AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ, ಶೃಂಗೇರಿ ಅರ್ಚಕರಿಂದ ಪೂಜಾ ವಿಧಿಗಳು ಆರಂಭ

ಹೊಸ ಸಂಸದ್ ಭವನ ನಿರ್ಮಾಣ ಪ್ರಾರಂಭಗೊಂಡಿದೆ. ಶೃಂಗೇರಿ ಮಠದಿಂದ ಶಂಕು ಸ್ಥಾಪನೆಗೆ ಶಂಕು ಮತ್ತು ನವರತ್ನ ಪೀಠ ತರಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.

Central Vista ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ, ಶೃಂಗೇರಿ ಅರ್ಚಕರಿಂದ ಪೂಜಾ ವಿಧಿಗಳು ಆರಂಭ
ಹೊಸ ಸಂಸತ್ ಭವನ ನಿರ್ಮಾಣದ ಪೂಜಾ ವಿಧಿವಿಧಾನ ಪ್ರಾರಂಭ
shruti hegde
| Updated By: ಸಾಧು ಶ್ರೀನಾಥ್​|

Updated on:Dec 10, 2020 | 11:37 AM

Share

ದೆಹಲಿ: ಪಾರ್ಲಿಮೆಂಟ್ ಕಟ್ಟಡ ನಿರ್ಮಾಣದ ಪೂಜಾ ಕಾರ್ಯಕ್ರಮ ಪ್ರಾರಂಭಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠದ ಅರ್ಚಕರನ್ನು ಪೂಜಾ ವಿಧಿವಿಧಾನಕ್ಕಾಗಿ ಕರೆಸಲಾಗಿದ್ದು, ಶೃಂಗೇರಿ ಮಠದಿಂದ ಶಂಕು ಸ್ಥಾಪನೆಗೆ ಶಂಕು ಮತ್ತು ನವರತ್ನ ಪೀಠ ತರಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.

ಶೃಂಗೇರಿ ಅರ್ಚಕರಾದ ಶಿವಕುಮಾರ್ ಶರ್ಮಾ, ಲಕ್ಷ್ಮಿ ನಾರಾಯಣ್ ಸೋಮಯಾಜಿ, ಗಣೇಶ್ ಸೋಮಯಾಜಿ, ನಾಗರಾಜ್ ಅಡಿಗರು ಹಾಗೂ ದೆಹಲಿ ಶಾಖಾ ಮಠದ ಇಬ್ಬರು ಪುರೋಹಿತರು ಶಿಲಾನ್ಯಾಸದ ಪೂಜೆ ಕೈಗೊಂಡಿದ್ದಾರೆ. ಒಟ್ಟು 6 ಜನ ಪುರೋಹಿತರಿಂದ ಪೂಜಾ ವಿಧಿವಿಧಾನ ಹಮ್ಮಿಕೊಳ್ಳಲಾಗಿದೆ.

1.30ಕ್ಕೆ ಸರ್ವಧರ್ಮ ಪ್ರಾರ್ಥನೆ ನಡೆಯಲಿದ್ದು, 2.15ಕ್ಕೆ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಒಟ್ಟು 978 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಪಾರ್ಲಿಮೆಂಟ್ ಕಟ್ಟಡ ನಿರ್ಮಾಣಗೊಳ್ಳಲಿದೆ. 1,224 ಸಂಸದರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ನೂತನ ಸಂಸತ್ ಭವನದ ಕಟ್ಟಡವನ್ನು 2022ರಲ್ಲಿ  75ನೇ ಸ್ವಾತಂತ್ರ್ಯ ದಿನಾಚರಣೆಯ ಒಳಗೆ ಪೂರ್ಣಗೊಳಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಾತನಾಡಲಿದ್ದಾರೆ. ವಸತಿ ಮತ್ತು ನಗರ ವ್ಯವಹಾರ  ರಾಜ್ಯ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ವಾಗತಿಸಲಿದ್ದಾರೆ. ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕ್ರಮ ವಂದನಾರ್ಪಣೆ ಮಾಡಲಿದ್ದಾರೆ.

ಡಿಡಿ ಮತ್ತು ಲೋಕಸಭಾ ಟಿವಿ ವತಿಯಿಂದ ಕಾರ್ಯಕ್ರಮ ನೇರ ಪ್ರಸಾರಗೊಳ್ಳಲಿದೆ.

ಸಂಸತ್ತಿನ ಹೊಸ ಭವನಕ್ಕೆ ಶಿಲಾನ್ಯಾಸ ಮಾಡಲು ಮುಹೂರ್ತ ಫಿಕ್ಸ್

Published On - 11:36 am, Thu, 10 December 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ