AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಭಾರತದಲ್ಲಿ ಡಿಜಿಟಲ್ ಜನಗಣತಿ: ಲೋಕಸಭೆಗೆ ಕೇಂದ್ರ ಸರ್ಕಾರದಿಂದ ಮಾಹಿತಿ

ಈ ಬಾರಿ ಸ್ವಯಂ ದೃಢೀಕರಣಕ್ಕೂ ಅವಕಾಶ ಇರುತ್ತದೆ ಎಂದು ಕೇಂದ್ರ ಸರ್ಕಾರವು ಕಾಂಗ್ರೆಸ್ ಸಂಸದ ಶಶಿ ತರೂರ್​ ಅವರ ಹೇಳಿಕೆಗೆ ಉತ್ತರವಾಗಿ ಸಂಸತ್ತಿಗೆ ಮಾಹಿತಿ ನೀಡಿದೆ.

ಇದೇ ಮೊದಲ ಬಾರಿಗೆ ಭಾರತದಲ್ಲಿ ಡಿಜಿಟಲ್ ಜನಗಣತಿ: ಲೋಕಸಭೆಗೆ ಕೇಂದ್ರ ಸರ್ಕಾರದಿಂದ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 10, 2021 | 7:56 PM

Share

ದೆಹಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಾರಿ ಸ್ವಯಂ ದೃಢೀಕರಣಕ್ಕೂ ಅವಕಾಶ ಇರುತ್ತದೆ ಎಂದು ಕೇಂದ್ರ ಸರ್ಕಾರವು ಕಾಂಗ್ರೆಸ್ ಸಂಸದ ಶಶಿ ತರೂರ್​ ಅವರ ಹೇಳಿಕೆಗೆ ಉತ್ತರವಾಗಿ ಸಂಸತ್ತಿಗೆ ಮಾಹಿತಿ ನೀಡಿದೆ. 2021ರ ಜನಗಣತಿಗೆ ಸಂಬಂಧಿಸಿದಂತೆ ಏನಾದರೂ ಬದಲಾವಣೆ ಅಥವಾ ಹೆಚ್ಚುವರಿ ಮಾಹಿತಿ ಇದೆಯೆ ಎಂದು ಶಶಿ ತರೂರ್ ಪ್ರಶ್ನಿಸಿದ್ದರು.

ದತ್ತಾಂಶ ಸಂಗ್ರಹಕ್ಕಾಗಿ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು. ಗಣತಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಿರ್ವಹಿಸಲು ಮತ್ತು ನಿಗಾವಣೆಗಾಗಿ ಪೋರ್ಟಲ್ ಅಭಿವೃದ್ಧಿಪಡಿಸಲಾಗುವುದು. ಈ ಪೋರ್ಟಲ್​ಗೆ ಲಾಗಿನ್ ಆಗಲು​ ಮೊಬೈಲ್​ ಸಂಖ್ಯೆ ಮತ್ತು ಇತರ ವೈಯಕ್ತಿಕ ಮಾಹಿತಿ ನೀಡಬೇಕಾಗುತ್ತದೆ. ಸ್ವಯಂ ದೃಢೀಕರಣದ ಮೂಲಕ ಮಾಹಿತಿ ನೀಡಲು ಮುಂದಾಗುವವರು ಪ್ರತಿ ಹಂತದಲ್ಲಿಯೂ ನಿರ್ದಿಷ್ಟ ಸಂಕೇತಗಳನ್ನು ನೀಡಬೇಕಾಗುತ್ತದೆ. ಸ್ವಯಂ ದೃಢೀಕರಣಕ್ಕಾಗಿ ಮಾಹಿತಿ ಒದಗಿಸಿದ ನಂತರ ಗಣತಿಗೆ ಮಾಹಿತಿ ನೀಡುವವರ ಮೊಬೈಲ್​ಗೆ ಸಂಕೇತ ಸಂಖ್ಯೆಯೊಂದು ಬರುತ್ತದೆ. ಈ ಸಂಖ್ಯೆಯನ್ನು ಗಣತಿದಾರರಿಗೆ ನೀಡಿದರೆ ಎಲ್ಲ ದತ್ತಾಂಶಗಳು ತನ್ನಿಂತಾನೆ ಭರ್ತಿಯಾಗುತ್ತವೆ ಎಂದು ಕೇಂದ್ರ ಸರ್ಕಾರವು ಲಿಖಿತ ಉತ್ತರದಲ್ಲಿ ತಿಳಿಸಿದೆ.

ಜನಗಣತಿಯಿಂದ ಸಂಗ್ರಹಿಸುವ ಮಾಹಿತಿಯನ್ನು ರಾಷ್ಟ್ರೀಯ ನಾಗರಿಕ ನೋಂದಣಿ ಸೇರಿದಂತೆ ಯಾವುದೇ ದತ್ತಾಂಶ ರೂಪಿಸಲು ಬಳಸುವುದಿಲ್ಲ. ಜನಗಣತಿ ಕಾಯ್ದೆ 1948ರ ಪ್ರಕಾರ ಈ ವೇಳೆ ಸಂಗ್ರಹಿಸುವ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಅವಕಾಶ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಸಹ ಈ ಹಂತದಲ್ಲಿ ಜಾತಿ ಮಾಹಿತಿ ಬಹಿರಂಗಪಡಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ನಮ್ಮ ದೇಶದಲ್ಲಿ ಪ್ರತಿ 10 ವರ್ಷಗಳಿಗೆ ಒಮ್ಮೆ ಜನಗಣತಿ ಪ್ರಕ್ರಿಯೆ ನಡೆಯುತ್ತದೆ.

(Forthcoming Census to go digital Centre informs Lok Sabha over a question of Shahi Tharoor)

ಇದನ್ನೂ ಓದಿ: ಡಿಐಸಿಜಿಸಿ ಕಾಯ್ದೆ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಸ್ತು; ಕೋಟ್ಯಂತರ ಬ್ಯಾಂಕ್​ ಠೇವಣಿದಾರರ ಹಣಕ್ಕೆ ಸಿಕ್ತು ಗ್ಯಾರಂಟಿ

ಇದನ್ನೂ ಓದಿ: Parliament Monsoon Session: ಲೋಕಸಭೆಯಲ್ಲಿ ಸಂವಿಧಾನದ 127 ನೇ ತಿದ್ದುಪಡಿ ಮಸೂದೆ ಮಂಡನೆ

Published On - 7:45 pm, Tue, 10 August 21

ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌