AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪದಿಂದ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಖುಲಾಸೆ

ಕೋರ್ಟ್​ನಲ್ಲಿ ವಿಚಾರಣೆ ಬಳಿಕ ಅಂತಿಮವಾಗಿ ಈಗ ಅತ್ಯಾಚಾರ ಮತ್ತು ಜೀವ ಬೇದರಿಕೆ ಆರೋಪಿ ಸ್ವಾಮಿ ಚಿನ್ಮಯಾನಂದ ಅವರು ಆರೋಪ ಮುಕ್ತರಾಗಿದ್ದಾರೆ. ಇನ್ನು ಸ್ವಾಮಿ ಚಿನ್ಮಯಾನಂದ ಅವರ ಈ ಪ್ರಕರಣ ಕರ್ನಾಟಕದ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಾಮ್ಯತೆ ಹೊಂದಿದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು.

ಅತ್ಯಾಚಾರ ಆರೋಪದಿಂದ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಖುಲಾಸೆ
ಸ್ವಾಮಿ ಚಿನ್ಮಯಾನಂದ
preethi shettigar
|

Updated on: Mar 27, 2021 | 10:19 AM

Share

ದೆಹಲಿ: ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಬಿಡುಗಡೆಯಾಗಿದ್ದಾರೆ. ಸ್ವಾಮಿ ಚಿನ್ಮಯಾನಂದ ಅವರ ಟ್ರಸ್ಟ್​ನ ಶಹಜಾನ್​ಪುರ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಮಾಡಲಾಗಿತ್ತು. ಈ ನಿಟ್ಟಿನಲ್ಲಿ 2019 ರ ಸೆಪ್ಟೆಂಬರ್​ನಲ್ಲಿ ಸ್ವಾಮಿ ಚಿನ್ಮಯಾನಂದರನ್ನು ಬಂಧಿಸಲಾಗಿತ್ತು. ಆದರೆ ಮೂರು ವರ್ಷಗಳ ನಂತರ ಲಕ್ನೋದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸ್ವಾಮಿ ಚಿನ್ಮಯಾನಂದರನ್ನು ಖುಲಾಸೆಗೊಳಿಸಿದೆ.

ಐಪಿಸಿ ಸೆಕ್ಷನ್ 376C, ಐಪಿಸಿ ಸೆಕ್ಷನ್ 506, ಐಪಿಸಿ ಸೆಕ್ಷನ್ 354D, ಐಪಿಸಿ ಸೆಕ್ಷನ್ 342 ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಇದಾದ ಬಳಿಕ ತಮ್ಮಿಂದ ಐದು ಕೋಟಿ ರೂಪಾಯಿ ಹಣಕ್ಕೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ ಎಂದು ಸ್ವಾಮಿ ಚಿನ್ಮಯಾನಂದ ದೂರು ನೀಡಿದ್ದರು. ಸ್ವಾಮಿ ಚಿನ್ಮಯಾನಂದ ಅವರ ದೂರಿನ ಮೇಲೆ ಯುವತಿಯನ್ನು ಬಂಧಿಸಲಾಗಿತ್ತು.

ಕೋರ್ಟ್​ನಲ್ಲಿ ವಿಚಾರಣೆ ಬಳಿಕ ಅಂತಿಮವಾಗಿ ಈಗ ಅತ್ಯಾಚಾರ ಮತ್ತು ಜೀವ ಬೇದರಿಕೆ ಆರೋಪಿ ಸ್ವಾಮಿ ಚಿನ್ಮಯಾನಂದ ಅವರು ಆರೋಪ ಮುಕ್ತರಾಗಿದ್ದಾರೆ. ಇನ್ನು ಸ್ವಾಮಿ ಚಿನ್ಮಯಾನಂದ ಅವರ ಈ ಪ್ರಕರಣ ಕರ್ನಾಟಕದ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಾಮ್ಯತೆ ಹೊಂದಿದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ರಮೇಶ್ ಜಾರಕಿಹೊಳಿ ಪ್ರಕರಣದಂತೆಯೇ ಸ್ವಾಮಿ ಚಿನ್ಮಯಾನಂದ ಕೇಸ್​ನಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿತ್ತು. ಅಂತಿಮವಾಗಿ ಕೋರ್ಟ್ ಈಗ ಅತ್ಯಾಚಾರ ಆರೋಪದಿಂದ ಸ್ವಾಮಿ ಚಿನ್ಮಯಾನಂದ ಅವರನ್ನು ಖುಲಾಸೆ ಮಾಡಿದೆ.

ಇದನ್ನೂ ಓದಿ:

30ಕ್ಕೂ ಹೆಚ್ಚು ಬೀದಿನಾಯಿಗಳನ್ನು ಅತ್ಯಾಚಾರ ಮಾಡಿದ್ದ 68ರ ವೃದ್ಧ ಅರೆಸ್ಟ್​; ‘ಅವು ಯಾವುದೇ ಪ್ರತಿರೋಧ ತೋರುತ್ತಿರಲಿಲ್ಲ’ ಎಂಬ ಸಮರ್ಥನೆ ಬೇರೆ !

ಅತ್ಯಾಚಾರದ ಕೇಸ್ ದಾಖಲಿಸಿಕೊಂಡು ಆರೋಪಿ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿ: ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ