AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿ ವಾಪಸ್​ ಬರುತ್ತಿದ್ದಾಗ ಭೀಕರ ಅಪಘಾತ; ನಾಲ್ವರು ಸಾವು

ಗಾಯಗೊಂಡ ಆರು ಮಂದಿಯಲ್ಲಿ ಮಹಿಳೆಯೊಬ್ಬರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರೂ ಸಂಜಯ್​ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Madhya Pradesh: ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿ ವಾಪಸ್​ ಬರುತ್ತಿದ್ದಾಗ ಭೀಕರ ಅಪಘಾತ; ನಾಲ್ವರು ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 25, 2021 | 1:27 PM

Share

ರೇವಾ: ಎಸ್​ಯುವಿ ವಾಹನ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ (Accident) ನಾಲ್ವರು ಮೃತಪಟ್ಟ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅದರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ರೇವಾದ ಸಮೀಪ ಎನ್​ಎಚ್​ 30 ಹೆದ್ದಾರಿಯಲ್ಲಿರುವ ಕಿತ್ವಾರಿಯಾ ಬೈಪಾಸ್​​ನಲ್ಲಿ ಆ್ಯಕ್ಸಿಡೆಂಟ್ ಆಗಿದೆ.

ಎಸ್​ಯುವಿ ವಾಹನದಲ್ಲಿ ಚಾಲಕ ಸೇರಿ ಒಟ್ಟು 14 ಮಂದಿ ಪ್ರಯಾಣ ಮಾಡುತ್ತಿದ್ದರು. ಅದರಲ್ಲಿ 13 ವರ್ಷದ ಹುಡುಗಿ, 14 ವರ್ಷದ ಹುಡುಗ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರಕ್​ ಡಿಕ್ಕಿಯಾಗಿದ್ದರಿಂದ ಎಸ್​ಯುವಿ ಸಂಪೂರ್ಣವಾಗಿ ಜಖಂ ಆಗಿದೆ ಎಂದು ಚೋಹ್ರಾತಾ ಠಾಣೆ ಅಧಿಕಾರಿ ವಿ.ವಿ.ತಿವಾರಿ ಹೇಳಿದ್ದಾರೆ.  ಇನ್ನು ಎಸ್​ಯುವಿ ವಾಹನದಲ್ಲಿದ್ದವರು ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಿಂದ ತಮ್ಮ ಹುಟ್ಟೂರಾದ ಮಧ್ಯಪ್ರದೇಶದ ರೈಸನ್​ ಜಿಲ್ಲೆಗೆ ವಾಪಸ್​ ತೆರಳುತ್ತಿದ್ದರು. ಇವರೆಲ್ಲ ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳಿದವರಾಗಿದ್ದರು ಎಂದು ಹೇಳಲಾಗಿದೆ.

ಇನ್ನು ಗಾಯಗೊಂಡ ಆರು ಮಂದಿಯಲ್ಲಿ ಮಹಿಳೆಯೊಬ್ಬರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರೂ ಸಂಜಯ್​ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತವಾಗುತ್ತಿದ್ದಂತೆ ಟ್ರಕ್​ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಾಗಿದ್ದು, ಡ್ರೈವರ್​​ನನ್ನು ಶೀಘ್ರವೇ ಪತ್ತೆಹಚ್ಚಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಯುಪಿಎಸ್​ಸಿ 2020: 35ನೇ ಶ್ರೇಣಿಯಲ್ಲಿ ಪಾಸಾದ ಬೆಂಗಳೂರು ಮೂಲದ ಅಪರ್ಣಾ ರಮೇಶ್!

Amazon: ಊಹಿಸಲಾಗದಷ್ಟು ಡಿಸ್ಕೌಂಟ್: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್​ಗೆ ದಿನಾಂಕ ಫಿಕ್ಸ್

(Four dead, six injured as SUV collides with truck In Madhya Pradesh)

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?