AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Elections 2021: ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ, ವಿವಿಪ್ಯಾಟ್ ಪತ್ತೆ; ಚುನಾವಣಾ ಅಧಿಕಾರಿ ಅಮಾನತು

ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದ್ದು ಉಲುಬೆರಿಯಾ ಉತ್ತರ ವಿಧಾನಸಭಾ ಕ್ಷೇತ್ರದ ತುಲಸಿಬೆರಿಯಾ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ಚುನಾವಣಾ ಆಯೋಗದ ಸ್ಟಿಕ್ಕರ್ ಇರುವ ವಾಹನವೊಂದು ಟಿಎಂಸಿ ನಾಯಕನ ಮನೆ ಮುಂದೆ ನಿಂತಿರುವುದನ್ನು ಗಮನಿಸಿದ ಜನರು ಪ್ರತಿಭಟನೆ ಕೂಗಿದ್ದರು.

West Bengal Elections 2021: ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ, ವಿವಿಪ್ಯಾಟ್ ಪತ್ತೆ; ಚುನಾವಣಾ ಅಧಿಕಾರಿ ಅಮಾನತು
ಟಿಎಂಸಿ ನಾಯಕನ ಮನೆಯಲ್ಲಿ ಪತ್ತೆಯಾದ ಇವಿಎಂ ವಿವಿಪ್ಯಾಟ್
ರಶ್ಮಿ ಕಲ್ಲಕಟ್ಟ
|

Updated on:Apr 06, 2021 | 12:02 PM

Share

ಹೌರಾ : ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರೊಬ್ಬರ ಮನೆಯಲ್ಲಿ ನಾಲ್ಕು ಇವಿಎಂ ಮತ್ತು ವಿವಿಪ್ಯಾಟ್​ಗಳು ಪತ್ತೆಯಾಗಿದ್ದು, ಅದನ್ನು ತಂದಿರಿಸಿದ ಚುನಾವಣಾ ಅಧಿಕಾರಿಯನ್ನು ಮಂಗಳವಾರ ಅಮಾನತು ಮಾಡಲಾಗಿದೆ. ಉಲುಬೆರಿಯಾ ಉತ್ತರ ವಿಧಾನಸಭಾ ಕ್ಷೇತ್ರದ ತುಲಸಿಬೆರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದ್ದು ಮಂಗಳವಾರ ಮುಂಜಾನೆ ಚುನಾವಣಾ ಆಯೋಗದ ಸ್ಟಿಕ್ಕರ್ ಇರುವ ವಾಹನವೊಂದು ಟಿಎಂಸಿ ನಾಯಕನ ಮನೆ ಮುಂದೆ ನಿಂತಿರುವುದನ್ನು ಗಮನಿಸಿದ ಜನರು ಪ್ರತಿಭಟನೆ ಕೂಗಿದ್ದರು. ಆಮೇಲೆ ವಿಚಾರಿಸಿದಾಗ ಸೆಕ್ಟರ್ 17ರ ಚುನಾವಣಾ ಅಧಿಕಾರಿ ತಪನ್ ಸರ್ಕಾರ್ ಅವರು ಟಿಎಂಸಿ ನಾಯಕನ ಮನೆಗೆ ಇವಿಎಂ ತೆಗೆದುಕೊಂಡು ಬಂದಿದ್ದು, ರಾತ್ರಿ ಅಲ್ಲಿಯೇ ಉಳಿದುಕೊಂಡಿದ್ದರು ಎಂಬುದು ತಿಳಿದು ಬಂದಿದೆ.

ಇವಿಎಂ ಮತ್ತು ವಿವಿಪ್ಯಾಟ್​ಗಳನ್ನು ವಶಪಡಿಸಲಾಗಿದ್ದು, ಚುನಾವಣಾ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಈ ಇವಿಎಂಗಳನ್ನು ಇಂದು ಮತದಾನಕ್ಕೆ ಬಳಸಲಾಗುವುದಿಲ್ಲ. ಈ ಪ್ರಕರಣ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಯಿಂದ ವರದಿ ಕೇಳಲಾಗಿದೆ ಎಂದು ಹಿರಿಯ ಅಧಿಕಾರಿ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ನಾನು ಮತಗಟ್ಟೆಗೆ ತಲುಪುವ ಹೊತ್ತಿಗೆ ರಾತ್ರಿಯಾಗಿತ್ತು. ಅಷ್ಟೊತ್ತಿಗೆ ಮತಗಟ್ಟೆ ಮುಚ್ಚಿದ್ದರಿಂದ ನಾನು ನನ್ನ ಸಂಬಂಧಿಯ ಮನೆಗೆ ಹೋದೆ. ಬೇರೆ ಯಾವುದೇ ಸುರಕ್ಷಿತ ಸ್ಥಳ ಇಲ್ಲದ ಕಾರಣ ನಾನು ಅಲ್ಲಿ ಉಳಿದುಕೊಂಡೆ ಎಂದು ಚುನಾವಣಾ ಅಧಿಕಾರಿ ಹೇಳಿದ್ದಾರೆ.

ಟಿಎಂಸಿ ನಾಯಕನ ಮನೆ ಬಳಿ ಸ್ಥಳೀಯರು ಗುಂಪು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಚಾರಿಸಲು ಬಂದ ಬ್ಲಾಕ್ ಅಭಿವೃದ್ಧಿ ಅಧಿಕಾರಿಗೆ (BDO) ಪ್ರತಿಭಟನೆಕಾರರು ಮುತ್ತಿಗೆ ಹಾಕಿದ ಘಟನೆಯೂ ಇಲ್ಲಿ ನಡೆದಿದೆ.

ಇದೆಲ್ಲವೂ ಟಿಎಂಸಿ ಕಾರ್ಯತಂತ್ರ ಎಂದು ಬಿಜೆಪಿ ಅಭ್ಯರ್ಥಿ ಚಿರನ್ ಬೆರಾ ಆರೋಪಿಸಿದ್ದು, ಆರೋಪವನ್ನು ಟಿಎಂಸಿ ನಿರಾಕರಿಸಿದೆ. ಇದು ಟಿಎಂಸಿಯ ಹಳೇ ಚಾಳಿ, ಇದನ್ನು ಬಿಡಲು ಅವರಿಗೆ ಸಮಯ ಹಿಡಿಯುತ್ತದೆ. ಇದೀಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಅವರು ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಧಾನಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಗತಿಯಲ್ಲಿದೆ.

ಇದನ್ನೂ ಓದಿ: West Bengal Election 2021: ‘ದೀದಿ.. ಜನರ ನಂಬಿಕೆಗೆ ದ್ರೋಹ ಮಾಡಿದ ನೀವು ಸೋಲನ್ನು ಒಪ್ಪಿಕೊಳ್ಳಲೇಬೇಕು’-ಹೂಗ್ಲಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

(Four EVMs VVPATs found at Trinamool Congress leaders house in West Bengal poll official suspended)

Published On - 11:58 am, Tue, 6 April 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ