AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ, ಮಾತುಕತೆಗೆ ಬನ್ನಿ..’-ಮಳೆಯಿಂದ ಸಂಕಷ್ಟಕ್ಕೀಡಾದ ಪ್ರತಿಭಟನಾ ನಿರತ ರೈತರಿಂದ ಕೇಂದ್ರ ಸರ್ಕಾರಕ್ಕೆ ಆಗ್ರಹ

ಕೇಂದ್ರ ಸರ್ಕಾರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿ ಇದ್ದರೆ, ಅವರ ಕಲ್ಯಾಣವನ್ನು ಬಯಸುತ್ತಿದ್ದರೆ ಕೂಡಲೇ ನಮ್ಮೊಂದಿಗೆ ಮಾತುಕತೆಗೆ ಬರಬೇಕು. ನಮ್ಮ ಬೇಡಿಕೆಯನ್ನು ನೆರವೇರಿಸಬೇಕು ಎಂದೂ ರೈತರು ಆಗ್ರಹಿಸಿದ್ದಾರೆ.

‘ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ, ಮಾತುಕತೆಗೆ ಬನ್ನಿ..’-ಮಳೆಯಿಂದ ಸಂಕಷ್ಟಕ್ಕೀಡಾದ ಪ್ರತಿಭಟನಾ ನಿರತ ರೈತರಿಂದ ಕೇಂದ್ರ ಸರ್ಕಾರಕ್ಕೆ ಆಗ್ರಹ
ಸಂಗ್ರಹ ಚಿತ್ರ
Lakshmi Hegde
|

Updated on:May 20, 2021 | 4:28 PM

Share

ಹೆಚ್ಚುತ್ತಿರುವ ಕೊರೊನಾ.. ಒಂದೇ ಸಮ ಸುರಿಯುತ್ತಿರುವ ಮಳೆಯ ನಡುವೆ ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ. ಕೇಂದ್ರ ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವವರೆಗೂ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತು ತಮ್ಮ ಹೋರಾಟವನ್ನು ನಡೆಸಿದ್ದಾರೆ. ಆದರೆ ಇದೀಗ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ಸಂಯುಕ್ತ ಕಿಸಾನ್​ ಮೋರ್ಚಾ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ, ಮಾತುಕತೆಗೆ ಮುಂದಾಗಿ..ನಮ್ಮ ಬೇಡಿಕೆಯನ್ನು ಒಪ್ಪಿಕೊಳ್ಳಿ ಎಂದು ಹೇಳಿದೆ.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪಂಜಾಬ್​, ಉತ್ತರಪ್ರದೇಶ, ಹರ್ಯಾಣ ರಾಜ್ಯಗಳ ಸಾವಿರಾರು ರೈತರು ದೆಹಲಿ ಮೂರು ಗಡಿಗಳಾದ ಸಿಂಘು, ಟಿಕ್ರಿ, ಘಾಜಿಪುರ್​​ಗಳಲ್ಲಿ ಕಳೆದ ಆರು ತಿಂಗಳಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಕೇಂದ್ರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆದಿದ್ದು, ಸದ್ಯಕ್ಕೆ ಕೃಷಿ ಕಾಯ್ದೆಗಳನ್ನು ಜಾರಿ ಮಾಡುವುದಿಲ್ಲ ಎಂದೂ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಆದರೆ ಆ ಮೂರು ಕೃಷಿ ಕಾಯ್ದೆಗಳನ್ನೂ ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ರೈತರು ಹೋರಾಟವನ್ನು ಮುಂದುವರಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದಾಗಿನಿಂದ ಇಲ್ಲಿಯವರೆಗೆ ಸುಮಾರು 470 ರೈತರು ಸಾವನ್ನಪ್ಪಿದ್ದಾರೆ. ಇಲ್ಲಿರುವ ಅನೇಕರು ಪ್ರತಿಭಟನೆ ನಡೆಸುತ್ತ ತಮ್ಮ ಕೆಲಸ ಕಳೆದುಕೊಂಡವರು ಇದ್ದಾರೆ. ಶಿಕ್ಷಣ ಮೊಟಕುಗೊಳಿಸಿದವರಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ನಮ್ಮೆಡೆಗೆ ಲಕ್ಷ್ಯ ಹಾಕುತ್ತಿಲ್ಲ. ಇದು ಅಮಾನವೀಯ ವರ್ತನೆ. ಅನ್ನದಾತರಡೆಗೆ ಇಷ್ಟು ನಿಷ್ಕಾಳಜಿ, ನಿರ್ಲಕ್ಷ್ಯ ಸರಿಯಲ್ಲ ಎಂದು ಕಿಸಾನ್​ ಮೋರ್ಚಾ ಸಂಘಟನೆ ಹೇಳಿದೆ.

ಕೇಂದ್ರ ಸರ್ಕಾರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿ ಇದ್ದರೆ, ಅವರ ಕಲ್ಯಾಣವನ್ನು ಬಯಸುತ್ತಿದ್ದರೆ ಕೂಡಲೇ ನಮ್ಮೊಂದಿಗೆ ಮಾತುಕತೆಗೆ ಬರಬೇಕು. ನಮ್ಮ ಬೇಡಿಕೆಯನ್ನು ನೆರವೇರಿಸಬೇಕು ಎಂದೂ ಹೇಳಿದೆ. 12-18ತಿಂಗಳವರೆಗೆ ಮೂರು ಕೃಷಿ ಕಾಯ್ದೆಗಳನ್ನು ಅಮಾನತಿನಲ್ಲಿ ಇಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದ್ದರೂ ಅದನ್ನು ರೈತರು ತಿರಸ್ಕರಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದೀಗ ತೌಕ್ತೆ ಚಂಡಮಾರುತದ ಪ್ರಭಾವದಿಂದ ದೆಹಲಿ ಸುತ್ತಮುತ್ತ ಕೂಡ ಸಿಕ್ಕಾಪಟೆ ಮಳೆಯಾಗುತ್ತಿದೆ. ಇದರಿಂದ ಪ್ರತಿಭಟನಾ ನಿರತ ರೈತರು ಸಂಕಷ್ಟಕ್ಕೀಡಾಗುವಂತಾಗಿದೆ.

ಇದನ್ನೂ ಓದಿ: ಖಾಸಗಿ ಶಾಲಾ ಶಿಕ್ಷಕರಿಗೂ ಪ್ಯಾಕೇಜ್ ಘೋಷಿಸಲು ಸಚಿವ ಸುರೇಶ್​ ಕುಮಾರ್ ಪತ್ರ; ಶಿಕ್ಷಣ ಸಚಿವರ ಬಳಿ ಪ್ಯಾಕೇಜ್ ಕೊಡಿಸೋಕೆ ಈವರೆಗೂ ಆಗಿಲ್ಲ ಎಂದ ರುಪ್ಸಾ

ನಿರ್ದೇಶಕರಿಗೂ ಪ್ರೋತ್ಸಾಹ ಧನ ನೀಡಿ; ಸರ್ಕಾರಕ್ಕೆ ಮನವಿ ಮಾಡಿದ ಟೆಶಿ ವೆಂಕಟೇಶ್​

Formers who protest in delhi borders urge the central government to initiate talks and accept demands

Published On - 4:27 pm, Thu, 20 May 21

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ