AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ

ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ
ಅರ್ಪಿತಾ ಮುಖರ್ಜಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 04, 2022 | 7:38 PM

Share

ಕೊಲ್ಕತ್ತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಆರೋಪಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರ ಹೆಸರಲ್ಲಿ 31 ಎಲ್ಐಸಿ (LIC)  ಪಾಲಿಸಿ ಇದೆ. ಈ ಪಾಲಿಸಿಗಳ ನಾಮಿನಿ ಪಾರ್ಥ  ಚಟರ್ಜಿ ಆಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಅರ್ಪಿತಾ ಮತ್ತು ಪಾರ್ಥ ಚಟರ್ಜಿ 2012 ಜನವರಿ 1ರಂದು ಎಪಿಎ ಯುಟಿಲಿಟಿ ಸರ್ವೀಸಸ್​​​ನಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂವ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಇಡಿ ಶೋಧ  ನಡೆಸಿದಾಗ ಎಡಿಎಸ್ಆರ್ ಬೋಲಾಪುರ್  ಕಚೇರಿಯಲ್ಲಿ  ನೋಂದಣಿ ಮಾಡಿದ ಒಪ್ಪಂದ ಪತ್ರ ಸಿಕ್ಕಿದೆ. ಈ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ. ಈ ದಾಖಲೆಗಳ ಪ್ರಕಾರ ಇವರಿಬ್ಬರೂ 2012ರಿಂದ ಪಾಲುದಾರರಾಗಿದ್ದಾರೆ. ಕೊಲ್ಕತ್ತಾದ ವಿಶೇಷ ನ್ಯಾಯಾಲಯ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 5ರ ವರೆಗೆ ಇಡಿ ವಶಕ್ಕೆ ನೀಡಿದೆ. ಜುಲೈ 22ರಂದು ಇಡಿ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ನಗದು ವಶಪಡಿಸಿತ್ತು. ತನಿಖಾ ಸಂಸ್ಥೆ  56 ಲಕ್ಷ ಮೌಲ್ಯದ ವಿದೇಶಿ ಹಣ ಮತ್ತು 76ಲಕ್ಷ ಮೌಲ್ಯದ ಚಿನ್ನ ವಶಪಡಿಸಿದೆ.

Published On - 6:12 pm, Thu, 4 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ