AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಗೆಸ್ಟ್​ಹೌಸ್​ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ರಾಜಸ್ಥಾನದ ಗೆಸ್ಟ್​ಹೌಸ್​ವೊಂದರಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ. ಸಂಜೆ ಗೃಹರಕ್ಷಕ ಸಿಬ್ಬಂದಿ ಕೊಠಡಿಗೆ ತಲುಪಿದಾಗ ಯಾವುದೇ ಚಟುವಟಿಕೆ ಗಮನಕ್ಕೆ ಬಂದಿಲ್ಲ ಮತ್ತು ಯಾರೂ ಸ್ಪಂದಿಸಲಿಲ್ಲ. ಸಿಬ್ಬಂದಿ ಮ್ಯಾನೇಜರ್‌ಗೆ ಮಾಹಿತಿ ನೀಡಿದ್ದು, ಅವರು ಪರಿಶೀಲಿಸಲು ಹೋದಾಗ ಕೊಠಡಿಯೊಳಗೆ ನಾಲ್ಕು ಮೃತದೇಹಗಳು ಬಿದ್ದಿರುವುದು ಕಂಡಿತ್ತು. ಮಾಹಿತಿ ಪಡೆದ ಬಾಲಾಜಿ ಪೊಲೀಸರು ಹಾಗೂ ತೋಡಭೀಮ್ ಠಾಣೆ ಪ್ರಭಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದರು.

ರಾಜಸ್ಥಾನ: ಗೆಸ್ಟ್​ಹೌಸ್​ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ
ಪೊಲೀಸ್Image Credit source: India TV
ನಯನಾ ರಾಜೀವ್
|

Updated on: Jan 15, 2025 | 10:33 AM

Share

ರಾಜಸ್ಥಾನದ ಮೆಹಂದಿಪುರದ ಬಾಲಾಜಿ ಪಟ್ಟಣದ ಧರ್ಮಶಾಲಾ ಅತಿಥಿಗೃಹದಲ್ಲಿ ಕುಟುಂಬದ ನಾಲ್ವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಮೃತರಲ್ಲಿ ಪೋಷಕರು, ಮಗ ಮತ್ತು ಮಗಳು ಸೇರಿದ್ದಾರೆ, ಅವರೆಲ್ಲರೂ ಉತ್ತರಾಖಂಡದ ಡೆಹ್ರಾಡೂನ್‌ನ ರಾಯ್‌ಪುರ ಪ್ರದೇಶದವರು.

ಜನವರಿ 12ರಂದು ಸಮಾಧಿ ವಾಲಿ ಗಲಿಯ ರಾಧಾ-ಕೃಷ್ಣ ಆಶ್ರಮ ಧರ್ಮಶಾಲಾದಲ್ಲಿ ಕೊಠಡಿಯನ್ನು ಬಾಡಿಗೆಗೆ ಪಡೆದಿದ್ದರು ಮತ್ತು ಜನವರಿ 14 ರಂದು ಮಧ್ಯಾಹ್ನ ಚೆಕ್ ಔಟ್ ಮಾಡಲು ನಿರ್ಧರಿಸಿದ್ದರು.

ಸಂಜೆ ಗೃಹರಕ್ಷಕ ಸಿಬ್ಬಂದಿ ಕೊಠಡಿಗೆ ತಲುಪಿದಾಗ ಯಾವುದೇ ಚಟುವಟಿಕೆ ಗಮನಕ್ಕೆ ಬಂದಿಲ್ಲ ಮತ್ತು ಯಾರೂ ಸ್ಪಂದಿಸಲಿಲ್ಲ. ಸಿಬ್ಬಂದಿ ಮ್ಯಾನೇಜರ್‌ಗೆ ಮಾಹಿತಿ ನೀಡಿದ್ದು, ಅವರು ಪರಿಶೀಲಿಸಲು ಹೋದಾಗ ಕೊಠಡಿಯೊಳಗೆ ನಾಲ್ಕು ಮೃತದೇಹಗಳು ಬಿದ್ದಿರುವುದು ಕಂಡಿತ್ತು. ಮಾಹಿತಿ ಪಡೆದ ಬಾಲಾಜಿ ಪೊಲೀಸರು ಹಾಗೂ ತೋಡಭೀಮ್ ಠಾಣೆ ಪ್ರಭಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದರು.

ಮತ್ತಷ್ಟು ಓದಿ: ನಾಪತ್ತೆಯಾಗಿದ್ದ ಛತ್ತೀಸ್‌ಗಢದ ಪತ್ರಕರ್ತನ ಶವ ಟ್ಯಾಂಕ್‌ನಲ್ಲಿ ಪತ್ತೆ; ಕಾಂಗ್ರೆಸ್ ನಾಯಕನ ಕೈವಾಡದ ಶಂಕೆ

ಘಟನೆಯನ್ನು ದೃಢಪಡಿಸಿದ ಕರೋಲಿ ಎಸ್ಪಿ ಬ್ರಿಜೇಶ್ ಜ್ಯೋತಿ ಉಪಾಧ್ಯಾಯ, ಮೆಹಂದಿಪುರ ಬಾಲಾಜಿಯ ಸಮಾಧಿ ವಾಲಿ ಗಲಿಯಲ್ಲಿರುವ ಧರ್ಮಶಾಲಾದಲ್ಲಿ ಕುಟುಂಬದ ನಾಲ್ಕು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ತೋಡಭೀಮ್ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದಾಗ, ಬಾಗಿಲು ತೆರೆದಿತ್ತು ಎಂದರು.

ಘಟನಾ ಸ್ಥಳದಲ್ಲಿನ ಪ್ರಾಥಮಿಕ ಅವಲೋಕನಗಳ ಆಧಾರದ ಮೇಲೆ ಇಬ್ಬರ ಶವ ನೆಲದ ಮೇಲೆ ಮಲಗಿರುವ ರೀತಿ ಇತ್ತು, ಇನ್ನಿಬ್ಬರ ಶವ ಹಾಸಿಗೆಯ ಮೇಲೆ ಪತ್ತೆಯಾಗಿವೆ. ವಿಷ ಕುಡಿದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರ ಸಾವಿಗೆ ನಿಖರ ಕಾರಣವನ್ನು ನಿರ್ಧರಿಸಲಾಗುವುದು. ಆದರೆ ಸಾವಿನ ಹಿಂದಿರುವ ಸ್ಪಷ್ಟ ಕಾರಣದ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ