AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salem: ಸೇಲಂನಲ್ಲಿ ನಾಲ್ಕು ಮನೆ ಕುಸಿತ; ಅವಶೇಷಗಳಡಿ ಸಿಲುಕಿದ್ದ 13 ಮಂದಿ ರಕ್ಷಣೆ, ಇನ್ನೂ ನಾಲ್ಕು ಜನರು ಸಿಲುಕಿರುವ ಸಾಧ್ಯತೆ

Tamil Nadu: ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಾಲ್ಪಟ್ಟಿಯಲ್ಲಿ ನಾಲ್ಕು ಮನೆಗಳು ಕುಸಿದುಬಿದ್ದಿದ್ದು, ಸುಮಾರು 17 ಜನರು ಅದರ ಅಡಿ ಸಿಲುಕಿದ್ದಾರೆ. ತೆರವು ಕಾರ್ಯಾಚರಣೆ ನಡೆಯುತ್ತಿದೆ.

Salem: ಸೇಲಂನಲ್ಲಿ ನಾಲ್ಕು ಮನೆ ಕುಸಿತ; ಅವಶೇಷಗಳಡಿ ಸಿಲುಕಿದ್ದ 13 ಮಂದಿ ರಕ್ಷಣೆ, ಇನ್ನೂ ನಾಲ್ಕು ಜನರು ಸಿಲುಕಿರುವ ಸಾಧ್ಯತೆ
ಕುಸಿದಿರುವ ಮನೆಗಳ ಮುಂದೆ ನೆರೆದಿರುವ ಸ್ಥಳೀಯರು (Credits: ANI)
TV9 Web
| Edited By: |

Updated on:Nov 23, 2021 | 1:18 PM

Share

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಾಲ್ಪಟ್ಟಿಯಲ್ಲಿ ಮಂಗಳವಾರ ನಾಲ್ಕು ಮನೆಗಳು ಕುಸಿದು ಬಿದ್ದಿವೆ. ಮನೆಗಳ ಅವಶೇಷಗಳಡಿ ಕನಿಷ್ಠ 17 ಮಂದಿ ಸಿಲುಕಿಕೊಂಡಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಇದುವರೆಗೆ 13 ಜನರನ್ನು ರಕ್ಷಿಸಲಾಗಿದೆ. ಆದರೆ ಇನ್ನೂ 4 ಜನ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ. ಅಗ್ನಿಶಾಮಕ ಮತ್ತು ಇತರ ತುರ್ತು ಸೇವೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಥಳೀಯರು, ನಾಲ್ಕು ಮನೆಗಳು ಕುಸಿಯುವ ಮೊದಲು ದೊಡ್ಡ ಶಬ್ದ ಕೇಳಿಸಿತು. ಅವುಗಳು ಕೆಲವೇ ಸೆಕೆಂಡುಗಳಲ್ಲಿ ನೆಲಸಮವಾಗಿವೆ ಎಂದಿದ್ದಾರೆ.

ಮನೆಗಳಲ್ಲಿ ವಾಸಿಸುವವರಲ್ಲಿ ಒಬ್ಬರು ಅಗ್ನಿಶಾಮಕ ದಳದ ಅಧಿಕಾರಿಯಾಗಿದ್ದಾರೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಎಎನ್​ಐ ಟ್ವೀಟ್ ಮಾಡಿದ್ದು, ‘ಭಾರಿ ಮಳೆಯಿಂದ ಕರುಂಗಾಲ್ಪಟ್ಟಿಯಲ್ಲಿ ಮನೆಗಳು ಕುಸಿದಿವೆ’ ಎಂದು ಹೇಳಿದೆ. ಘಟನೆಯ ಕುರಿತ ಮಾಹಿತಿಗಳು ಇನ್ನಷ್ಟೇ ಸಂಪೂರ್ಣವಾಗಿ ಲಭ್ಯವಾಗಬೇಕಿದೆ.

ಎಎನ್ಐ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನವೆಂಬರ್ 23 ಮತ್ತು 24 ರಂದು ತಮಿಳುನಾಡಿಗೆ ಹಳದಿ ಅಲರ್ಟ್ ಮತ್ತು ನವೆಂಬರ್ 25 ಮತ್ತು 26 ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಮೂಲಕ ಭಾರಿ ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ:

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸಿಕೊಳ್ಳಲು ನೀವೇನು ಮಾಡುತ್ತಿದ್ದೀರಿ?: ತ್ರಿಪುರಾ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಆಂಧ್ರ ಪ್ರದೇಶದಲ್ಲಿನ ಅನ್ನಮಯ್ಯ ಡ್ಯಾಂನಿಂದ ದಿಢೀರ್​ ಪ್ರವಾಹ;18 ಜನರು ಜಲಸಮಾಧಿ, ಅನೇಕರು ನಾಪತ್ತೆ

Published On - 12:49 pm, Tue, 23 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ