AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಗ್ಯಾಂಗ್ ರೇಪ್ ಪ್ರಕರಣ; ಅಪ್ರಾಪ್ತ ಆರೋಪಿಗಳಿಗೆ ಜಾಮೀನು

ಮೇ 28ರಂದು ಹೈದರಾಬಾದ್ ನ ಜುಬಿಲೀ ಹಿಲ್ಸ್ ನಲ್ಲಿ 17ರ ಹರೆಯದ ಯುವತಿಯನ್ನು ಕಾರಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿತ್ತು.

ಹೈದರಾಬಾದ್ ಗ್ಯಾಂಗ್ ರೇಪ್ ಪ್ರಕರಣ; ಅಪ್ರಾಪ್ತ ಆರೋಪಿಗಳಿಗೆ ಜಾಮೀನು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 27, 2022 | 2:49 PM

Share

ಹೈದರಾಬಾದ್: ಹೈದರಾಬಾದ್ (Hyderabad) ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜೂನ್ ಮೊದಲ ವಾರದಲ್ಲಿ ಈ ಆರೋಪಿಗಳನ್ನು ಬಂಧಿಸಿ ಜುವೇನೆಲ್ ಹೋಂನಲ್ಲಿರಿಸಲಾಗಿತ್ತು. ತಿಂಗಳ ಹಿಂದೆ ಹೈದರಾಬಾದ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ತೆಲಂಗಾಣ ದಲ್ಲಿ ಭಾರೀ ಆಕ್ರೋಶ ಮಾತ್ರವಲ್ಲದೆ, ರಾಜಕೀಯ ಜಟಾಪಟಿಗೂ ಕಾರಣವಾಗಿತ್ತು. ಜುವೇನೇಲ್ ಜಸ್ಟೀಸ್ ಬೋರ್ಡ್ ಆರೋಪಿಗಳಿಗೆ ಜಾಮೀನು ನೀಡಿದೆ. ಪ್ರತಿ ತಿಂಗಳ ಮೊದಲ ಭಾನುವಾರ ಜಿಲ್ಲಾ ಪ್ರೊಬೇಷನ್ ಅಧಿಕಾರಿ ಮುಂದೆ ಹಾಜರಾತಿ ಹಾಕಬೇಕು, ತನಿಖಾ ಅಧಿಕಾರಿಗಳಿಗೆ ಸಹಕರಿಸಬೇಕು ಎಂಬ ಷರತ್ತು ಅಡಿಯಲ್ಲಿ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಅಪ್ರಾಪ್ತ, ಐದನೇ ಆರೋಪಿ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದು ಆತ ಇನ್ನೂ ಜುವೇನೇಲ್ ಹೋಂನಲ್ಲೇ ಇದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣದಲ್ಲಿ ಸಾದುದ್ದೀನ್ ಮಲಿಕ್ ಎಂಬಾತ ಮಾತ್ರ ಅಪ್ರಾಪ್ತನಲ್ಲ. ಅವನು ಇನ್ನೂ ಜೈಲಿನಲ್ಲಿದ್ದಾನೆ.

ಮೇ 28ರಂದು ಹೈದರಾಬಾದ್ ನ ಜುಬಿಲೀ ಹಿಲ್ಸ್ ನಲ್ಲಿ 17ರ ಹರೆಯದ ಯುವತಿಯನ್ನು ಕಾರಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತ ಅಪ್ರಾಪ್ತ ಆರೋಪಿಗಳು 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ರಾಜಕೀಯ ಪ್ರಭಾವಿ ಕುಟುಂಬದವರಾಗಿದ್ದಾರೆ.

ಪಬ್ ನಲ್ಲಿ ಪಾರ್ಟಿ ಮುಗಿದ ನಂತರ ಐದು ಯುವಕರಿರುವ ಕಾರಿಗೆ ಯುವತಿ ಹತ್ತಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದುಸಂತ್ರಸ್ತೆ ದೂರು ನೀಡಿದ್ದಳು. ಯುವತಿ ಜತೆ ಒಬ್ಬ ಹುಡುಗ ಕೆಟ್ಟದಾಗಿ ವರ್ತಿಸುತ್ತಿರುವುದು ವಿಡಿಯೊದಲ್ಲಿದ್ದರೂ ಆತ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?