AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿಯಲ್ಲಿ ಬಿದ್ದಿದ್ದ ಮಿಠಾಯಿ ತಿಂದು ನಾಲ್ವರು ಮಕ್ಕಳು ಸಾವು; ಪೊಲೀಸರಿಂದ ತನಿಖೆ ಪ್ರಾರಂಭ

ಘಟನೆಯ ಬಗ್ಗೆ ಪೊಲೀಸರು ಸಮಗ್ರವಾಗಿ ಮಾಹಿತಿ ನೀಡಿದ್ದಾರೆ. ಸಿನ್ಸಾಯಿ ಗ್ರಾಮದಲ್ಲಿ ಈ ಎಲ್ಲ ಮಕ್ಕಳೂ ಒಟ್ಟಾಗಿ ಮನೆಯ ಹೊರಗೆ ಆಡುತ್ತಿದ್ದರು. ಇವರ ಪಾಲಕರೆಲ್ಲ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದಿನಗೂಲಿಯವರು. ಬೆಳಗ್ಗೆದ್ದು ಅಲ್ಲೇ ಅಕ್ಕಪಕ್ಕದ ಪ್ರದೇಶಗಳಿಗೆ ಕೆಲಸಕ್ಕೆಂದು ತೆರಳುತ್ತಾರೆ. 

ರಸ್ತೆ ಬದಿಯಲ್ಲಿ ಬಿದ್ದಿದ್ದ ಮಿಠಾಯಿ ತಿಂದು ನಾಲ್ವರು ಮಕ್ಕಳು ಸಾವು; ಪೊಲೀಸರಿಂದ ತನಿಖೆ ಪ್ರಾರಂಭ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 23, 2022 | 4:46 PM

Share

ಸಿಹಿ ಮಿಠಾಯಿ ಅಂದರೆ ಇಷ್ಟಪಡದ ಮಕ್ಕಳು ತೀರ ಕಡಿಮೆ. ಪುಟ್ಟಪುಟ್ಟ ಚಾಕಲೇಟ್​ಗಳಂತೆ ಇರುವ ಇವುಗಳನ್ನು ನೋಡಿದರೆ ಅದರಲ್ಲೂ ಚಿಕ್ಕಚಿಕ್ಕ ಮಕ್ಕಳಂತೂ ಆಸೆಯಿಂದ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತವೆ. ಆದರೆ ಇಂಥ ಸಿಹಿ ಮಿಠಾಯಿಯಿಂದಲೇ ನಾಲ್ವರು ಮಕ್ಕಳ ಪ್ರಾಣ ಹೋದ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.  ಇವರೆಲ್ಲ ಕುಶಿನಗರದ ಸಿನ್ಸಾಯಿ ಗ್ರಾಮದ ಮಕ್ಕಳು. ತಮ್ಮ ಮನೆ ಸಮೀಪದ ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಮಿಠಾಯಿಗಳನ್ನು ಹೆಕ್ಕಿ ತಿಂದಿದ್ದಾರೆ. ಇವರೆಲ್ಲರೂ ಕೂಡ ಏಳು ವರ್ಷಕ್ಕಿಂತಲೂ ಕಡಿಮೆ ವಯಸ್ಸು. ದಾರಿಯಲ್ಲಿ ಬಿದ್ದಿದೆ, ಹಾಗೆಲ್ಲ ಹೆಕ್ಕಿ ತಿನ್ನಬಾರದು ಎಂದು ಗೊತ್ತಾಗದೆ, ತುಂಬ ಖುಷಿಯಿಂದ ತಿಂದು ಬಿಟ್ಟಿದ್ದಾರೆ. ಆದರೆ ಅದಾದ ಕೆಲವೇ ಹೊತ್ತಲ್ಲಿ ಎಲ್ಲರ ಪ್ರಾಣವೂ ಹೋಗಿದೆ.

ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟಿದ್ದು, ಮಿಠಾಯಿಯ ಪೇಪರ್​​ನ್ನು ವಶಪಡಿಸಿಕೊಂಡಿದ್ದಾರೆ.  ಸ್ಥಳೀಯರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಯಾರೋ ಮಿಠಾಯಿಗಳಿಗೆ ವಿಷ ಲೇಪನ ಮಾಡಿ ಬಿಸಾಕಿದ್ದರಬೇಕು ಎಂಬ ಅನುಮಾನವನ್ನು ವ್ಯಕ್ತಪಡಿಸಿರುವ ಪೊಲೀಸರು ಎಲ್ಲ ಆಯಾಮಗಳನ್ನೂ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಸದ್ಯ ಮೃತ ಮಕ್ಕಳ ದೇಹವನ್ನು ಪೋಸ್ಟ್ ಮಾರ್ಟಮ್​​ಗೆ ಕಳಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಖಚಿತ ಮಾಹಿತಿ ಸಿಗಲಿದೆ ಎಂದು ಹೇಳಿದ್ದಾರೆ.

ಆಗಿದ್ದೇನು?

ಘಟನೆಯ ಬಗ್ಗೆ ಪೊಲೀಸರು ಸಮಗ್ರವಾಗಿ ಮಾಹಿತಿ ನೀಡಿದ್ದಾರೆ. ಸಿನ್ಸಾಯಿ ಗ್ರಾಮದಲ್ಲಿ ಈ ಎಲ್ಲ ಮಕ್ಕಳೂ ಒಟ್ಟಾಗಿ ಮನೆಯ ಹೊರಗೆ ಆಡುತ್ತಿದ್ದರು. ಇವರ ಪಾಲಕರೆಲ್ಲ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದಿನಗೂಲಿಯವರು. ಬೆಳಗ್ಗೆದ್ದು ಅಲ್ಲೇ ಅಕ್ಕಪಕ್ಕದ ಪ್ರದೇಶಗಳಿಗೆ ಕೆಲಸಕ್ಕೆಂದು ತೆರಳುತ್ತಾರೆ.  ಹಾಗೇ ಚಿಕ್ಕಮಕ್ಕಳು ಮನೆಯಲ್ಲಿ ಅಜ್ಜಿಯೊಂದಿಗೋ, ಅಕ್ಕಂದಿರೊಟ್ಟಿಗೋ ಇರುತ್ತಾರೆ. ಹಾಗೇ, ಇಂದೂ ಬೆಳಗ್ಗೆ ಪಾಲಕರು ಕೆಲಸಕ್ಕೆ ಹೋಗಿದ್ದರು. ಮಕ್ಕಳು ಆಟವಾಡುತ್ತಿದ್ದರು. ಇದೇ ವೇಳೆ ರಸ್ತೆ ಬದಿಯಲ್ಲಿ ಒಂದಷ್ಟು ಮಿಠಾಯಿ ಕಂಡು ಅದನ್ನು ಹೆಕ್ಕಿ ತಿಂದಿದ್ದಾರೆ. ಆದರೆ ಕೂಡಲೇ ಎಚ್ಚರ ತಪ್ಪಿ ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಮೂರ್ನಾಲ್ಕು ಜನ ಸೇರಿ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕಲ್ಲಿದ್ದಲು ಕೊರತೆ; ಆರ್​ಟಿಪಿಎಸ್​ನ 3 ವಿದ್ಯುತ್ ಉತ್ಪಾದನಾ ಘಟಕಗಳು ತಾತ್ಕಾಲಿಕ ಸ್ಥಗಿತ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?