AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ, ನಾಲ್ವರು ಸಾವು; ಬಾರಾಬಂಕಿಯಲ್ಲಿ 6 ಮಂದಿ ದುರ್ಮರಣ

ಸ್ಥಳೀಯ ಪೊಲೀಸರು ಮತ್ತು ಸ್ವಯಂಸೇವಕರು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಲ್ವರನ್ನು ಬದುಕಿಸಲು ಸಾಧ್ಯವಾಗಲಿಲ್ಲ.

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ, ನಾಲ್ವರು ಸಾವು; ಬಾರಾಬಂಕಿಯಲ್ಲಿ 6 ಮಂದಿ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 16, 2022 | 9:31 AM

Share

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ಅಪಘಾತಕ್ಕೀಡಾದ ಕಾರಣ ನಾಲ್ವರು ಮೃತಪಟ್ಟು, 9ಮಂದಿ ಗಾಯಗೊಂಡ ದುರ್ಘಟನೆ ಮಹಾರಾಷ್ಟ್ರದ ವಾಶಿಮ್​ ಜಿಲ್ಲೆಯಲ್ಲಿ (Washim District) ನಡೆದಿದೆ. ಇವರೆಲ್ಲ ಒಂದು ಪಿಕ್​ಅಪ್​ ವಾಹನದಲ್ಲಿ ನಾಗ್ಪುರದಿಂದ ವಾಪಸ್​ ಬರುತ್ತಿದ್ದರು. ವಾಶಿಮ್ ಮತ್ತು ಶೆಲುಬಜಾರ್​ಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ನಿಂತಿದ್ದ ಟ್ರಕ್​​ಗೆ ಪಿಕ್​ಅಪ್​ ವಾಹನ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದಾಗಿ ವಾಶಿಮ್ ಎಸ್​​​ಪಿ ಬಚ್ಚನ್ ಸಿಂಗ್ ತಿಳಿಸಿದ್ದಾರೆ.

ಮೃತರು, ಗಾಯಗೊಂಡವರೆಲ್ಲ ವಾಶಿಮ್​ ಜಿಲ್ಲೆಯ ಶವಂಗಾ ಜೆಹಂಗೀರ್​ ಗ್ರಾಮದವರಾಗಿದ್ದಾರೆ. ನಿನ್ನೆ ರಾತ್ರಿ 8ಗಂಟೆ ಹೊತ್ತಿಗೆ ಅಪಘಾತ ನಡೆದಿದೆ. ಸ್ಥಳೀಯ ಪೊಲೀಸರು ಮತ್ತು ಸ್ವಯಂಸೇವಕರು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಲ್ವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಉಳಿದ 9 ಜನರಿಗೆ ಅಲ್ಲಿನ ಸಿವಿಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಬಚ್ಚನ್​ ಸಿಂಗ್​ ಮಾಹಿತಿ ನೀಡಿದ್ದಾರೆ.

ಬಾರಾಬಂಕಿ ಭೀಕರ ಅಪಘಾತ

ಇನ್ನೊಂದೆಡೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ನಡೆದಿದ್ದು, ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಕಾರು ಮತ್ತು ಕಂಟೇನರ್​​ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: ಕಾನನದ ಮಧ್ಯೆ ಪರಿಸರ ಸ್ನೇಹಿ ಸರ್ಕಾರಿ ಶಾಲೆ; ಪಾಠದ ಜತೆಗೆ ಹೂವು, ತರಕಾರಿ, ಔಷಧಿಗಳ ಬೆಳೆಗೆ ಹೆಚ್ಚು ಒತ್ತು

Published On - 9:26 am, Wed, 16 February 22

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!