AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salem: ಸೇಲಂನಲ್ಲಿ ನಾಲ್ಕು ಮನೆ ಕುಸಿತ; ಅವಶೇಷಗಳಡಿ ಸಿಲುಕಿದ್ದ 13 ಮಂದಿ ರಕ್ಷಣೆ, ಇನ್ನೂ ನಾಲ್ಕು ಜನರು ಸಿಲುಕಿರುವ ಸಾಧ್ಯತೆ

Tamil Nadu: ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಾಲ್ಪಟ್ಟಿಯಲ್ಲಿ ನಾಲ್ಕು ಮನೆಗಳು ಕುಸಿದುಬಿದ್ದಿದ್ದು, ಸುಮಾರು 17 ಜನರು ಅದರ ಅಡಿ ಸಿಲುಕಿದ್ದಾರೆ. ತೆರವು ಕಾರ್ಯಾಚರಣೆ ನಡೆಯುತ್ತಿದೆ.

Salem: ಸೇಲಂನಲ್ಲಿ ನಾಲ್ಕು ಮನೆ ಕುಸಿತ; ಅವಶೇಷಗಳಡಿ ಸಿಲುಕಿದ್ದ 13 ಮಂದಿ ರಕ್ಷಣೆ, ಇನ್ನೂ ನಾಲ್ಕು ಜನರು ಸಿಲುಕಿರುವ ಸಾಧ್ಯತೆ
ಕುಸಿದಿರುವ ಮನೆಗಳ ಮುಂದೆ ನೆರೆದಿರುವ ಸ್ಥಳೀಯರು (Credits: ANI)
Follow us
TV9 Web
| Updated By: shivaprasad.hs

Updated on:Nov 23, 2021 | 1:18 PM

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಾಲ್ಪಟ್ಟಿಯಲ್ಲಿ ಮಂಗಳವಾರ ನಾಲ್ಕು ಮನೆಗಳು ಕುಸಿದು ಬಿದ್ದಿವೆ. ಮನೆಗಳ ಅವಶೇಷಗಳಡಿ ಕನಿಷ್ಠ 17 ಮಂದಿ ಸಿಲುಕಿಕೊಂಡಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಇದುವರೆಗೆ 13 ಜನರನ್ನು ರಕ್ಷಿಸಲಾಗಿದೆ. ಆದರೆ ಇನ್ನೂ 4 ಜನ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ. ಅಗ್ನಿಶಾಮಕ ಮತ್ತು ಇತರ ತುರ್ತು ಸೇವೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಥಳೀಯರು, ನಾಲ್ಕು ಮನೆಗಳು ಕುಸಿಯುವ ಮೊದಲು ದೊಡ್ಡ ಶಬ್ದ ಕೇಳಿಸಿತು. ಅವುಗಳು ಕೆಲವೇ ಸೆಕೆಂಡುಗಳಲ್ಲಿ ನೆಲಸಮವಾಗಿವೆ ಎಂದಿದ್ದಾರೆ.

ಮನೆಗಳಲ್ಲಿ ವಾಸಿಸುವವರಲ್ಲಿ ಒಬ್ಬರು ಅಗ್ನಿಶಾಮಕ ದಳದ ಅಧಿಕಾರಿಯಾಗಿದ್ದಾರೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಎಎನ್​ಐ ಟ್ವೀಟ್ ಮಾಡಿದ್ದು, ‘ಭಾರಿ ಮಳೆಯಿಂದ ಕರುಂಗಾಲ್ಪಟ್ಟಿಯಲ್ಲಿ ಮನೆಗಳು ಕುಸಿದಿವೆ’ ಎಂದು ಹೇಳಿದೆ. ಘಟನೆಯ ಕುರಿತ ಮಾಹಿತಿಗಳು ಇನ್ನಷ್ಟೇ ಸಂಪೂರ್ಣವಾಗಿ ಲಭ್ಯವಾಗಬೇಕಿದೆ.

ಎಎನ್ಐ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನವೆಂಬರ್ 23 ಮತ್ತು 24 ರಂದು ತಮಿಳುನಾಡಿಗೆ ಹಳದಿ ಅಲರ್ಟ್ ಮತ್ತು ನವೆಂಬರ್ 25 ಮತ್ತು 26 ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಮೂಲಕ ಭಾರಿ ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ:

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸಿಕೊಳ್ಳಲು ನೀವೇನು ಮಾಡುತ್ತಿದ್ದೀರಿ?: ತ್ರಿಪುರಾ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಆಂಧ್ರ ಪ್ರದೇಶದಲ್ಲಿನ ಅನ್ನಮಯ್ಯ ಡ್ಯಾಂನಿಂದ ದಿಢೀರ್​ ಪ್ರವಾಹ;18 ಜನರು ಜಲಸಮಾಧಿ, ಅನೇಕರು ನಾಪತ್ತೆ

Published On - 12:49 pm, Tue, 23 November 21

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ