AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ, ಶೃಂಗೇರಿ ಅರ್ಚಕರಿಂದ ಪೂಜಾ ವಿಧಿಗಳು ಆರಂಭ

ಹೊಸ ಸಂಸದ್ ಭವನ ನಿರ್ಮಾಣ ಪ್ರಾರಂಭಗೊಂಡಿದೆ. ಶೃಂಗೇರಿ ಮಠದಿಂದ ಶಂಕು ಸ್ಥಾಪನೆಗೆ ಶಂಕು ಮತ್ತು ನವರತ್ನ ಪೀಠ ತರಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.

Central Vista ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ, ಶೃಂಗೇರಿ ಅರ್ಚಕರಿಂದ ಪೂಜಾ ವಿಧಿಗಳು ಆರಂಭ
ಹೊಸ ಸಂಸತ್ ಭವನ ನಿರ್ಮಾಣದ ಪೂಜಾ ವಿಧಿವಿಧಾನ ಪ್ರಾರಂಭ
shruti hegde
| Edited By: |

Updated on:Dec 10, 2020 | 11:37 AM

Share

ದೆಹಲಿ: ಪಾರ್ಲಿಮೆಂಟ್ ಕಟ್ಟಡ ನಿರ್ಮಾಣದ ಪೂಜಾ ಕಾರ್ಯಕ್ರಮ ಪ್ರಾರಂಭಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠದ ಅರ್ಚಕರನ್ನು ಪೂಜಾ ವಿಧಿವಿಧಾನಕ್ಕಾಗಿ ಕರೆಸಲಾಗಿದ್ದು, ಶೃಂಗೇರಿ ಮಠದಿಂದ ಶಂಕು ಸ್ಥಾಪನೆಗೆ ಶಂಕು ಮತ್ತು ನವರತ್ನ ಪೀಠ ತರಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.

ಶೃಂಗೇರಿ ಅರ್ಚಕರಾದ ಶಿವಕುಮಾರ್ ಶರ್ಮಾ, ಲಕ್ಷ್ಮಿ ನಾರಾಯಣ್ ಸೋಮಯಾಜಿ, ಗಣೇಶ್ ಸೋಮಯಾಜಿ, ನಾಗರಾಜ್ ಅಡಿಗರು ಹಾಗೂ ದೆಹಲಿ ಶಾಖಾ ಮಠದ ಇಬ್ಬರು ಪುರೋಹಿತರು ಶಿಲಾನ್ಯಾಸದ ಪೂಜೆ ಕೈಗೊಂಡಿದ್ದಾರೆ. ಒಟ್ಟು 6 ಜನ ಪುರೋಹಿತರಿಂದ ಪೂಜಾ ವಿಧಿವಿಧಾನ ಹಮ್ಮಿಕೊಳ್ಳಲಾಗಿದೆ.

1.30ಕ್ಕೆ ಸರ್ವಧರ್ಮ ಪ್ರಾರ್ಥನೆ ನಡೆಯಲಿದ್ದು, 2.15ಕ್ಕೆ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಒಟ್ಟು 978 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಪಾರ್ಲಿಮೆಂಟ್ ಕಟ್ಟಡ ನಿರ್ಮಾಣಗೊಳ್ಳಲಿದೆ. 1,224 ಸಂಸದರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ನೂತನ ಸಂಸತ್ ಭವನದ ಕಟ್ಟಡವನ್ನು 2022ರಲ್ಲಿ  75ನೇ ಸ್ವಾತಂತ್ರ್ಯ ದಿನಾಚರಣೆಯ ಒಳಗೆ ಪೂರ್ಣಗೊಳಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಾತನಾಡಲಿದ್ದಾರೆ. ವಸತಿ ಮತ್ತು ನಗರ ವ್ಯವಹಾರ  ರಾಜ್ಯ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ವಾಗತಿಸಲಿದ್ದಾರೆ. ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕ್ರಮ ವಂದನಾರ್ಪಣೆ ಮಾಡಲಿದ್ದಾರೆ.

ಡಿಡಿ ಮತ್ತು ಲೋಕಸಭಾ ಟಿವಿ ವತಿಯಿಂದ ಕಾರ್ಯಕ್ರಮ ನೇರ ಪ್ರಸಾರಗೊಳ್ಳಲಿದೆ.

ಸಂಸತ್ತಿನ ಹೊಸ ಭವನಕ್ಕೆ ಶಿಲಾನ್ಯಾಸ ಮಾಡಲು ಮುಹೂರ್ತ ಫಿಕ್ಸ್

Published On - 11:36 am, Thu, 10 December 20

Follow Us
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ