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಅತ್ಯಂತ ಆಪ್ತರಾಗಿದ್ದರು.

2003ರಿಂದ 2016ರವರೆಗೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ಮಧ್ಯಪ್ರದೇಶದ ಜಬಲ್ಪುರದಿಂದ ಮೊದಲ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದ ಶರದ್ ಯಾದವ್‌, ಲೋಕಸಭೆ ಸದಸ್ಯರಾಗಿ 7 ಸಲ, ರಾಜ್ಯಸಭೆ ಸದಸ್ಯರಾಗಿ 4 ಸಲ ಆಯ್ಕೆಯಾಗಿದ್ದರು.

ವಿ.ಪಿ.ಸಿಂಗ್‌, ವಾಜಪೇಯಿರವರ ಸರ್ಕಾರದಲ್ಲಿ ಕೇಂದ್ರದ ಜವಳಿ ಮತ್ತು ಆಹಾರ ಸಂಸ್ಕರಣಾ, ಕಾರ್ಮಿಕ ಇಲಾಖೆ, ನಾಗರಿಕ ವಿಮಾನಯಾನ, ಆಹಾರ ಸಚಿವರಾಗಿದ್ದರು.

1997ರಲ್ಲಿ ಲಾಲು ಪ್ರಸಾದ್ ಯಾದವ್ ಜನತಾ ದಳದಿಂದ ಬೇರ್ಪಟ್ಟು ತಮ್ಮದೇ ಆದ ರಾಷ್ಟ್ರೀಯ ಜನತಾ ದಳವನ್ನು ಸ್ಥಾಪಿಸಿದ್ದರು. ಅದಾದ ನಂತರ ನಿತೀಶ್ ಕುಮಾರ್ ಜೊತೆಗೆ ಶರದ್ ಯಾದವ್ ಸುದೀರ್ಘ ರಾಜಕೀಯ ಪಯಣ ಮಾಡಿದ್ದರು. ಇಬ್ಬರ ನಡುವಿನ ಬಿರುಕಿನ ನಂತರ, ಶರದ್ ಯಾದವ್ ಅವರು ಲೋಕ ತಾಂತ್ರಿಕ ಜನತಾ ದಳ ಎಂಬ ಪಕ್ಷವನ್ನು ಸ್ಥಾಪಿಸಿದ್ದರು. ಇತ್ತೀಚೆಗೆ ಆ ಪಕ್ಷವನ್ನು ಲಾಲು ಪ್ರಸಾದ್ ಪಕ್ಷದಲ್ಲಿ ವಿಲೀನಗೊಳಿಸಿದ್ದರು. ಇದರೊಂದಿಗೆ 1997ರಲ್ಲಿ ಬೇರ್ಪಟ್ಟಿದ್ದ ಈ ನಾಯಕರು 25 ವರ್ಷದ ನಂತರ ಒಂದಾಗಿದ್ದರು.

Published On - 11:15 pm, Thu, 12 January 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?