AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಗ್ಯಾಂಗ್ ರೇಪ್ ಪ್ರಕರಣ; ಅಪ್ರಾಪ್ತ ಆರೋಪಿಗಳಿಗೆ ಜಾಮೀನು

ಮೇ 28ರಂದು ಹೈದರಾಬಾದ್ ನ ಜುಬಿಲೀ ಹಿಲ್ಸ್ ನಲ್ಲಿ 17ರ ಹರೆಯದ ಯುವತಿಯನ್ನು ಕಾರಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿತ್ತು.

ಹೈದರಾಬಾದ್ ಗ್ಯಾಂಗ್ ರೇಪ್ ಪ್ರಕರಣ; ಅಪ್ರಾಪ್ತ ಆರೋಪಿಗಳಿಗೆ ಜಾಮೀನು
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 27, 2022 | 2:49 PM

Share

ಹೈದರಾಬಾದ್: ಹೈದರಾಬಾದ್ (Hyderabad) ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜೂನ್ ಮೊದಲ ವಾರದಲ್ಲಿ ಈ ಆರೋಪಿಗಳನ್ನು ಬಂಧಿಸಿ ಜುವೇನೆಲ್ ಹೋಂನಲ್ಲಿರಿಸಲಾಗಿತ್ತು. ತಿಂಗಳ ಹಿಂದೆ ಹೈದರಾಬಾದ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ತೆಲಂಗಾಣ ದಲ್ಲಿ ಭಾರೀ ಆಕ್ರೋಶ ಮಾತ್ರವಲ್ಲದೆ, ರಾಜಕೀಯ ಜಟಾಪಟಿಗೂ ಕಾರಣವಾಗಿತ್ತು. ಜುವೇನೇಲ್ ಜಸ್ಟೀಸ್ ಬೋರ್ಡ್ ಆರೋಪಿಗಳಿಗೆ ಜಾಮೀನು ನೀಡಿದೆ. ಪ್ರತಿ ತಿಂಗಳ ಮೊದಲ ಭಾನುವಾರ ಜಿಲ್ಲಾ ಪ್ರೊಬೇಷನ್ ಅಧಿಕಾರಿ ಮುಂದೆ ಹಾಜರಾತಿ ಹಾಕಬೇಕು, ತನಿಖಾ ಅಧಿಕಾರಿಗಳಿಗೆ ಸಹಕರಿಸಬೇಕು ಎಂಬ ಷರತ್ತು ಅಡಿಯಲ್ಲಿ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಅಪ್ರಾಪ್ತ, ಐದನೇ ಆರೋಪಿ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದು ಆತ ಇನ್ನೂ ಜುವೇನೇಲ್ ಹೋಂನಲ್ಲೇ ಇದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣದಲ್ಲಿ ಸಾದುದ್ದೀನ್ ಮಲಿಕ್ ಎಂಬಾತ ಮಾತ್ರ ಅಪ್ರಾಪ್ತನಲ್ಲ. ಅವನು ಇನ್ನೂ ಜೈಲಿನಲ್ಲಿದ್ದಾನೆ.

ಮೇ 28ರಂದು ಹೈದರಾಬಾದ್ ನ ಜುಬಿಲೀ ಹಿಲ್ಸ್ ನಲ್ಲಿ 17ರ ಹರೆಯದ ಯುವತಿಯನ್ನು ಕಾರಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತ ಅಪ್ರಾಪ್ತ ಆರೋಪಿಗಳು 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ರಾಜಕೀಯ ಪ್ರಭಾವಿ ಕುಟುಂಬದವರಾಗಿದ್ದಾರೆ.

ಪಬ್ ನಲ್ಲಿ ಪಾರ್ಟಿ ಮುಗಿದ ನಂತರ ಐದು ಯುವಕರಿರುವ ಕಾರಿಗೆ ಯುವತಿ ಹತ್ತಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದುಸಂತ್ರಸ್ತೆ ದೂರು ನೀಡಿದ್ದಳು. ಯುವತಿ ಜತೆ ಒಬ್ಬ ಹುಡುಗ ಕೆಟ್ಟದಾಗಿ ವರ್ತಿಸುತ್ತಿರುವುದು ವಿಡಿಯೊದಲ್ಲಿದ್ದರೂ ಆತ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ