AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಮನೆಯಿಂದ ನಾಲ್ಕು ಐಷಾರಾಮಿ ಕಾರು ನಾಪತ್ತೆ

ಜುಲೈ 22ರಂದು ಜಾರಿ ನಿರ್ದೇಶನಾಲಯಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ನಗದು ವಶಪಡಿಸಿಕೊಂಡಿತ್ತು

ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಮನೆಯಿಂದ ನಾಲ್ಕು ಐಷಾರಾಮಿ ಕಾರು ನಾಪತ್ತೆ
ಅರ್ಪಿತಾ ಮುಖರ್ಜಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 29, 2022 | 12:55 PM

Share

ಗುರುವಾರ ಪಶ್ಚಿಮ ಬಂಗಾಳ  ಸಚಿವ ಸಂಪುಟದಿಂದ ವಜಾಗೊಂಡಿರುವ  ಸಚಿವ ಪಾರ್ಥ ಚಟರ್ಜಿ(Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರ ಕೊಲ್ಕತ್ತಾದ ಡೈಮಂಡ್ ಸಿಟಿ ಕಾಂಪ್ಲೆಕ್ಸ್ ನಲ್ಲಿರುವ ಮನೆಯಿಂದ ನಾಲ್ಕು ಐಷಾರಾಮಿ ಕಾರುಗಳು ನಾಪತ್ತೆಯಾಗಿವೆ. ಬಲ್ಲಮೂಲಗಳ ಪ್ರಕಾರ, ಅರ್ಪಿತಾ ಅವರನ್ನು ಫ್ಲಾಟ್​ನಿಂದ ಬಂದಿಸಿದ ನಂತರ ಈ ಕಾರುಗಳು ನಾಪತ್ತೆಯಾಗಿವೆ ಎಂದು ಹೇಳಲಾಗಿದೆ. ಜುಲೈ 22ರಂದು ಜಾರಿ ನಿರ್ದೇಶನಾಲಯ (Enforcement Directorate ) ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ನಗದು ವಶಪಡಿಸಿಕೊಂಡಿತ್ತು. ಜಾರಿ ನಿರ್ದೇಶನಾಲಯವು 56 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಮತ್ತು 75 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದೆ. ಇದಾದ ನಂತರ ಇಡಿ 28.90 ಕೋಟಿ ನಗದು, 5 ಕೆಜಿಗಿಂತಲೂ ಹೆಚ್ಚು ಚಿನ್ನ ಮತ್ತು ಅರ್ಪಿತಾ ಮುಖರ್ಜಿ ಅವರ ಎರಡನೇ ಅಪಾರ್ಟ್ ಮೆಂಟ್ ನಿಂದ ಹಲವಾರು ದಾಖಲೆ ವಶ ಪಡಿಸಿ ಕೊಂಡಿದೆ.

ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಆರೋಪಿ ಪಾರ್ಥ ಚಟರ್ಜಿ ಅವರ ಆಪ್ತೆಯಾಗಿದ್ದಾರೆ ಅರ್ಪಿತಾ ಮುಖರ್ಜಿ. ಗ್ರೂಪ್ ಸಿ ಮತ್ತು ಸಿಡಿ, 9ನೇ ತರಗತಿಯಿಂದ 12 ನೇ ತರಗತಿಯ ಸಹಾಯಕ ಶಿಕ್ಷಕರು ಮತ್ತು ಪ್ರೈಮರಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಚಟರ್ಜಿ ಮೇಲೆ ಆರೋಪವಿದೆ.

ಇದನ್ನೂ ಓದಿ
Image
ಶಿಕ್ಷಕರ ನೇಮಕಾತಿ ಹಗರಣದ ಆರೋಪಿ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ವಜಾ; ಇಲ್ಲಿವರೆಗಿನ ಬೆಳವಣಿಗೆಗಳು
Image
Breaking ಪಶ್ಚಿಮ ಬಂಗಾಳದ ಸಚಿವ ಸಂಪುಟದಿಂದ ಪಾರ್ಥ ಚಟರ್ಜಿ ವಜಾ
Image
ನಮಗೆಲ್ಲರಿಗೂ ಅವಮಾನ ಮಾಡಿಬಿಟ್ಟರು: ಪಾರ್ಥ ಚಟರ್ಜಿ ಪ್ರಕರಣ ಬಗ್ಗೆ ಟಿಎಂಸಿ ವಕ್ತಾರ ಪ್ರತಿಕ್ರಿಯೆ
Image
Bengal School Jobs Scam: ಮನೆಯಲ್ಲಿ ಕೋಟ್ಯಂತರ ರೂ. ನೋಟುಗಳಿದ್ದರೂ ಅರ್ಪಿತಾ ಮುಖರ್ಜಿ 11,819 ರೂ. ಬಿಲ್ ಉಳಿಸಿಕೊಂಡಿದ್ದೇಕೆ?

ಅರ್ಪಿತಾ ಮನೆಯಿಂದ ವಶ ಪಡಿಸಿರುವ ಹಣ ಪಾರ್ಥ ಚಟರ್ಜಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಡೆದ ಹಣ ಎಂದು ಹೇಳಲಾಗುತ್ತಿದ್ದು, ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಯನ್ನು ಆಗಸ್ಟ್ 3ರ ವರೆಗೆ ಇಡಿ ವಶಕ್ಕೆ ತೆಗೆದುಕೊಂಡಿದೆ.

Published On - 12:37 pm, Fri, 29 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ