AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ, ಶೃಂಗೇರಿ ಅರ್ಚಕರಿಂದ ಪೂಜಾ ವಿಧಿಗಳು ಆರಂಭ

ಹೊಸ ಸಂಸದ್ ಭವನ ನಿರ್ಮಾಣ ಪ್ರಾರಂಭಗೊಂಡಿದೆ. ಶೃಂಗೇರಿ ಮಠದಿಂದ ಶಂಕು ಸ್ಥಾಪನೆಗೆ ಶಂಕು ಮತ್ತು ನವರತ್ನ ಪೀಠ ತರಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.

Central Vista ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ, ಶೃಂಗೇರಿ ಅರ್ಚಕರಿಂದ ಪೂಜಾ ವಿಧಿಗಳು ಆರಂಭ
ಹೊಸ ಸಂಸತ್ ಭವನ ನಿರ್ಮಾಣದ ಪೂಜಾ ವಿಧಿವಿಧಾನ ಪ್ರಾರಂಭ
shruti hegde
| Edited By: |

Updated on:Dec 10, 2020 | 11:37 AM

Share

ದೆಹಲಿ: ಪಾರ್ಲಿಮೆಂಟ್ ಕಟ್ಟಡ ನಿರ್ಮಾಣದ ಪೂಜಾ ಕಾರ್ಯಕ್ರಮ ಪ್ರಾರಂಭಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠದ ಅರ್ಚಕರನ್ನು ಪೂಜಾ ವಿಧಿವಿಧಾನಕ್ಕಾಗಿ ಕರೆಸಲಾಗಿದ್ದು, ಶೃಂಗೇರಿ ಮಠದಿಂದ ಶಂಕು ಸ್ಥಾಪನೆಗೆ ಶಂಕು ಮತ್ತು ನವರತ್ನ ಪೀಠ ತರಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.

ಶೃಂಗೇರಿ ಅರ್ಚಕರಾದ ಶಿವಕುಮಾರ್ ಶರ್ಮಾ, ಲಕ್ಷ್ಮಿ ನಾರಾಯಣ್ ಸೋಮಯಾಜಿ, ಗಣೇಶ್ ಸೋಮಯಾಜಿ, ನಾಗರಾಜ್ ಅಡಿಗರು ಹಾಗೂ ದೆಹಲಿ ಶಾಖಾ ಮಠದ ಇಬ್ಬರು ಪುರೋಹಿತರು ಶಿಲಾನ್ಯಾಸದ ಪೂಜೆ ಕೈಗೊಂಡಿದ್ದಾರೆ. ಒಟ್ಟು 6 ಜನ ಪುರೋಹಿತರಿಂದ ಪೂಜಾ ವಿಧಿವಿಧಾನ ಹಮ್ಮಿಕೊಳ್ಳಲಾಗಿದೆ.

1.30ಕ್ಕೆ ಸರ್ವಧರ್ಮ ಪ್ರಾರ್ಥನೆ ನಡೆಯಲಿದ್ದು, 2.15ಕ್ಕೆ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಒಟ್ಟು 978 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಪಾರ್ಲಿಮೆಂಟ್ ಕಟ್ಟಡ ನಿರ್ಮಾಣಗೊಳ್ಳಲಿದೆ. 1,224 ಸಂಸದರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ನೂತನ ಸಂಸತ್ ಭವನದ ಕಟ್ಟಡವನ್ನು 2022ರಲ್ಲಿ  75ನೇ ಸ್ವಾತಂತ್ರ್ಯ ದಿನಾಚರಣೆಯ ಒಳಗೆ ಪೂರ್ಣಗೊಳಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಾತನಾಡಲಿದ್ದಾರೆ. ವಸತಿ ಮತ್ತು ನಗರ ವ್ಯವಹಾರ  ರಾಜ್ಯ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ವಾಗತಿಸಲಿದ್ದಾರೆ. ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕ್ರಮ ವಂದನಾರ್ಪಣೆ ಮಾಡಲಿದ್ದಾರೆ.

ಡಿಡಿ ಮತ್ತು ಲೋಕಸಭಾ ಟಿವಿ ವತಿಯಿಂದ ಕಾರ್ಯಕ್ರಮ ನೇರ ಪ್ರಸಾರಗೊಳ್ಳಲಿದೆ.

ಸಂಸತ್ತಿನ ಹೊಸ ಭವನಕ್ಕೆ ಶಿಲಾನ್ಯಾಸ ಮಾಡಲು ಮುಹೂರ್ತ ಫಿಕ್ಸ್

Published On - 11:36 am, Thu, 10 December 20

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ