AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ, ನಾಲ್ವರು ಸಾವು; ಬಾರಾಬಂಕಿಯಲ್ಲಿ 6 ಮಂದಿ ದುರ್ಮರಣ

ಸ್ಥಳೀಯ ಪೊಲೀಸರು ಮತ್ತು ಸ್ವಯಂಸೇವಕರು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಲ್ವರನ್ನು ಬದುಕಿಸಲು ಸಾಧ್ಯವಾಗಲಿಲ್ಲ.

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ, ನಾಲ್ವರು ಸಾವು; ಬಾರಾಬಂಕಿಯಲ್ಲಿ 6 ಮಂದಿ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 16, 2022 | 9:31 AM

Share

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ಅಪಘಾತಕ್ಕೀಡಾದ ಕಾರಣ ನಾಲ್ವರು ಮೃತಪಟ್ಟು, 9ಮಂದಿ ಗಾಯಗೊಂಡ ದುರ್ಘಟನೆ ಮಹಾರಾಷ್ಟ್ರದ ವಾಶಿಮ್​ ಜಿಲ್ಲೆಯಲ್ಲಿ (Washim District) ನಡೆದಿದೆ. ಇವರೆಲ್ಲ ಒಂದು ಪಿಕ್​ಅಪ್​ ವಾಹನದಲ್ಲಿ ನಾಗ್ಪುರದಿಂದ ವಾಪಸ್​ ಬರುತ್ತಿದ್ದರು. ವಾಶಿಮ್ ಮತ್ತು ಶೆಲುಬಜಾರ್​ಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ನಿಂತಿದ್ದ ಟ್ರಕ್​​ಗೆ ಪಿಕ್​ಅಪ್​ ವಾಹನ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದಾಗಿ ವಾಶಿಮ್ ಎಸ್​​​ಪಿ ಬಚ್ಚನ್ ಸಿಂಗ್ ತಿಳಿಸಿದ್ದಾರೆ.

ಮೃತರು, ಗಾಯಗೊಂಡವರೆಲ್ಲ ವಾಶಿಮ್​ ಜಿಲ್ಲೆಯ ಶವಂಗಾ ಜೆಹಂಗೀರ್​ ಗ್ರಾಮದವರಾಗಿದ್ದಾರೆ. ನಿನ್ನೆ ರಾತ್ರಿ 8ಗಂಟೆ ಹೊತ್ತಿಗೆ ಅಪಘಾತ ನಡೆದಿದೆ. ಸ್ಥಳೀಯ ಪೊಲೀಸರು ಮತ್ತು ಸ್ವಯಂಸೇವಕರು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಲ್ವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಉಳಿದ 9 ಜನರಿಗೆ ಅಲ್ಲಿನ ಸಿವಿಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಬಚ್ಚನ್​ ಸಿಂಗ್​ ಮಾಹಿತಿ ನೀಡಿದ್ದಾರೆ.

ಬಾರಾಬಂಕಿ ಭೀಕರ ಅಪಘಾತ

ಇನ್ನೊಂದೆಡೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ನಡೆದಿದ್ದು, ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಕಾರು ಮತ್ತು ಕಂಟೇನರ್​​ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: ಕಾನನದ ಮಧ್ಯೆ ಪರಿಸರ ಸ್ನೇಹಿ ಸರ್ಕಾರಿ ಶಾಲೆ; ಪಾಠದ ಜತೆಗೆ ಹೂವು, ತರಕಾರಿ, ಔಷಧಿಗಳ ಬೆಳೆಗೆ ಹೆಚ್ಚು ಒತ್ತು

Published On - 9:26 am, Wed, 16 February 22

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು