AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಅಜ್ಮೀರ್‌ನಲ್ಲಿ ಟ್ಯಾಂಕರ್-ಟ್ರಕ್ ಡಿಕ್ಕಿ; 4 ಮಂದಿ ಸಜೀವ ದಹನ

ಅಕ್ಕಪಕ್ಕದ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಟ್ಯಾಂಕರ್ ಮತ್ತು ಟ್ರೇಲರ್‌ಗೆ ಬೆಂಕಿ ಹೊತ್ತಿಕೊಂಡ ನಂತರ ರಸ್ತೆಯನ್ನು ನಿರ್ಬಂಧಿಸಲಾಗಿದೆ.

ರಾಜಸ್ಥಾನದ ಅಜ್ಮೀರ್‌ನಲ್ಲಿ ಟ್ಯಾಂಕರ್-ಟ್ರಕ್ ಡಿಕ್ಕಿ; 4 ಮಂದಿ ಸಜೀವ ದಹನ
ಹೊತ್ತಿ ಉರಿದ ಟ್ಯಾಂಕರ್
ರಶ್ಮಿ ಕಲ್ಲಕಟ್ಟ
|

Updated on: Feb 17, 2023 | 2:33 PM

Share

ರಾಜಸ್ಥಾನದ ಅಜ್ಮೀರ್(Ajmer) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ(National Highway) ಗುರುವಾರ ರಾತ್ರಿ ಗ್ಯಾಸ್ ಟ್ಯಾಂಕರ್ ಟ್ರಕ್‌ಗೆ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯ ನಂತರ, ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ನಾಲ್ವರು ಸಜೀವ ದಹನವಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್‌ನಲ್ಲಿದ್ದ ಪೆಟ್ರೋಲಿಯಂ ಉತ್ಪನ್ನ ಹೊರೆಚೆಲ್ಲಿದ್ದು ಆ ಮೂಲಕ ಸಾಗುತ್ತಿದ್ದ ಇನ್ನೆರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದೆ.

ಅಕ್ಕಪಕ್ಕದ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಟ್ಯಾಂಕರ್ ಮತ್ತು ಟ್ರೇಲರ್‌ಗೆ ಬೆಂಕಿ ಹೊತ್ತಿಕೊಂಡ ನಂತರ ರಸ್ತೆಯನ್ನು ನಿರ್ಬಂಧಿಸಲಾಗಿದೆ.

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ. ಉಪವಿಭಾಗಾಧಿಕಾರಿ ಮೃದುಲ್ ಸಿಂಗ್, ಸದರ್ ಸರ್ಕಲ್ ಇನ್ಸ್‌ಪೆಕ್ಟರ್ ಚೆನಾರಾಮ್ ಬೇಡಾ, ಸರ್ಕಲ್ ಆಫೀಸರ್ ಮಸೂದ ಈಶ್ವರ್ ಸಿಂಗ್ ಯಾದವ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮುಂಬೈ: ಮಹಿಳೆಯ ಫೋನ್ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಅಗ್ನಿ ಅವಘಡದ ನಂತರ ಅಜ್ಮೀರ್ ಜಿಲ್ಲಾಧಿಕಾರಿ ಅಂಶದೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚುನಾರಾಮ್ ಜಾಟ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!