AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್​​ಕೌಂಟರ್​​: ಪಾಕಿಸ್ತಾನದ ಇಬ್ಬರು ಸೇರಿದಂತೆ ನಾಲ್ಕು ಉಗ್ರರ ಹತ್ಯೆ

ಕುಪ್ವಾರದಲ್ಲಿ ಉಗ್ರಗಾಮಿಗಳು ಮತ್ತು ಸಶಸ್ತ್ರ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಕುಲ್ಗಾಮ್‌ನಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್​​ಕೌಂಟರ್​​: ಪಾಕಿಸ್ತಾನದ ಇಬ್ಬರು ಸೇರಿದಂತೆ ನಾಲ್ಕು ಉಗ್ರರ ಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 19, 2022 | 10:05 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಾನುವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ (encounters) ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ(Kulgam) ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದು, ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಪ್ವಾರದಲ್ಲಿ ಉಗ್ರಗಾಮಿಗಳು ಮತ್ತು ಸಶಸ್ತ್ರ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಕುಲ್ಗಾಮ್‌ನಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ತಂಡವು ಕುಪ್ವಾರದ ಅರಣ್ಯದಲ್ಲಿ ಉಗ್ರ ಶೌಕತ್ ಅಹ್ಮದ್ ಶೇಖ್‌ನಿಂದ ಪಡೆದ ಮಾಹಿತಿ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ನ್ನು ಈ ಹಿಂದೆ ಬಂಧಿಸಲಾಗಿತ್ತು. ಅಡಗುತಾಣದ ಹುಡುಕಾಟದ ಸಂದರ್ಭದಲ್ಲಿ, ಉಗ್ರರು ಜಂಟಿ ಶೋಧನಾ ತಂಡದ ಮೇಲೆ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು, ಇದು ಎನ್‌ಕೌಂಟರ್‌ಗೆ ಕಾರಣವಾಯಿತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಆರಂಭಿಕ ಗುಂಡಿನ ಚಕಮಕಿಯಲ್ಲಿ, ಒಬ್ಬ ಉಗ್ರ ಹತ್ಯೆಯಾಗಿದ್ದಾನ. ನಂತರದ ಎನ್‌ಕೌಂಟರ್‌ನಲ್ಲಿ, ಇದುವರೆಗೆ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದಾರೆ. ಭಾರೀ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಹತ್ಯೆಯಾದ ಉಗ್ರರ ಗುರುತನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ ಅಥವಾ ಅಡಗುತಾಣಕ್ಕೆ “ಪಡೆಗಳನ್ನು ಮುನ್ನಡೆಸಿದ” ಬಂಧಿತ ಉಗ್ರರ ಮಾಹಿತಿಯನ್ನೂ ನೀಡಿಲ್ಲ.

ಇದನ್ನೂ ಓದಿ
Image
Encounter: ಪುಲ್ವಾಮಾದಲ್ಲಿ ಮೂವರು ಉಗ್ರರ ಎನ್​ಕೌಂಟರ್: ಈ ಪೈಕಿ ಒಬ್ಬ ಪೊಲೀಸ್ ಹತ್ಯೆಯ ಸಂಚು ರೂಪಿಸಿದ್ದವ
Image
Kulgam Encounter: ಕಾಶ್ಮೀರದ ಕುಲ್ಗಾಂನಲ್ಲಿ ಎನ್​ಕೌಂಟರ್; ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಹತ್ಯೆ
Image
Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ

ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸೇನೆಯ ಜಂಟಿ ತಂಡವು ಕುಲ್ಗಾಮ್‌ನ ಡಿ ಹೆಚ್ ಪೋರಾ ಗ್ರಾಮವನ್ನು ಸುತ್ತುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಂಟಿ ತಂಡವು ಗುರಿಯತ್ತ ಧಾವಿಸುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದರು. ನಂತರ ಪಡೆಗಳು ಪ್ರತಿದಾಳಿ ನಡೆಸಿದ್ದು, ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.

“ಈಗ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇದುವರೆಗೆ ಇಬ್ಬರು ಸ್ಥಳೀಯ ಭಯೋತ್ಪಾದಕರು ಹತರಾಗಿದ್ದಾರೆ. ಅವರನ್ನು ಶ್ರೀನಗರದ ಹಾರಿಸ್ ಶರೀಫ್ ಮತ್ತು ಕುಲ್ಗಾಮ್‌ನ ಜಾಕಿರ್ ಪದ್ದರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್