AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ಸಮಸ್ಯೆ, ಕೊರೊನಾದಿಂದ ಬಿಹಾರದಲ್ಲಿ ನಾಲ್ವರು ಮಕ್ಕಳ ಸಾವು

Bihar Darbhanga Medical College: ಒಂದು ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಉಳಿದ ಮೂವರು ಮಕ್ಕಳಿಗೆ ಕೊರೊನಾ ನೆಗೆಟಿವ್ ಇತ್ತು. ನಾಲ್ವರೂ ಮಕ್ಕಳಿಗೆ ನ್ಯುಮೋನಿಯಾ ಲಕ್ಷಣ ಸಹ ಇತ್ತು. ಮೊದಲು, ಉಸಿರಾಟ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು

ಉಸಿರಾಟದ ಸಮಸ್ಯೆ, ಕೊರೊನಾದಿಂದ ಬಿಹಾರದಲ್ಲಿ ನಾಲ್ವರು ಮಕ್ಕಳ ಸಾವು
ಉಸಿರಾಟದ ಸಮಸ್ಯೆ, ಕೊರೊನಾದಿಂದ ಬಿಹಾರದಲ್ಲಿ ನಾಲ್ವರು ಮಕ್ಕಳ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 31, 2021 | 11:34 AM

Share

ಬಿಹಾರ: ರಾಜ್ಯದ ಉತ್ತರ ಭಾಗದಲ್ಲಿರುವ ಅತ್ಯಂತ ದೊಡ್ಡ ದರ್ಭಂಗಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಬಿಹಾರದ DMCHನಲ್ಲಿ ಕಳೆದ 24 ಗಂಟೆಯಲ್ಲಿ ಈ ನಾಲ್ವರ ಸಾವು ಸಂಭವಿಸಿದೆ. ಅದರಲ್ಲಿ ಎರಡೂವರೆ ವರ್ಷದ ಒಂದು ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಉಳಿದ ಮೂವರು ಮಕ್ಕಳಿಗೆ ಕೊರೊನಾ ನೆಗೆಟಿವ್ ಇತ್ತು. ನಾಲ್ವರೂ ಮಕ್ಕಳಿಗೆ ನ್ಯುಮೋನಿಯಾ ಲಕ್ಷಣ ಸಹ ಇತ್ತು. ಮೊದಲು, ಉಸಿರಾಟ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಿಹಾರದ DMCHನಲ್ಲಿ ಕಳೆದ 24 ಗಂಟೆಯಲ್ಲಿ ಈ ನಾಲ್ವರ ಸಾವು ಸಂಭವಿಸಿದೆ. ಅದರಲ್ಲಿ ಒಂದು ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಉಳಿದ ಮೂವರು ಮಕ್ಕಳಿಗೆ ಕೊರೊನಾ ನೆಗೆಟಿವ್ ಇತ್ತು ಎಂದು ಎಎನ್​ಐ ಸುದ್ದಿ ಸಂಸ್ಥೆ ಟ್ವೀಟ್​ ಮಾಡಿ ಹೇಳಿದೆ. ಮೃತಪಟ್ಟ ಎಲ್ಲ ಮಕ್ಕಳ ದೇಹಗಳನ್ನು ಕೊರೊನಾ ಮಾರ್ಗಸೂಚಿಯಂತೆ ಅವರ ಪೋಷಕರಿಗೆ ಒಪ್ಪಿಸಿ, ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಗಳು ಹೇಳಿವೆ.

ಈ ಮಧ್ಯೆ ಬಿಹಾರದಲ್ಲಿ ನಿನ್ನೆ ಭಾನುವಾರ ಸುಮಾರು 1,500 ಮಂದಿಗೆ ಕೊರೊನಾ ತಗುಲಿದೆ. 52 ಮಂದಿ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ರಅಜ್ಯದಲ್ಲಿ ಇದುವರೆಗೂ 7ಲಕ್ಷ ಮಂದಿಗೆ ಕೊರೊನಾ ಸೋಂಕು ಬಂದಿದ್ದು, ಅವರಲ್ಲಿ 5104 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅವರಲ್ಲಿ 6.82 ಲಕ್ಷ ಮಂದಿ ಗುಣಮುಖರಾಗಿದ್ದು, ಸಾವಿನ ಪ್ರಮಾಣವೂ ಕುಗ್ಗುತ್ತಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

(Four children die in Bihar Darbhanga Medical College experiencing breathlessness and pneumonia)

ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗ; ಮೈಸೂರಿನ ಚೆಲುವಾಂಬ ಆಸ್ಪತ್ರೆ ಆಯ್ಕೆ

Published On - 11:17 am, Mon, 31 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?