AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪದಿಂದ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಖುಲಾಸೆ

ಕೋರ್ಟ್​ನಲ್ಲಿ ವಿಚಾರಣೆ ಬಳಿಕ ಅಂತಿಮವಾಗಿ ಈಗ ಅತ್ಯಾಚಾರ ಮತ್ತು ಜೀವ ಬೇದರಿಕೆ ಆರೋಪಿ ಸ್ವಾಮಿ ಚಿನ್ಮಯಾನಂದ ಅವರು ಆರೋಪ ಮುಕ್ತರಾಗಿದ್ದಾರೆ. ಇನ್ನು ಸ್ವಾಮಿ ಚಿನ್ಮಯಾನಂದ ಅವರ ಈ ಪ್ರಕರಣ ಕರ್ನಾಟಕದ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಾಮ್ಯತೆ ಹೊಂದಿದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು.

ಅತ್ಯಾಚಾರ ಆರೋಪದಿಂದ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಖುಲಾಸೆ
ಸ್ವಾಮಿ ಚಿನ್ಮಯಾನಂದ
preethi shettigar
|

Updated on: Mar 27, 2021 | 10:19 AM

Share

ದೆಹಲಿ: ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಬಿಡುಗಡೆಯಾಗಿದ್ದಾರೆ. ಸ್ವಾಮಿ ಚಿನ್ಮಯಾನಂದ ಅವರ ಟ್ರಸ್ಟ್​ನ ಶಹಜಾನ್​ಪುರ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಮಾಡಲಾಗಿತ್ತು. ಈ ನಿಟ್ಟಿನಲ್ಲಿ 2019 ರ ಸೆಪ್ಟೆಂಬರ್​ನಲ್ಲಿ ಸ್ವಾಮಿ ಚಿನ್ಮಯಾನಂದರನ್ನು ಬಂಧಿಸಲಾಗಿತ್ತು. ಆದರೆ ಮೂರು ವರ್ಷಗಳ ನಂತರ ಲಕ್ನೋದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸ್ವಾಮಿ ಚಿನ್ಮಯಾನಂದರನ್ನು ಖುಲಾಸೆಗೊಳಿಸಿದೆ.

ಐಪಿಸಿ ಸೆಕ್ಷನ್ 376C, ಐಪಿಸಿ ಸೆಕ್ಷನ್ 506, ಐಪಿಸಿ ಸೆಕ್ಷನ್ 354D, ಐಪಿಸಿ ಸೆಕ್ಷನ್ 342 ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಇದಾದ ಬಳಿಕ ತಮ್ಮಿಂದ ಐದು ಕೋಟಿ ರೂಪಾಯಿ ಹಣಕ್ಕೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ ಎಂದು ಸ್ವಾಮಿ ಚಿನ್ಮಯಾನಂದ ದೂರು ನೀಡಿದ್ದರು. ಸ್ವಾಮಿ ಚಿನ್ಮಯಾನಂದ ಅವರ ದೂರಿನ ಮೇಲೆ ಯುವತಿಯನ್ನು ಬಂಧಿಸಲಾಗಿತ್ತು.

ಕೋರ್ಟ್​ನಲ್ಲಿ ವಿಚಾರಣೆ ಬಳಿಕ ಅಂತಿಮವಾಗಿ ಈಗ ಅತ್ಯಾಚಾರ ಮತ್ತು ಜೀವ ಬೇದರಿಕೆ ಆರೋಪಿ ಸ್ವಾಮಿ ಚಿನ್ಮಯಾನಂದ ಅವರು ಆರೋಪ ಮುಕ್ತರಾಗಿದ್ದಾರೆ. ಇನ್ನು ಸ್ವಾಮಿ ಚಿನ್ಮಯಾನಂದ ಅವರ ಈ ಪ್ರಕರಣ ಕರ್ನಾಟಕದ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಾಮ್ಯತೆ ಹೊಂದಿದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ರಮೇಶ್ ಜಾರಕಿಹೊಳಿ ಪ್ರಕರಣದಂತೆಯೇ ಸ್ವಾಮಿ ಚಿನ್ಮಯಾನಂದ ಕೇಸ್​ನಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿತ್ತು. ಅಂತಿಮವಾಗಿ ಕೋರ್ಟ್ ಈಗ ಅತ್ಯಾಚಾರ ಆರೋಪದಿಂದ ಸ್ವಾಮಿ ಚಿನ್ಮಯಾನಂದ ಅವರನ್ನು ಖುಲಾಸೆ ಮಾಡಿದೆ.

ಇದನ್ನೂ ಓದಿ:

30ಕ್ಕೂ ಹೆಚ್ಚು ಬೀದಿನಾಯಿಗಳನ್ನು ಅತ್ಯಾಚಾರ ಮಾಡಿದ್ದ 68ರ ವೃದ್ಧ ಅರೆಸ್ಟ್​; ‘ಅವು ಯಾವುದೇ ಪ್ರತಿರೋಧ ತೋರುತ್ತಿರಲಿಲ್ಲ’ ಎಂಬ ಸಮರ್ಥನೆ ಬೇರೆ !

ಅತ್ಯಾಚಾರದ ಕೇಸ್ ದಾಖಲಿಸಿಕೊಂಡು ಆರೋಪಿ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿ: ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು