AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ, ನಾಲ್ವರು ಸಾವು; ಬಾರಾಬಂಕಿಯಲ್ಲಿ 6 ಮಂದಿ ದುರ್ಮರಣ

ಸ್ಥಳೀಯ ಪೊಲೀಸರು ಮತ್ತು ಸ್ವಯಂಸೇವಕರು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಲ್ವರನ್ನು ಬದುಕಿಸಲು ಸಾಧ್ಯವಾಗಲಿಲ್ಲ.

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ, ನಾಲ್ವರು ಸಾವು; ಬಾರಾಬಂಕಿಯಲ್ಲಿ 6 ಮಂದಿ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 16, 2022 | 9:31 AM

Share

ಮದುವೆ ಮುಗಿಸಿ ಬರುತ್ತಿದ್ದವರ ವಾಹನ ಅಪಘಾತಕ್ಕೀಡಾದ ಕಾರಣ ನಾಲ್ವರು ಮೃತಪಟ್ಟು, 9ಮಂದಿ ಗಾಯಗೊಂಡ ದುರ್ಘಟನೆ ಮಹಾರಾಷ್ಟ್ರದ ವಾಶಿಮ್​ ಜಿಲ್ಲೆಯಲ್ಲಿ (Washim District) ನಡೆದಿದೆ. ಇವರೆಲ್ಲ ಒಂದು ಪಿಕ್​ಅಪ್​ ವಾಹನದಲ್ಲಿ ನಾಗ್ಪುರದಿಂದ ವಾಪಸ್​ ಬರುತ್ತಿದ್ದರು. ವಾಶಿಮ್ ಮತ್ತು ಶೆಲುಬಜಾರ್​ಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ನಿಂತಿದ್ದ ಟ್ರಕ್​​ಗೆ ಪಿಕ್​ಅಪ್​ ವಾಹನ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದಾಗಿ ವಾಶಿಮ್ ಎಸ್​​​ಪಿ ಬಚ್ಚನ್ ಸಿಂಗ್ ತಿಳಿಸಿದ್ದಾರೆ.

ಮೃತರು, ಗಾಯಗೊಂಡವರೆಲ್ಲ ವಾಶಿಮ್​ ಜಿಲ್ಲೆಯ ಶವಂಗಾ ಜೆಹಂಗೀರ್​ ಗ್ರಾಮದವರಾಗಿದ್ದಾರೆ. ನಿನ್ನೆ ರಾತ್ರಿ 8ಗಂಟೆ ಹೊತ್ತಿಗೆ ಅಪಘಾತ ನಡೆದಿದೆ. ಸ್ಥಳೀಯ ಪೊಲೀಸರು ಮತ್ತು ಸ್ವಯಂಸೇವಕರು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಲ್ವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಉಳಿದ 9 ಜನರಿಗೆ ಅಲ್ಲಿನ ಸಿವಿಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಬಚ್ಚನ್​ ಸಿಂಗ್​ ಮಾಹಿತಿ ನೀಡಿದ್ದಾರೆ.

ಬಾರಾಬಂಕಿ ಭೀಕರ ಅಪಘಾತ

ಇನ್ನೊಂದೆಡೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ನಡೆದಿದ್ದು, ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಕಾರು ಮತ್ತು ಕಂಟೇನರ್​​ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: ಕಾನನದ ಮಧ್ಯೆ ಪರಿಸರ ಸ್ನೇಹಿ ಸರ್ಕಾರಿ ಶಾಲೆ; ಪಾಠದ ಜತೆಗೆ ಹೂವು, ತರಕಾರಿ, ಔಷಧಿಗಳ ಬೆಳೆಗೆ ಹೆಚ್ಚು ಒತ್ತು

Published On - 9:26 am, Wed, 16 February 22

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ