AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taj Express: ಹೊತ್ತಿ ಉರಿದ ದೆಹಲಿಯ ತಾಜ್ ಎಕ್ಸ್‌ಪ್ರೆಸ್‌ನ 4 ಬೋಗಿ, ಪ್ರಯಾಣಿಕರು ಸುರಕ್ಷಿತ

"ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ನಮಗೆ ಸಂಜೆ 4.24 ಕ್ಕೆ ಕರೆ ಬಂದಿತು. ಎಂಟು ಅಗ್ನಿಶಾಮಕ ಟೆಂಡರ್‌ಗಳು ದೌಡಾಯಿಸಿದ್ದು ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ" ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Taj Express: ಹೊತ್ತಿ ಉರಿದ ದೆಹಲಿಯ ತಾಜ್ ಎಕ್ಸ್‌ಪ್ರೆಸ್‌ನ 4 ಬೋಗಿ, ಪ್ರಯಾಣಿಕರು ಸುರಕ್ಷಿತ
ಹೊತ್ತಿ ಉರಿದ ರೈಲಿನ ಬೋಗಿ
ರಶ್ಮಿ ಕಲ್ಲಕಟ್ಟ
|

Updated on:Jun 03, 2024 | 5:53 PM

Share

ದೆಹಲಿ ಜೂನ್ 03: ಆಗ್ನೇಯ ದೆಹಲಿಯ (Delhi) ಸರಿತಾ ವಿಹಾರ್‌ನಲ್ಲಿ ಸೋಮವಾರ ತಾಜ್ ಎಕ್ಸ್‌ಪ್ರೆಸ್ (Taj Express) ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ (Fire) ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ನಮಗೆ ಸಂಜೆ 4.24 ಕ್ಕೆ ಕರೆ ಬಂದಿತು. ಎಂಟು ಅಗ್ನಿಶಾಮಕ ಟೆಂಡರ್‌ಗಳು ದೌಡಾಯಿಸಿದ್ದು ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಸಾವು ನೋವು ಸಂಭವಿಸಿದ ವರದಿಗಳು ಇಲ್ಲಿಯವರೆಗೆ ಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಾಧ್ಯಮದಲ್ಲಿನ  ವರದಿಗಳ  ಪ್ರಕಾರ, 2280 ತಾಜ್ ಎಕ್ಸ್‌ಪ್ರೆಸ್ ರೈಲು ಓಖ್ಲಾ-ತುಘಲಕಾಬಾದ್ ಬ್ಲಾಕ್ ವಿಭಾಗವನ್ನು ತಲುಪಿದಾಗ, ನಾಲ್ಕು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಸುರಕ್ಷತೆಯ ದೃಷ್ಟಿಯಿಂದ ರೈಲಿನ ಉಳಿದ ಬೋಗಿಗಳನ್ನು ಬೇರ್ಪಡಿಸಲಾಯಿತು. ಅದೇ ಸಮಯದಲ್ಲಿ, ಬೆಂಕಿಯ ಸುದ್ದಿ ತಿಳಿದ ತಕ್ಷಣ, ಡಿಆರ್‌ಎಂ ದೆಹಲಿ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ.

ಇದನ್ನೂ ಓದಿ: ಪಾಕ್ ISI ಪರ ಬೇಹುಗಾರಿಕೆ: ಬ್ರಹ್ಮೋಸ್ ಮಾಜಿ ಎಂಜಿನಿಯರ್ ನಿಶಾಂತ್ ಅಗರ್ವಾಲ್‌ಗೆ ಜೀವಾವಧಿ ಶಿಕ್ಷೆ

ಮುಂಬೈನಿಂದ ಗೋರಖ್‌ಪುರಕ್ಕೆ ತೆರಳುತ್ತಿದ್ದ ಗೋದಾನ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

ಇತ್ತೀಚೆಗೆ ಮುಂಬೈನಿಂದ ಗೋರಖ್‌ಪುರಕ್ಕೆ ಹೋಗುತ್ತಿದ್ದ ಗೋದಾನ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿತ್ತು. ರೈಲು ಮುಂಬೈನಿಂದ ಹೊರಟು ಮಹಾರಾಷ್ಟ್ರದ ನಾಸಿಕ್ ರಸ್ತೆ ನಿಲ್ದಾಣದ ಬಳಿ ತಲುಪಿದಾಗ ಗೋಡಾನ್ (ಮುಂಬೈ ಎಲ್‌ಟಿಟಿ–ಗೋರಖ್‌ಪುರ) ಎಕ್ಸ್‌ಪ್ರೆಸ್‌ನ ಕೊನೆಯ ಲಗೇಜ್ ಬೋಗಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಅವಘಡದ ಬಗ್ಗೆ ಮಾಹಿತಿ ಬಂದ ಕೂಡಲೇ ಮುನ್ನೆಚ್ಚರಿಕೆ ಕ್ರಮವಾಗಿ ರೈಲಿನ ಉಳಿದ ಭಾಗವನ್ನು ಲಗೇಜ್ ವಿಭಾಗದಿಂದ ಬೇರ್ಪಡಿಸಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿಲ್ಲ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಆಗಮಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Mon, 3 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ