AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salem: ಸೇಲಂನಲ್ಲಿ ನಾಲ್ಕು ಮನೆ ಕುಸಿತ; ಅವಶೇಷಗಳಡಿ ಸಿಲುಕಿದ್ದ 13 ಮಂದಿ ರಕ್ಷಣೆ, ಇನ್ನೂ ನಾಲ್ಕು ಜನರು ಸಿಲುಕಿರುವ ಸಾಧ್ಯತೆ

Tamil Nadu: ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಾಲ್ಪಟ್ಟಿಯಲ್ಲಿ ನಾಲ್ಕು ಮನೆಗಳು ಕುಸಿದುಬಿದ್ದಿದ್ದು, ಸುಮಾರು 17 ಜನರು ಅದರ ಅಡಿ ಸಿಲುಕಿದ್ದಾರೆ. ತೆರವು ಕಾರ್ಯಾಚರಣೆ ನಡೆಯುತ್ತಿದೆ.

Salem: ಸೇಲಂನಲ್ಲಿ ನಾಲ್ಕು ಮನೆ ಕುಸಿತ; ಅವಶೇಷಗಳಡಿ ಸಿಲುಕಿದ್ದ 13 ಮಂದಿ ರಕ್ಷಣೆ, ಇನ್ನೂ ನಾಲ್ಕು ಜನರು ಸಿಲುಕಿರುವ ಸಾಧ್ಯತೆ
ಕುಸಿದಿರುವ ಮನೆಗಳ ಮುಂದೆ ನೆರೆದಿರುವ ಸ್ಥಳೀಯರು (Credits: ANI)
TV9 Web
| Updated By: shivaprasad.hs|

Updated on:Nov 23, 2021 | 1:18 PM

Share

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಾಲ್ಪಟ್ಟಿಯಲ್ಲಿ ಮಂಗಳವಾರ ನಾಲ್ಕು ಮನೆಗಳು ಕುಸಿದು ಬಿದ್ದಿವೆ. ಮನೆಗಳ ಅವಶೇಷಗಳಡಿ ಕನಿಷ್ಠ 17 ಮಂದಿ ಸಿಲುಕಿಕೊಂಡಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಇದುವರೆಗೆ 13 ಜನರನ್ನು ರಕ್ಷಿಸಲಾಗಿದೆ. ಆದರೆ ಇನ್ನೂ 4 ಜನ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ. ಅಗ್ನಿಶಾಮಕ ಮತ್ತು ಇತರ ತುರ್ತು ಸೇವೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಥಳೀಯರು, ನಾಲ್ಕು ಮನೆಗಳು ಕುಸಿಯುವ ಮೊದಲು ದೊಡ್ಡ ಶಬ್ದ ಕೇಳಿಸಿತು. ಅವುಗಳು ಕೆಲವೇ ಸೆಕೆಂಡುಗಳಲ್ಲಿ ನೆಲಸಮವಾಗಿವೆ ಎಂದಿದ್ದಾರೆ.

ಮನೆಗಳಲ್ಲಿ ವಾಸಿಸುವವರಲ್ಲಿ ಒಬ್ಬರು ಅಗ್ನಿಶಾಮಕ ದಳದ ಅಧಿಕಾರಿಯಾಗಿದ್ದಾರೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಎಎನ್​ಐ ಟ್ವೀಟ್ ಮಾಡಿದ್ದು, ‘ಭಾರಿ ಮಳೆಯಿಂದ ಕರುಂಗಾಲ್ಪಟ್ಟಿಯಲ್ಲಿ ಮನೆಗಳು ಕುಸಿದಿವೆ’ ಎಂದು ಹೇಳಿದೆ. ಘಟನೆಯ ಕುರಿತ ಮಾಹಿತಿಗಳು ಇನ್ನಷ್ಟೇ ಸಂಪೂರ್ಣವಾಗಿ ಲಭ್ಯವಾಗಬೇಕಿದೆ.

ಎಎನ್ಐ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನವೆಂಬರ್ 23 ಮತ್ತು 24 ರಂದು ತಮಿಳುನಾಡಿಗೆ ಹಳದಿ ಅಲರ್ಟ್ ಮತ್ತು ನವೆಂಬರ್ 25 ಮತ್ತು 26 ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಮೂಲಕ ಭಾರಿ ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ:

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸಿಕೊಳ್ಳಲು ನೀವೇನು ಮಾಡುತ್ತಿದ್ದೀರಿ?: ತ್ರಿಪುರಾ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಆಂಧ್ರ ಪ್ರದೇಶದಲ್ಲಿನ ಅನ್ನಮಯ್ಯ ಡ್ಯಾಂನಿಂದ ದಿಢೀರ್​ ಪ್ರವಾಹ;18 ಜನರು ಜಲಸಮಾಧಿ, ಅನೇಕರು ನಾಪತ್ತೆ

Published On - 12:49 pm, Tue, 23 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ