AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಭೀಕರ ಕಾರ್ ಅಪಘಾತ; ಭಾರತ ಮೂಲದ ಒಂದೇ ಕುಟುಂಬದ ನಾಲ್ವರ ಸಾವು

Indian origin family members killed in accident in US: ಅಮೆರಿಕದ ಡಾಲಸ್​ನಲ್ಲಿ ವಾಸವಾಗಿದ್ದ ಹೈದರಾಬಾದ್ ಮೂಲದ ಕುಟುಂಬದ ನಾಲ್ವರು ವ್ಯಕ್ತಿಗಳು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಅಟ್ಲಾಂಟಾದಿಂದ ಡಾಲಸ್​​ಗೆ ಕಾರಿನಲ್ಲಿ ಬರುತ್ತಿದ್ದಾಗ ಅಲಬಾಮದ ಗ್ರೀನ್ ಕೌಂಟಿ ಬಳಿ ಅಪಘಾತವಾಗಿದೆ. ವೇಗವಾಗಿ ಬಂದ ಮಿನಿ ಟ್ರಕ್​​ವೊಂದು ನೇರವಾಗಿ ಗುದ್ದಿದಾಗ ಇವರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಅಮೆರಿಕದಲ್ಲಿ ಭೀಕರ ಕಾರ್ ಅಪಘಾತ; ಭಾರತ ಮೂಲದ ಒಂದೇ ಕುಟುಂಬದ ನಾಲ್ವರ ಸಾವು
ವೆಂಕಟ್ ಬೇಜುಗಮ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 08, 2025 | 12:30 PM

Share

ನವದೆಹಲಿ, ಜುಲೈ 8: ಅಮೆರಿಕದ ಅಲಬಾಮ ರಾಜ್ಯದ ಗ್ರೀನ್ ಕೌಂಟಿಯಲ್ಲಿ (Green county, Alabama) ಕಳೆದ ವಾರಾಂತ್ಯದಲ್ಲಿ ಸಂಭವಿಸಿದ ಭೀಕರ ಕಾರ್ ಅಪಘಾತದಲ್ಲಿ ಭಾರತ ಮೂಲದ ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಎಲ್ಲಾ ನಾಲ್ವರೂ ಕೂಡ ಹೈದರಾಬಾದ್ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಅಟ್ಲಾಂಟಾದಲ್ಲಿ ಸಂಬಂಧಿಕರನ್ನು ಭೇಟಿ ಮಾಡಿ ಡಾಲಸ್​ನಲ್ಲಿರುವ ತಮ್ಮ ನಿವಾಸಕ್ಕೆ ಮರಳುತ್ತಿರುವಾಗ, ಮಾರ್ಗಮಧ್ಯೆ ಶನಿವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

ವೆಂಕಟ್ ಬೇಜುಗಮ್, ಅವರ ಪತ್ನಿ ತೇಜಸ್ವಿನಿ ಚೊಲ್ಲೇತಿ, ಹಾಗೂ ಅವರ ಇಬ್ಬರು ಮಕ್ಕಳಾದ ಸಿದ್ಧಾರ್ಥ್ ಮತ್ತು ಮೃದಾ ಬೇಜುಗಮ್ ಅವರು ಮೃತ ನಾಲ್ವರು.

ಇದನ್ನೂ ಓದಿ: ಟ್ರಂಪ್ ಟ್ಯಾರಿಫ್​ನಿಂದ ಸದ್ಯ ಬಚಾವಾದ ಭಾರತ; ಅಮೆರಿಕದಿಂದ 14 ದೇಶಗಳ ಮೇಲೆ ಆಮದು ಸುಂಕ ಹೇರಿಕೆ

ಗ್ರೀನ್ ಕೌಂಟಿ ಬಳಿ ಈ ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಮಿನಿ ಟ್ರಕ್​​ವೊಂದು ನಿಗದಿತ ಲೇನ್ ಬಿಟ್ಟು ಬೇರೆ ಲೇನ್​​ನಲ್ಲಿ ಬಂದು ಇವರ ಕಾರಿಗೆ ಗುದ್ದಿದೆ. ಇದರ ಪರಿಣಾಮವಾಗಿ ಕಾರು ನಜ್ಜುಗುಜ್ಜಾಗಿ ಬೆಂಕಿ ಹೊತ್ತಿಕೊಂಡಿದೆ. ಎಲ್ಲಾ ನಾಲ್ವರೂ ಕೂಡ ಸುಟ್ಟು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೀವ್ರ ಮಟ್ಟದಲ್ಲಿ ದೇಹ ಸುಟ್ಟಿರುವುದರಿಂದ ಮೇಲ್ನೋಟಕ್ಕೆ ಚಹರೆ ಗುರುತು ಹಿಡಿಯಲು ಸಾಧ್ಯವಾಗಿಲ್ಲ. ಡಿಎನ್​​ಎ ಪರೀಕ್ಷೆ, ಹಲ್ಲಿನ ಪರೀಕ್ಷೆ ಸೇರಿದಂತೆ ಫೋರೆನ್ಸಿಕ್ ಪರೀಕ್ಷೆ ನಡೆಸಲಾಗುತ್ತಿದ್ದು, ಈ ನಾಲ್ವರ ಗುರುತು ಖಚಿತವಾದ ಬಳಿಕ ಸಂಬಂಧಿಕರಿಗೆ ಮೃತದೇಹಗಳನ್ನು ಒಪ್ಪಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ವಾಮಾಚಾರದ ಆರೋಪ; ಬಿಹಾರದ ಪುರ್ನಿಯಾದಲ್ಲಿ ಒಂದೇ ಕುಟುಂಬದ ಐವರ ಸಜೀವ ದಹನ

ವೆಂಕಟ್ ಬೇಜುಗಮ್ ಕುಟುಂಬದವರು ಡಾಲಸ್​ನ ಔಬ್ರೇ ಪಟ್ಟಣದ ಸಟ್ಟನ್ ಫೀಲ್ಡ್ಸ್ ಎಂಬಲ್ಲಿ ವಾಸವಿದ್ದದರು. ಟೀಮ್ ಏಡ್ ಎನ್ನುವ ಸಮಾಜ ಸೇವಾ ಸಂಸ್ಥೆಯು ಮೃತ ಕುಟುಂಬದ ಸಂಬಂಧಿಕರ ನೆರವಿಗೆ ಧಾವಿಸಿದ್ದು, ಮೃತದೇಹಗಳನ್ನು ಹಿಂಪಡೆಯುವ ಕಾನೂನು ಕ್ರಮಗಳಲ್ಲಿ ಸಹಾಯವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:51 am, Tue, 8 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ