AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕ್ರೀಡಾಕೂಟ ಮುಗಿಸಿ ಮನೆಗೆ ಬರುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಕಾವೇರಿ ನದಿಯಲ್ಲಿ ಮುಳುಗಿ ಸಾವು

ನದಿ ದಡದ ಬಳಿ ನಿಂತಿದ್ದಾಗ ಒಬ್ಬ ವಿದ್ಯಾರ್ಥಿನಿ ನದಿಗೆ ಹಾರಿದ್ದು ಸುಳಿಗೆ ಸಿಲುಕಿದ್ದಾಳೆ. ಈ ವೇಳೆ ನದಿಯಲ್ಲಿ ನೀರಿನ ಹರಿವು ಜೋರಾಗಿತ್ತು. ತಮ್ಮ ಸ್ನೇಹಿತೆ ಹೆಣಗಾಡುತ್ತಿರುವುದನ್ನು ಕಂಡು ಇನ್ನೂ ಮೂವರು ವಿದ್ಯಾರ್ಥಿಗಳು ನದಿಗೆ ಹಾರಿದ್ದು ಅವರೂ ಸುಳಿಗೆ ಸಿಲುಕಿ ನಾಲ್ವರೂ ನದಿಯಲ್ಲಿ ಮುಳುಗಿದ್ದಾರೆ.

ತಮಿಳುನಾಡು: ಕ್ರೀಡಾಕೂಟ ಮುಗಿಸಿ ಮನೆಗೆ ಬರುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಕಾವೇರಿ ನದಿಯಲ್ಲಿ ಮುಳುಗಿ ಸಾವು
ನದಿ ದಡದಲ್ಲಿರುವ ಎಚ್ಚರಿಕೆ ಫಲಕ
Follow us
ರಶ್ಮಿ ಕಲ್ಲಕಟ್ಟ
|

Updated on: Feb 15, 2023 | 8:13 PM

ತಮಿಳುನಾಡಿನ (Tamil Nadu) ಕರೂರ್ ಜಿಲ್ಲೆಯ ಮಾಯನೂರಿನ ಕಾವೇರಿ ನದಿಯಲ್ಲಿ(Cauvery river)ಬುಧವಾರ ಸರ್ಕಾರಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಮುಳುಗಿ ಸಾವಿಗೀಡಾಗಿದ್ದಾರೆ. ಕರೂರ್ (Karur) ಜಿಲ್ಲಾ ಪೋಲೀಸರ ಪ್ರಕಾರ, ಪುದುಕೊಟ್ಟೈ ಜಿಲ್ಲೆಯ ವಿರಲಿಮಲೈ ಫಿಲಿಪ್ಪೂರ್ ಸರ್ಕಾರಿ ಮಾಧ್ಯಮಿಕ ಶಾಲೆಯ 15 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮಂಗಳವಾರ ತಿರುಚ್ಚಿ ಜಿಲ್ಲೆಯ ಥಾನಿಯಂನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಫುಟ್ಬಾಲ್ ಪಂದ್ಯದಲ್ಲಿ ಭಾಗವಹಿಸಲು ಹೋಗಿದ್ದರು. ಬುಧವಾರ ಕ್ರೀಡಾಕೂಟ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಹಿಂತಿರುಗುವ ಮಾರ್ಗದಲ್ಲಿ ಮಾಯನೂರು ಅಣೆಕಟ್ಟು ನೋಡಲು ಅವರು ತೆರಳಿದ್ದರು.

ನದಿ ದಡದ ಬಳಿ ನಿಂತಿದ್ದಾಗ ಒಬ್ಬ ವಿದ್ಯಾರ್ಥಿನಿ ನದಿಗೆ ಹಾರಿದ್ದು ಸುಳಿಗೆ ಸಿಲುಕಿದ್ದಾಳೆ. ಈ ವೇಳೆ ನದಿಯಲ್ಲಿ ನೀರಿನ ಹರಿವು ಜೋರಾಗಿತ್ತು. ತಮ್ಮ ಸ್ನೇಹಿತೆ ಹೆಣಗಾಡುತ್ತಿರುವುದನ್ನು ಕಂಡು ಇನ್ನೂ ಮೂವರು ವಿದ್ಯಾರ್ಥಿಗಳು ನದಿಗೆ ಹಾರಿದ್ದು ಅವರೂ ಸುಳಿಗೆ ಸಿಲುಕಿ ನಾಲ್ವರೂ ನದಿಯಲ್ಲಿ ಮುಳುಗಿದ್ದಾರೆ.

ಅಗ್ನಿಶಾಮಕ ದಳದ 20 ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಮೃತದೇಹಗಳನ್ನು ಹೊರತೆಗೆಯಲು ಸುಮಾರು ಎರಡು ಗಂಟೆಗಳ ಕಾಲ ಶ್ರಮಿಸಿದ್ದಾರೆ. ನದಿಯ ಪ್ರವಾಹ ಮತ್ತು ಆಳದ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಫಲಕವಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ:2008ರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಪುತ್ರ ಅಬ್ದುಲ್ಲಾ ಅಜಂ ಖಾನ್ ಶಾಸಕ ಸ್ಥಾನದಿಂದ ಅನರ್ಹ

ಮೃತರನ್ನು ತಮಿಳರಸಿ (7ನೇ ತರಗತಿ), ಇನಿಯಾ (6ನೇ ತರಗತಿ), ಲಾವಣ್ಯ (6ನೇ ತರಗತಿ) ಮತ್ತು ಸೋಫಿಯಾ (8ನೇ ತರಗತಿ) ಎಂದು ಗುರುತಿಸಲಾಗಿದೆ.

ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕರೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿ ಸಾಂತ್ವನ ಹೇಳಿದರು.

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್